Home / ಕವನ / ಕವಿತೆ / ಹೆಂಡಗಡಂಗಿನ ಚಿತ್ರ

ಹೆಂಡಗಡಂಗಿನ ಚಿತ್ರ

ಗೋಡೆ ಮೇಲಿನ ದೊಡ್ಡ ಗಾತ್ರದ ಎಲೆಗಳ ಹೂಬಳ್ಳಿ
ಸ್ತಬ್ಧ ಚಿತ್ರವಾಗಿಯಷ್ಟೇ ಉಳಿದಿದೆ.  ಎಂದೋ ಉದುರಿದ ಎಲೆಗಳು
ನೆಲ ಬಗೆದು ಬೂಮಿಯೊಡಲು ಸೇರಿ, ಗೆದ್ದಲಿಡಿದು ಎಲುಬು ತಿಂದ
ಮನುಷ್ಯನಂತೇ ಆಗಿಹೋಗಿವೆಯೇನೊ.

ಬುದ್ಧಿ ಬಂದಾಗ ಮೂಲೆ ಸೇರಿದ ಪ್ರಜ್ಞಾಹೀನ ಇನ್ನೂ ಮೇಲೆದ್ದಿಲ್ಲ.
ಉಡುಪು ಮಾಸಿಲ್ಲ, ಪ್ರೇಮ ಮಾತ್ರ ಬೆಂಕಿಯಂತೆ ಉರಿದು ಹೋಗುತಿದೆ.
ಮಳೆಗಾಲದ ಬಣ್ಣಬಣ್ಣದ ಚಿಟ್ಟೆಗಳು ಒಳಸುಳಿದು ಹೂದೋಟದತ್ತ ಹಾರಿಹೋಗಲಾರಂಭಿಸಿವೆ.

ಹುಲಿ ಆಡಿಸುವವನು ಈಗಷ್ಟೇ ಪೀಪಾಯಿ ಘಾಟು ಹೆಂಡ ಏರಿಸಿ,
ಜನರ ಮಧ್ಯೆಯೇ ನಡೆದುಹೋಗಿದ್ದಾನೆ.

ವಸಂತಮಾಸದ ಹಿರಿಮೆಯಲಿ ಹಿಗ್ಗುವ ಪ್ರಕೃತಿ ಸೌಂದರ್ಯದ ಮೋಹಕಪ್ರಭೆ – ಹೆಂಡಗಿರಾಕಿಗಳನ್ನು
ಯಥೇಚ್ಛವಾಗಿ ಕರೆತರುತ್ತಿದೆ.
ದಮ್ಮಡಿಯಿಲ್ಲದೆ ಕುಡಿದವನೊಬ್ಬ ಅಡವಿಟ್ಟು ಹೋದ ಸ್ಯಾಕ್ಸಫೋನ್
ಇನ್ನೂ ಅಡ್ಡಗೋಡೆಯ ಮೇಲಿದೆ.

ತಡಿಕೆ ಮರೆಯಲ್ಲಿ ಹಂದಿಬಾಡಿನ ಚಾಕಣ ಉರಿಯುತ್ತಿದ್ದವಳು ಮಾತ್ರ
ಅಂದು ಗೈರು ಹಾಜರು.  ಹಸಿ ನೆಲಗಡಲೆ, ಆಲೂಗಡ್ಡೆ ನಂಜಿಕೊಳ್ಳುವ
ಕುಡುಕರಿಗೆ ಅವಳ ಚಿಂತೆಯೇ ಇಲ್ಲ.

ನಾಲ್ಕೈದು ಬಾತುಕೋಳಿಗಳೊಂದಿಗೆ ಬಂದು ಮೂಲೆ ಸೇರಿದ ಬೇಟೆಗಾರ-
ಅಂದಿನ ಶೌರ್ಯ ಸಾಹಸಗಳ ವರ್ಣನೆ ಮಾಡುತ್ತಲೇ ನೆಲಕ್ಕೆ ಬೀಳುತ್ತಾನೆ.

ಕಾಲವನ್ನೇ ಮೀರಿ ಮುನ್ನಡೆಯುವ ಹೆಂಡಗಡಂಗು-
ಕ್ಷಣಕಾಲ ನಿಂತು ನಡೆದಂತೆಯೂ ಭಾಸವಾಗುತ್ತಿತ್ತು.

*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...