Home / ಲೇಖನ / ವಿಜ್ಞಾನ / ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಗಳ ಧ್ವನಿಗಳು

ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಗಳ ಧ್ವನಿಗಳು

ಈ ವಿಷಯ ಮನಸ್ಸಿನ ಭಾವಗಳಮ್ನ ಪ್ರತಿಫಲನಗೊಳಿಸುವ ಸೂಕ್ಷ್ಮಕ್ರಿಯೆಯಿಂದ ಕೂಡಿದೆ. ಜಗತ್ತಿನಲ್ಲಿ ಆತ್ಮಹತ್ಯೆಗೊಳಗಾಗುವ, ಆದ ಕೋಟ್ಯಾಂತರ ಜನರ ಧ್ವನಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ವ್ಯತ್ಯಾಸಗಳು ಕಂಡು ಬರುತ್ತವೆ ಎನ್ನುವದಕ್ಕೆ ಅಮೇರಿಕಾದ ಟೆನ್ನೇಸಿ ನಗರದ ವಿಶ್ವವಿದ್ಯಾನಿಲಯದಲ್ಲಿ ಎಲೆಕ್ಟ್ರಾನಿಕ್ಸ್ ಇಂಜಿನೀಯರ್‌ಗಳಾದ ಸ್ವಿರ್‌ಮನ್ ಮತ್ತು ಮಿಷರ್‌ಮಿಲ್ಕ್ ಅವರು ಸಂಶೋಧನೆಗಳಿಂದ ಸಾಬೀತುಪಡಿಸಿದ್ದಾರೆ.

ವ್ಯಾಕುಲತೆಗೆ ತುತ್ತಾಗಿರುವ ೬೪ ಮಂದಿ ರೋಗಿಗಳು ಮತ್ತು ಮಾನಸಿಕವಾಗಿ ಸುಸ್ಥಿತಿಯಲ್ಲಿದ್ದ ೩೨ ಮಂದಿಯ ಜತೆ ಇಬ್ಬರು ವಿಜ್ಞಾನಿಗಳು ಮಾತುಕತೆ ನಡೆಸಿದರು. ಕೊನೆಗೆ ಪರೀಕ್ಷಿಸಿದಾಗ ಈ ಜನರಲ್ಲಿ೨೨ ಮಂದಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ನಡೆಸಿದ್ದರು. ಈ ಎಲ್ಲ ವ್ಯಕ್ತಿಗಳ ಮಾತುಕತೆಗಳನ್ನು ಟೇಪರಿಕಾರ್ಡ್‌ರ್ ಮಾಡಿಕೊಳ್ಳಲು ೨೨ ಮಂದಿ ರೋಗಿಗಳ ಜೀವನದಲ್ಲಿ ಮುಂದೆ ನಡೆವ ಘಟನೆಗಳನ್ನು ಆ ಇಬ್ಬರು ಸಂಶೋಧಕರು ಪರಿಶೀಲಿಸಿದ್ದರು. ಆತ್ಮಹತ್ಯಗೆ ತಯರಾಗಿದ್ದವರ ಧ್ವನಿಯಲ್ಲಿ ಇತರರಿಗಿಂತ ಬದಲಾವಣೆ ಕಂಡು ಬಂದಿತು. ಆತ್ಮಹತ್ಯೆಮಾಡಿಕೊಳ್ಳಲಿರುವ ಮತ್ತು ಸಾದಾ ವ್ಯಕ್ತಿಗಳಿಗೆ ಒಂದು ವಾಕ್ಯವನ್ನು ಓದಲು ಹೇಳಿದಾಗ ಈ ಇಬ್ಬರ ಧ್ವನಿಯಲ್ಲಿ ಸಾಕಷ್ಟು ವ್ಯತ್ಯಾಸಗಳನ್ನು ಕಾಣಲಾಯಿತು. ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸುವವರ ಧ್ವನಿ ಕ್ಷೀಣಗತಿಯಲ್ಲಿತ್ತು. ಆ ಧ್ವನಿ ರೀಕಾರ್ಡಿನಲ್ಲಿ ಪೊಳ್ಳಾಗಿರುವಂತೆ ಸ್ಪಷ್ಟವಾಯಿತು. ಮತ್ತು ಅದೇ ವ್ಯಕ್ತಿಗಳು ಆರೋಗ್ಯವಾಗಿದ್ದು ಯಾವ ದುರಾಲೋಚನೆ ಇಲ್ಲದೇ ಇರುವಾಗ ಮಾತನಾಡಿದ ಧ್ವನಿಗೂ ಮತ್ತು ಆತ್ಮಹತ್ಯೆಗೆ ತಯಾರಾಗಿದ್ದ ಸಮಯದಲ್ಲಿ ಮಾತನಾಡಿದ ಧ್ವನಿಗಳಿಗೆ ವ್ಯತ್ಯಾಸಗಳಿದ್ದವು.

ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳಬಹುದಾದ ವ್ಯಕ್ತಿಯ ಧ್ವನಿಯನ್ನು ಪರೀಕ್ಷಿಸಿದಾಗ ಈತ ಮುಂದೆ ಸಾಯಲಿದ್ದಾನೆ ಎಂದು ತಿಳಿದು ರಕ್ಷಿಸಬಹುದು. ಇದು ತೀರ ಸರಳವಾದ ವಿಧಾನ ಮತ್ತು ಸೂಕ್ಷ್ಮವಾದ ಮಾನಸಿಕ ಸ್ಥಿತಿಯನ್ನು ಅರಿಯಬಲ್ಲವಿಧಾನ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...