Home / ಲೇಖನ / ವಿಜ್ಞಾನ / ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಗಳ ಧ್ವನಿಗಳು

ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಗಳ ಧ್ವನಿಗಳು

ಈ ವಿಷಯ ಮನಸ್ಸಿನ ಭಾವಗಳಮ್ನ ಪ್ರತಿಫಲನಗೊಳಿಸುವ ಸೂಕ್ಷ್ಮಕ್ರಿಯೆಯಿಂದ ಕೂಡಿದೆ. ಜಗತ್ತಿನಲ್ಲಿ ಆತ್ಮಹತ್ಯೆಗೊಳಗಾಗುವ, ಆದ ಕೋಟ್ಯಾಂತರ ಜನರ ಧ್ವನಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ವ್ಯತ್ಯಾಸಗಳು ಕಂಡು ಬರುತ್ತವೆ ಎನ್ನುವದಕ್ಕೆ ಅಮೇರಿಕಾದ ಟೆನ್ನೇಸಿ ನಗರದ ವಿಶ್ವವಿದ್ಯಾನಿಲಯದಲ್ಲಿ ಎಲೆಕ್ಟ್ರಾನಿಕ್ಸ್ ಇಂಜಿನೀಯರ್‌ಗಳಾದ ಸ್ವಿರ್‌ಮನ್ ಮತ್ತು ಮಿಷರ್‌ಮಿಲ್ಕ್ ಅವರು ಸಂಶೋಧನೆಗಳಿಂದ ಸಾಬೀತುಪಡಿಸಿದ್ದಾರೆ.

ವ್ಯಾಕುಲತೆಗೆ ತುತ್ತಾಗಿರುವ ೬೪ ಮಂದಿ ರೋಗಿಗಳು ಮತ್ತು ಮಾನಸಿಕವಾಗಿ ಸುಸ್ಥಿತಿಯಲ್ಲಿದ್ದ ೩೨ ಮಂದಿಯ ಜತೆ ಇಬ್ಬರು ವಿಜ್ಞಾನಿಗಳು ಮಾತುಕತೆ ನಡೆಸಿದರು. ಕೊನೆಗೆ ಪರೀಕ್ಷಿಸಿದಾಗ ಈ ಜನರಲ್ಲಿ೨೨ ಮಂದಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ನಡೆಸಿದ್ದರು. ಈ ಎಲ್ಲ ವ್ಯಕ್ತಿಗಳ ಮಾತುಕತೆಗಳನ್ನು ಟೇಪರಿಕಾರ್ಡ್‌ರ್ ಮಾಡಿಕೊಳ್ಳಲು ೨೨ ಮಂದಿ ರೋಗಿಗಳ ಜೀವನದಲ್ಲಿ ಮುಂದೆ ನಡೆವ ಘಟನೆಗಳನ್ನು ಆ ಇಬ್ಬರು ಸಂಶೋಧಕರು ಪರಿಶೀಲಿಸಿದ್ದರು. ಆತ್ಮಹತ್ಯಗೆ ತಯರಾಗಿದ್ದವರ ಧ್ವನಿಯಲ್ಲಿ ಇತರರಿಗಿಂತ ಬದಲಾವಣೆ ಕಂಡು ಬಂದಿತು. ಆತ್ಮಹತ್ಯೆಮಾಡಿಕೊಳ್ಳಲಿರುವ ಮತ್ತು ಸಾದಾ ವ್ಯಕ್ತಿಗಳಿಗೆ ಒಂದು ವಾಕ್ಯವನ್ನು ಓದಲು ಹೇಳಿದಾಗ ಈ ಇಬ್ಬರ ಧ್ವನಿಯಲ್ಲಿ ಸಾಕಷ್ಟು ವ್ಯತ್ಯಾಸಗಳನ್ನು ಕಾಣಲಾಯಿತು. ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸುವವರ ಧ್ವನಿ ಕ್ಷೀಣಗತಿಯಲ್ಲಿತ್ತು. ಆ ಧ್ವನಿ ರೀಕಾರ್ಡಿನಲ್ಲಿ ಪೊಳ್ಳಾಗಿರುವಂತೆ ಸ್ಪಷ್ಟವಾಯಿತು. ಮತ್ತು ಅದೇ ವ್ಯಕ್ತಿಗಳು ಆರೋಗ್ಯವಾಗಿದ್ದು ಯಾವ ದುರಾಲೋಚನೆ ಇಲ್ಲದೇ ಇರುವಾಗ ಮಾತನಾಡಿದ ಧ್ವನಿಗೂ ಮತ್ತು ಆತ್ಮಹತ್ಯೆಗೆ ತಯಾರಾಗಿದ್ದ ಸಮಯದಲ್ಲಿ ಮಾತನಾಡಿದ ಧ್ವನಿಗಳಿಗೆ ವ್ಯತ್ಯಾಸಗಳಿದ್ದವು.

ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳಬಹುದಾದ ವ್ಯಕ್ತಿಯ ಧ್ವನಿಯನ್ನು ಪರೀಕ್ಷಿಸಿದಾಗ ಈತ ಮುಂದೆ ಸಾಯಲಿದ್ದಾನೆ ಎಂದು ತಿಳಿದು ರಕ್ಷಿಸಬಹುದು. ಇದು ತೀರ ಸರಳವಾದ ವಿಧಾನ ಮತ್ತು ಸೂಕ್ಷ್ಮವಾದ ಮಾನಸಿಕ ಸ್ಥಿತಿಯನ್ನು ಅರಿಯಬಲ್ಲವಿಧಾನ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...