ಸಾವು

ಅವನು ಹಾಗೆಯೆ
ಮಾತಿನಿಂದ ಮೈಥುನದವರೆಗೆ
ಎಲ್ಲವೂ ಹಿತಮಿತ
ತೂಕದ ವ್ಯವಹಾರ
ಅರವತ್ತರ ಇಳಿವಯಸ್ಸಿನಲ್ಲೂ
ಕಪ್ಪನೆಯ ಒತ್ತಾದ ಕೂದಲು
ಉಬ್ಬರಿಸದ ಹೊಟ್ಟೆ
ಸಂಯಮ ಫಲ

ಇವನದು
ಆತಿಯೆ ಆಡಂಬರ
ಮೋಸ ದಗಾ ವಂಚನೆಯಲಿ
ಹೆಚ್ಚು ಗೊಂದಲವಿಲ್ಲ
ತುಂಬಿದ ಸಂಸಾರ
ಹೆಣ್ಣು ಹೊನ್ನೂ ಮಣ್ಣಿನಲಿ
ಹೆಚ್ಚು ರುಚಿ
ಬಾಗಿದ ಬೆನ್ನು ಮಂಜು ಕಣ್ಣು
ಚಪಲವೇ ಬಲ

ಇದು-
ಮರದ ಹಾಗೆ ಬೆಳೆಯಿತು
ಜೀವ;
ನದಿಯ ಹಾಗೆ ಹರಿಯಿತು
ಭಾವ;
ಫಳ ಫಳ ಫಳ…
ಹೊಳೆದು ಹೋಯಿತು ಕಾಲ

ಅವರವರ ಮನೆಯಲಿ
ಗೊತ್ತಾದ ಸಮಯದಲಿ
ಯಾರೂ ಬಂದ ಹಾಗಿರಲಿಲ್ಲ
ಯಾರೂ ಹೋದ ಹಾಗಿರಲಿಲ್ಲ

ಆ ಕ್ಷಣವದು ತಲ್ಲಣವೊ?
ಆ ಕ್ಷಣವದು ರೋಮಾಂಚನವೊ?
ಹೇಳಲವರು…
ಇದ್ದಂತೆ ಇರಲಿಲ್ಲ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುಸ್ಸಂಜೆಯ ಮಿಂಚು – ೭
Next post ಪ್ರಾಣಕಾಂತ

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…