Home / ಲೇಖನ / ವಿಜ್ಞಾನ / ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಗಳ ಧ್ವನಿಗಳು

ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಗಳ ಧ್ವನಿಗಳು

ಈ ವಿಷಯ ಮನಸ್ಸಿನ ಭಾವಗಳಮ್ನ ಪ್ರತಿಫಲನಗೊಳಿಸುವ ಸೂಕ್ಷ್ಮಕ್ರಿಯೆಯಿಂದ ಕೂಡಿದೆ. ಜಗತ್ತಿನಲ್ಲಿ ಆತ್ಮಹತ್ಯೆಗೊಳಗಾಗುವ, ಆದ ಕೋಟ್ಯಾಂತರ ಜನರ ಧ್ವನಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ವ್ಯತ್ಯಾಸಗಳು ಕಂಡು ಬರುತ್ತವೆ ಎನ್ನುವದಕ್ಕೆ ಅಮೇರಿಕಾದ ಟೆನ್ನೇಸಿ ನಗರದ ವಿಶ್ವವಿದ್ಯಾನಿಲಯದಲ್ಲಿ ಎಲೆಕ್ಟ್ರಾನಿಕ್ಸ್ ಇಂಜಿನೀಯರ್‌ಗಳಾದ ಸ್ವಿರ್‌ಮನ್ ಮತ್ತು ಮಿಷರ್‌ಮಿಲ್ಕ್ ಅವರು ಸಂಶೋಧನೆಗಳಿಂದ ಸಾಬೀತುಪಡಿಸಿದ್ದಾರೆ.

ವ್ಯಾಕುಲತೆಗೆ ತುತ್ತಾಗಿರುವ ೬೪ ಮಂದಿ ರೋಗಿಗಳು ಮತ್ತು ಮಾನಸಿಕವಾಗಿ ಸುಸ್ಥಿತಿಯಲ್ಲಿದ್ದ ೩೨ ಮಂದಿಯ ಜತೆ ಇಬ್ಬರು ವಿಜ್ಞಾನಿಗಳು ಮಾತುಕತೆ ನಡೆಸಿದರು. ಕೊನೆಗೆ ಪರೀಕ್ಷಿಸಿದಾಗ ಈ ಜನರಲ್ಲಿ೨೨ ಮಂದಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ನಡೆಸಿದ್ದರು. ಈ ಎಲ್ಲ ವ್ಯಕ್ತಿಗಳ ಮಾತುಕತೆಗಳನ್ನು ಟೇಪರಿಕಾರ್ಡ್‌ರ್ ಮಾಡಿಕೊಳ್ಳಲು ೨೨ ಮಂದಿ ರೋಗಿಗಳ ಜೀವನದಲ್ಲಿ ಮುಂದೆ ನಡೆವ ಘಟನೆಗಳನ್ನು ಆ ಇಬ್ಬರು ಸಂಶೋಧಕರು ಪರಿಶೀಲಿಸಿದ್ದರು. ಆತ್ಮಹತ್ಯಗೆ ತಯರಾಗಿದ್ದವರ ಧ್ವನಿಯಲ್ಲಿ ಇತರರಿಗಿಂತ ಬದಲಾವಣೆ ಕಂಡು ಬಂದಿತು. ಆತ್ಮಹತ್ಯೆಮಾಡಿಕೊಳ್ಳಲಿರುವ ಮತ್ತು ಸಾದಾ ವ್ಯಕ್ತಿಗಳಿಗೆ ಒಂದು ವಾಕ್ಯವನ್ನು ಓದಲು ಹೇಳಿದಾಗ ಈ ಇಬ್ಬರ ಧ್ವನಿಯಲ್ಲಿ ಸಾಕಷ್ಟು ವ್ಯತ್ಯಾಸಗಳನ್ನು ಕಾಣಲಾಯಿತು. ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸುವವರ ಧ್ವನಿ ಕ್ಷೀಣಗತಿಯಲ್ಲಿತ್ತು. ಆ ಧ್ವನಿ ರೀಕಾರ್ಡಿನಲ್ಲಿ ಪೊಳ್ಳಾಗಿರುವಂತೆ ಸ್ಪಷ್ಟವಾಯಿತು. ಮತ್ತು ಅದೇ ವ್ಯಕ್ತಿಗಳು ಆರೋಗ್ಯವಾಗಿದ್ದು ಯಾವ ದುರಾಲೋಚನೆ ಇಲ್ಲದೇ ಇರುವಾಗ ಮಾತನಾಡಿದ ಧ್ವನಿಗೂ ಮತ್ತು ಆತ್ಮಹತ್ಯೆಗೆ ತಯಾರಾಗಿದ್ದ ಸಮಯದಲ್ಲಿ ಮಾತನಾಡಿದ ಧ್ವನಿಗಳಿಗೆ ವ್ಯತ್ಯಾಸಗಳಿದ್ದವು.

ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳಬಹುದಾದ ವ್ಯಕ್ತಿಯ ಧ್ವನಿಯನ್ನು ಪರೀಕ್ಷಿಸಿದಾಗ ಈತ ಮುಂದೆ ಸಾಯಲಿದ್ದಾನೆ ಎಂದು ತಿಳಿದು ರಕ್ಷಿಸಬಹುದು. ಇದು ತೀರ ಸರಳವಾದ ವಿಧಾನ ಮತ್ತು ಸೂಕ್ಷ್ಮವಾದ ಮಾನಸಿಕ ಸ್ಥಿತಿಯನ್ನು ಅರಿಯಬಲ್ಲವಿಧಾನ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...