ಕಿಕ್ಕಿರಿದಿದ್ದವು ಮರದಲ್ಲಿ ಹೂವುಗಳು
ಇಡೀ ಮರವು ಒಂದು ಹೂವು
ಇಡೀ ಹೂದೋಟವು ಒಂದು ಹೂಗೊಂಚಲು
ಇಡೀ ಭೂಮಂಡಲವು ಒಂದು ಹೂ ಬುಟ್ಟಿಯು
ಹೂಭಾರಕ್ಕೆ ಪರಿಮಳಕೆ ಪಕ್ಕಾಗಿ
ಹೂವಾಡಗಿತ್ತಿಯು ತೂಗಿರಲು-
ನೋಡು… ಬ…
ಎಂದವನ ಕರೆದೆ
ಅವನೋ…
ಮತ್ತನಾಗಿ ಮೈದುಂಬಿ
ಮಲಗಿದ್ದ
ಹೂವಿನೆದೆಯೊಳಗೆ.
*****
ಕಿಕ್ಕಿರಿದಿದ್ದವು ಮರದಲ್ಲಿ ಹೂವುಗಳು
ಇಡೀ ಮರವು ಒಂದು ಹೂವು
ಇಡೀ ಹೂದೋಟವು ಒಂದು ಹೂಗೊಂಚಲು
ಇಡೀ ಭೂಮಂಡಲವು ಒಂದು ಹೂ ಬುಟ್ಟಿಯು
ಹೂಭಾರಕ್ಕೆ ಪರಿಮಳಕೆ ಪಕ್ಕಾಗಿ
ಹೂವಾಡಗಿತ್ತಿಯು ತೂಗಿರಲು-
ನೋಡು… ಬ…
ಎಂದವನ ಕರೆದೆ
ಅವನೋ…
ಮತ್ತನಾಗಿ ಮೈದುಂಬಿ
ಮಲಗಿದ್ದ
ಹೂವಿನೆದೆಯೊಳಗೆ.
*****
"ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…
‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…
ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…
ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…
ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…