Home / ಕವನ / ಕವಿತೆ / ಹೆಂಡಗಡಂಗಿನ ಚಿತ್ರ

ಹೆಂಡಗಡಂಗಿನ ಚಿತ್ರ

ಗೋಡೆ ಮೇಲಿನ ದೊಡ್ಡ ಗಾತ್ರದ ಎಲೆಗಳ ಹೂಬಳ್ಳಿ
ಸ್ತಬ್ಧ ಚಿತ್ರವಾಗಿಯಷ್ಟೇ ಉಳಿದಿದೆ.  ಎಂದೋ ಉದುರಿದ ಎಲೆಗಳು
ನೆಲ ಬಗೆದು ಬೂಮಿಯೊಡಲು ಸೇರಿ, ಗೆದ್ದಲಿಡಿದು ಎಲುಬು ತಿಂದ
ಮನುಷ್ಯನಂತೇ ಆಗಿಹೋಗಿವೆಯೇನೊ.

ಬುದ್ಧಿ ಬಂದಾಗ ಮೂಲೆ ಸೇರಿದ ಪ್ರಜ್ಞಾಹೀನ ಇನ್ನೂ ಮೇಲೆದ್ದಿಲ್ಲ.
ಉಡುಪು ಮಾಸಿಲ್ಲ, ಪ್ರೇಮ ಮಾತ್ರ ಬೆಂಕಿಯಂತೆ ಉರಿದು ಹೋಗುತಿದೆ.
ಮಳೆಗಾಲದ ಬಣ್ಣಬಣ್ಣದ ಚಿಟ್ಟೆಗಳು ಒಳಸುಳಿದು ಹೂದೋಟದತ್ತ ಹಾರಿಹೋಗಲಾರಂಭಿಸಿವೆ.

ಹುಲಿ ಆಡಿಸುವವನು ಈಗಷ್ಟೇ ಪೀಪಾಯಿ ಘಾಟು ಹೆಂಡ ಏರಿಸಿ,
ಜನರ ಮಧ್ಯೆಯೇ ನಡೆದುಹೋಗಿದ್ದಾನೆ.

ವಸಂತಮಾಸದ ಹಿರಿಮೆಯಲಿ ಹಿಗ್ಗುವ ಪ್ರಕೃತಿ ಸೌಂದರ್ಯದ ಮೋಹಕಪ್ರಭೆ – ಹೆಂಡಗಿರಾಕಿಗಳನ್ನು
ಯಥೇಚ್ಛವಾಗಿ ಕರೆತರುತ್ತಿದೆ.
ದಮ್ಮಡಿಯಿಲ್ಲದೆ ಕುಡಿದವನೊಬ್ಬ ಅಡವಿಟ್ಟು ಹೋದ ಸ್ಯಾಕ್ಸಫೋನ್
ಇನ್ನೂ ಅಡ್ಡಗೋಡೆಯ ಮೇಲಿದೆ.

ತಡಿಕೆ ಮರೆಯಲ್ಲಿ ಹಂದಿಬಾಡಿನ ಚಾಕಣ ಉರಿಯುತ್ತಿದ್ದವಳು ಮಾತ್ರ
ಅಂದು ಗೈರು ಹಾಜರು.  ಹಸಿ ನೆಲಗಡಲೆ, ಆಲೂಗಡ್ಡೆ ನಂಜಿಕೊಳ್ಳುವ
ಕುಡುಕರಿಗೆ ಅವಳ ಚಿಂತೆಯೇ ಇಲ್ಲ.

ನಾಲ್ಕೈದು ಬಾತುಕೋಳಿಗಳೊಂದಿಗೆ ಬಂದು ಮೂಲೆ ಸೇರಿದ ಬೇಟೆಗಾರ-
ಅಂದಿನ ಶೌರ್ಯ ಸಾಹಸಗಳ ವರ್ಣನೆ ಮಾಡುತ್ತಲೇ ನೆಲಕ್ಕೆ ಬೀಳುತ್ತಾನೆ.

ಕಾಲವನ್ನೇ ಮೀರಿ ಮುನ್ನಡೆಯುವ ಹೆಂಡಗಡಂಗು-
ಕ್ಷಣಕಾಲ ನಿಂತು ನಡೆದಂತೆಯೂ ಭಾಸವಾಗುತ್ತಿತ್ತು.

*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...