ಚಿಂತಲ್ ಬಸ್ತಿ

ಚಿಂತಲ್ ಬಸ್ತಿ ಚಿಂತಲ್ ಬಸ್ತಿ
ಬಡವರ ಬಗ್ಗರ ಅಗ್ಗದ ಆಸ್ತಿ
ಸ್ವರ್ಗಕ್ಕಿಂತಲೂ ನೀನೇ ಜಾಸ್ತಿ

ರಾಮುಡು ಭೀಮುಡು ಪರಮೇಶ್ವರುಡು
ಕಾಜಿಬಿ ಗೀಜೀಬಿ ಗೊರಿಬಿಗೆಲ್ಲಾ
ಎಲ್ಲರಿಗೂ ಇದು ಒಂದೇ ಮಾಡು
ಇರುವಂತೆಲ್ಲರಿಗೊಬ್ಬನೆ ಅಲ್ಲಾ!

ಆಚೆಗೆ ಬಯಲು ಈಚೆಗೆ ರೈಲು
ಕೈಕಾಲಿಟ್ಟಲ್ಲೆಲ್ಲಾ ಕೊಳಚೆ
ಆದರು ಬದುಕು ಸಾಗಲೆಬೇಕು
ಹೊಯ್ಯಲೆ ಬೇಕು ಬಂದರೆ ಉಚ್ಚೆ

ಚಿಂತಲ್ ಬಸ್ತಿ ಚಿಂತಲ್ ಬಸ್ತಿ
ಗತಿಯಿಲ್ಲದವರಿಗೆ ನೀನೇ ಆಸ್ತಿ

ಹಗಲೂ ಇರುಳೂ ಬೀದಿಗಳಲ್ಲಿ
ಘನ ಸರಕಾರದ ನಿಯಾನ್ ಬೆಳಕು
ಆಳುವ ಪಕ್ಷಕು ಆಳದ ಪಕ್ಷಕು
ಎಲ್ಲರಿಗೂ ಈ ಮತಗಳು ಬೇಕು

ತೆಲುಗು ದೇಶಂ ಭಾರತ ದೇಶಂ
ಇಂದಿರಾಗಾಂಧಿಯ ಕಾಂಗ್ರೆಸ್ ದೇಶಂ
ಯಾರೂ ಬಿಡರೈ ಈ ಅವಕಾಶಂ
ಸರ್ವರ ಮೈಮೇಲೂ ಆವೇಶಂ

ಚಿಂತಲ್ ಬಸ್ತಿ ಚಿಂತಲ್ ಬಸ್ತಿ
ಗತಿಯಿಲ್ಲದವರಿಗೆ ನೀನೇ ಆಸ್ತಿ
ಗತಿಯಿದ್ದವರಿಗು ನೀನೇ ಆಸ್ತಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಾರಿವಾಳಗಳು ಹಾರಿಹೋದವು
Next post ಘಾಟಿ ಹೆಂಗಸು

ಸಣ್ಣ ಕತೆ

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…