ಕೀರ್ತನೆ

ಯನ್ನ ತಲೆಯನ್ನ ಸೋರೆ ಮಾಡಿ
ಯನ್ನ ನರಗಳ ತಂತಿಮಾಡಿ
ನಿನ್ನ ಸ್ವರವನ್ನ ಯನ್ನಿಂದ ಧ್ವನಿಸಿ
ಗೊಂಬೆಯಾಟವಯ್ಯಾ ಎಂದು ಕುಣಿಸಿ
ಮಣಿಸಿ ದಣಿಸಿ
ದಾಸರ ದಾಸ ಚಪ್ರಾಸಿ ಮಾಡ್ಕೊ
ತಲೆಮೇಲೆ ಕೂತ್ಕೊ
ಯನ್ನ ನೆತ್ತರು ಕುದಿಸಿ ದಾಮರು ಮಾಡ್ಕೊ
ರೋಡಿಗೆ ಹಾಕ್ಕೊ
ಓಡ್ಸು ಅದರ್ಮೇಲೆ ನಿನ್ನ ಇಂಪಾಲಾ
ಯನ್ನ ಚರ್ಮವ ಚಪ್ಪಲಿ ಮಾಡ್ಕೊ
ಹಾಕಿಕೋ ತುಳ್ಕೊ

ಖಂಡವಿದಕೋ ಮಾಂಸವಿದಕೋ
ಬೇಕಾದ್ರೆ ಬೇಯಿಸ್ಕೊ
ಉಂಡು ತೇಗು ಕ್ಕೊ ಕ್ಕೋ
ತಗೋ ಯನ್ನ ಮೂಳೆ
ನಿನ್ನ ತ್ರಾಣಕ್ಕೆ ಒಳ್ಳೇದು
ಸೂಪು ಮಾಡಿ ಕುಡೀ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತಿರುಪ್ಪಾವೈ – ಆಂಡಾಳ್ ದೇವಿಯ ದಿವ್ಯಚರಿತ್ರೆ
Next post ಅಣ್ಣ ಬಾರೊ

ಸಣ್ಣ ಕತೆ

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…