ಸಾವು

ಅವನು ಹಾಗೆಯೆ
ಮಾತಿನಿಂದ ಮೈಥುನದವರೆಗೆ
ಎಲ್ಲವೂ ಹಿತಮಿತ
ತೂಕದ ವ್ಯವಹಾರ
ಅರವತ್ತರ ಇಳಿವಯಸ್ಸಿನಲ್ಲೂ
ಕಪ್ಪನೆಯ ಒತ್ತಾದ ಕೂದಲು
ಉಬ್ಬರಿಸದ ಹೊಟ್ಟೆ
ಸಂಯಮ ಫಲ

ಇವನದು
ಆತಿಯೆ ಆಡಂಬರ
ಮೋಸ ದಗಾ ವಂಚನೆಯಲಿ
ಹೆಚ್ಚು ಗೊಂದಲವಿಲ್ಲ
ತುಂಬಿದ ಸಂಸಾರ
ಹೆಣ್ಣು ಹೊನ್ನೂ ಮಣ್ಣಿನಲಿ
ಹೆಚ್ಚು ರುಚಿ
ಬಾಗಿದ ಬೆನ್ನು ಮಂಜು ಕಣ್ಣು
ಚಪಲವೇ ಬಲ

ಇದು-
ಮರದ ಹಾಗೆ ಬೆಳೆಯಿತು
ಜೀವ;
ನದಿಯ ಹಾಗೆ ಹರಿಯಿತು
ಭಾವ;
ಫಳ ಫಳ ಫಳ…
ಹೊಳೆದು ಹೋಯಿತು ಕಾಲ

ಅವರವರ ಮನೆಯಲಿ
ಗೊತ್ತಾದ ಸಮಯದಲಿ
ಯಾರೂ ಬಂದ ಹಾಗಿರಲಿಲ್ಲ
ಯಾರೂ ಹೋದ ಹಾಗಿರಲಿಲ್ಲ

ಆ ಕ್ಷಣವದು ತಲ್ಲಣವೊ?
ಆ ಕ್ಷಣವದು ರೋಮಾಂಚನವೊ?
ಹೇಳಲವರು…
ಇದ್ದಂತೆ ಇರಲಿಲ್ಲ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುಸ್ಸಂಜೆಯ ಮಿಂಚು – ೭
Next post ಪ್ರಾಣಕಾಂತ

ಸಣ್ಣ ಕತೆ

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

cheap jordans|wholesale air max|wholesale jordans|wholesale jewelry|wholesale jerseys