ನಾಸಿಯಾ

ಕೆಫೇಟೇರಿಯಾದಲ್ಲಿ ಒಬ್ಬಳೇ ಇದ್ದಳು ಲಿಜಾ ಟೇಬಲ್ ಮುಂದೆ
ಕಾಫಿಗೆ ಹೇಳಿ ಸಿಗರೇಟು ಸೇದುತ್ತ
ಬಿಳಿಚಿದ ಕೈಬೆರಳುಗಳಿಂದ ಸನ್ನೆ ಮಾಡಿದಳು
ಹೋಗಿ ಅವಳ ಬಳಿ ಕುಳಿತೆ ನಕ್ಕಳು ಮೆಲ್ಲನೆ
ಸುಮ್ಮನೆ ಏನೇನೋ ಹೇಳಿದಳು ಈಗೀಗ
ಏಕೆ ದೂರಾ ಎಂದು ಕೇಳಿದ್ದಕ್ಕೆ ಕೆಲಸಾ ಅ೦ದೆ ಜೋಲುಮುಖ ಮಾಡಿ

ಮೂರು ತಿಂಗಳು ಎಂದಳು ಸಿಗರೇಟು ಹಚ್ಚಿ
ಹೂಂ ಎಂದೆ ತುಟಿಗಳೆಡೆಯಿಂದ
ಜಾಕಿಯ ಕೆಲಸ ಎಂದಳು ಹೊಗೆರಿಂಗು ಬಿಟ್ಟೆ
ಜಾಕಿಗೆ ಒಂದು ಬೇಬಿ ಬೇಕಂತೆ ಇಷ್ಟು ವರ್ಷದ ಮೇಲೆ
ಎಂದಳು ಮಜಾ ಅಂದೆ ಆಶ್ಚರ್ಯದಿಂದ ನೋಡಿದಳು
ಬೇರೇನೊ ನೆನಪಾಯ್ತು ಲಿಜಾ ಅಂದೆ

ಹೊರಗೆ ಮಳೆ ಬೀಳುತ್ತಿತ್ತು ಚಳಿಗಾಳಿ ಲಿಜಾಳ
ಸಣ್ಣಕೊಡೆಯಡಿಯಲ್ಲಿ ನಡೆದೆವು ಓಣಿದೀಪಗಳ ಕೆಳಗೆ
ಅವಳ ಸೊ೦ಟ ಬಳಸಿದೆ ಚಳಿ ಅಲ್ಲ ಎಂದಳು
ಅವಳ ಮೂರು ತಿಂಗಳ ಹೊಟ್ಟೆ ಮುಟ್ಟಿ ನೋಡಿದೆ
ಜಾಕಿಗೆ ಸೆನ್ಸ್‌ ಇಲ್ಲ ಎಂದಳು

ಲಿಜಾ ಬಾಗಿಲು ತೆರೆದು ಬಾತ್ ರೂಮಿಗೆ ಹೋಗಿ
ಸ್ಕರ್ಟ್‌ ಕಳಚಿ ನೈಟ್ ಗೌನು ಹಾಕಿ ಬಂದಳು
ಮಂಚದ ಮೇಲೆ ಕುಸಿದೆ ಪರಿಚಿತ ಹೆಣ್ಣ
ಪರಿಚಿತ ಹಾಸಿಗೆಯ ಪರಿಚಿತ ಬೆವರ ವಾಸನೆ ಈಗ
ಹೊಟ್ಟೆಯೊಳಗೆ ಕಪ್ಪೆಯ ಹಾಗೆ ನುಸುಳಿತು
ಆಕಳಿಸಿ ಮೈಮುರಿದು ಇದೀಗ ಎಲ್ಲಾ ಕಷ್ಟ
ಈ ಬೇಬಿಯ ಸಮಸ್ಯೆ ಎಂದಳು ಅಂಗಾತ ಮಲಗಿ
ಅಗ್ಗ ಪೌಡರಿನ ನಾಥ ಬುರುಗಿನ ನಾಧ ಡುಬ್ಬದ ಹಾಗೆ
ಬೆಳೆದಿತ್ತು ಈ ಬೇಸರ ಬೇರೆ ಗೊಣಗಿದೆ
ಹೂಂ ಎಂದು ಕೇಳಿದಳು ಕರಗಿಸು ಅಂದೆ
ಇಷ್ಟರ ಮೇಲೆ ಸ್ವಲ್ಪ ಕಷ್ಟ ಮೈಗೆ ತೊಂದರೆ ಎಂದಳು
ಈ ಚಕ್ರಬಿಂಬದ ಸುತ್ತ ಸುಳಿಯಲಾರೆ
ಇದನ್ನು ಭೇದಿಸಲಾರೆ
ನಿರ್ವೀರ್ಯ ನಾನು ಇದೆಲ್ಲಾ ಕೆಟ್ಟ ವಾಕರಿಕೆ
ಬೇಸರ ಬರಿಸುತ್ತದೆ ನನಗೆ-ಪ್ಲೀಸ್ ಗೌನು ಕೆಳಕ್ಕೆ ಸರಿಸು
ಇಲ್ಲಾ ಲೈಟು ಆರಿಸು ಲಿಜಾ ಅಂದೆ
ಏನೇನೊ ಕನವರಿಸುತ್ತೀರಿ ನಿದ್ದೆಯ ಮತ್ತು
ಸ್ವಲ್ಪ ಮಜಾ ಇರಲಿ ಎಂದು ನೆನೆದೆ ಸುಮ್ಮನೆ ಮಲಗಿ
ಈ ಚಳಿಗೆ ಎಂದು ನನ್ನ ಒಳಕ್ಕೆ ಸೆಳೆದು
ತಲೆತಡವಿ ಮಲಗಿದಳು-ಚಡಪಡಿಸಲಾರದೆ
ಬಿದ್ದೆ ಬೆಳಗಾಗುವುದನ್ನೆ ಕಾದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪತ್ರ – ೯
Next post ಬಸವನೆಂದರೆ ಒಂದು ವ್ಯಕ್ತಿಯಲ್ಲ

ಸಣ್ಣ ಕತೆ

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

cheap jordans|wholesale air max|wholesale jordans|wholesale jewelry|wholesale jerseys