ಹೂವಿನ ಸಾವು

ಮಂಜಿನ ಮರೆಗೆ
ತಿಪ್ಪೆಯ ಒಳಗೆ
ಹೂವೊಂದು ಅರಳಿತ್ತು

ಮತ್ತನ ಮೈಯಿ
ಕೆಂಪನೆ ಬಾಯಿ
ಥರ ಥರ ನಡುಗಿತ್ತು

ಕಣ್ಣಲಿ ಕಂಬನಿ
ನುಣ್ಣನೆ ನಲ್ದನಿ
ನಸುಕನು ಹರಿದಿತ್ತು

ಯಾರದು ತಂದೆ?
ಯಾರದು ತಾಯಿ?
ಎಲ್ಲರ ಕೇಳಿತ್ತು

ನಾಯಿಯ ಬೊಗಳು
ಇರುವೆಯ ಸಾಲು
ಕಂದನ ಮುತ್ತಿತ್ತು

ಎಲ್ಲವ ದೇವರು
ಎಲ್ಲದು ಧರ್ಮವು?
ಚೀರಿ ಅತ್ತಿತ್ತು

ಕೂಸಿನ ಅಳಲು
ಮುಟ್ಟಲು ಮುಗಿಲು
ಜಾತ್ರೆಯು ನೆರೆದಿತ್ತು

ಬಂದರು, ಹೂದರು
ನಿಂದರು, ನೊಂದರು
ಜಗವದು ನಡೆದಿತ್ತು

ಕತ್ತಲು ಸುರಿಯಿತು
ಚಂದಿರ ಹೊರಳಿತು
ಜೀವವೂ ಸೊರಗಿತ್ತು

ಲೋಕವೆ ನೂಕಲು
ನಾಕವು ಸಲಹುದೆ?
ಜೋಗಿತಿ ಹಾಡಿತ್ತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುಸ್ಸಂಜೆಯ ಮಿಂಚು – ೨೨
Next post ಅಸಾಮಾನ್ಯರು

ಸಣ್ಣ ಕತೆ

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…