Home / ಕವನ / ಅನುವಾದ / ಮಿಸ್ಟರ್ ಕಾಗಿಟೋ ನರಕದ ಬಗ್ಗೆ ಹೀಗೆಂದುಕೊಳ್ಳುತ್ತಾನೆ

ಮಿಸ್ಟರ್ ಕಾಗಿಟೋ ನರಕದ ಬಗ್ಗೆ ಹೀಗೆಂದುಕೊಳ್ಳುತ್ತಾನೆ

ನರಕದ ತಳಾತಳದಲ್ಲಿರುವ ಸೀಮೆ. ಎಲ್ಲರೂ ಅಂದುಕೊಂಡಂತೆ ಅಲ್ಲಿ
ನಿರಂಕುಶಾಧಿಕಾರಿಗಳಿಲ್ಲ. ಮಾತೃಹಂತಕರು, ಮಾತೃಗಾಮಿಗಳು, ಹೆಣಗಳನ್ನು ದರದರ
ಎಳೆದಾಡಿದವರು, ದೇಶದ್ರೋಹಿಗಳು ಯಾರೂ ಇಲ್ಲ. ನರಕದ ತಳಾತಳ ಕಾಲವಿದರ
ಆಶ್ರಯತಾಣ, ಎಲ್ಲೆಲ್ಲೂ ಕನ್ನಡಿಗಳು, ಸಂಗೀತ ವಾದ್ಯಗಳು, ವರ್ಣಚಿತ್ರಗಳು. ಸುಮ್ಮನೆ
ನೋಡಿದರೆ ಇದು ನರಕದ ಡಿಲಕ್ಸ್ ಡಿಪಾರ್ಟ್ಮೆಂಟು ಅನ್ನಿಸುತ್ತದೆ; ಕುದಿಯುವ ಎಣ್ಣೆ
ಕೊಪ್ಪರಿಗೆ ಇಲ್ಲ. ಮೈ ಕೊಯ್ಯುವ ಗರಗಸವಿಲ್ಲ. ಧಗಧಗ ಉರಿಯುವ ಬೆಂಕಿ
ನಾಲಗೆಗಳಿಲ್ಲ.
ವರ್‍ಷ ಪೂರ್ತಿ ಕಾವ್ಯ ಸ್ಪರ್ಧೆ, ಸಂಗೀತೋತ್ಸವ, ಕಲಾ ಮೇಳಗಳೇ. ಇವಕ್ಕೆ ಕ್ಲೈಮಾಕ್ಸ್
ಎಂಬುದಿಲ್ಲ. ಶಾಶ್ವತವಾಗಿ, ಬಹುಮಟ್ಟಿಗೆ ಅನಂತವಾಗಿ ಅಖಂಡವಾದ ಕ್ಲೈಮಾಕ್ಸೇ
ಯಾವಾಗಲೂ. ತಿಂಗಳಿಗೊಂದು ಹೊಸ ಪಂಥ, ಹೊಸ ಶೈಲಿಯ ಅವಿಷ್ಕಾರ.
ಅಗ್ರಗಾಮಿ ಕವಿ ಕಲಾವಿದರ ಮುನ್ನೆಡೆಯನ್ನು ತಡೆಯುವವರೇ ಇಲ್ಲ.
ನರಕದೊಡೆಯ ಬೇಲ್ಸೆಬಬ್‍ನಿಗೆ ಕಲೆಯನ್ನು ಕಂಡರೆ ತುಂಬ ಪ್ರೀತಿ. ನರಕದ ಮೇಳ,
ನರಕದ ಕವಿಗಳು, ನರಕದ ಸಂಗೀತಗಾರರು ಇವರೆಲ್ಲ ಸ್ವರ್ಗದಲ್ಲಿರುವ ಇಂಥವರಿಗಿಂತ
ತುಂಬ
ಅತ್ಯುತ್ತಮ ಎಂದು ಜಂಬಕೊಚ್ಚಿಕೊಳ್ಳಲು ಶುರುಮಾಡಿದ್ದಾನೆ. ಅತ್ಯುತ್ತಮ ಕಲೆ ಇದ್ದರೆ
ಅತ್ಕುತ್ತಮ ಸರ್ಕಾರವಿರುತ್ತದೆ. ಸತ್ಯ, ಪರಮ ಸತ್ಯ. ಸದ್ಯದಲ್ಲೆ ನರಕದ ಕಲಾವಿದರಿಗೂ
ಸ್ವರ್ಗದವರಿಗೂ ನಡುವೆ ಒಂದು ಸ್ಪರ್ಧೆ ಇದೆ, ಎರಡು ವಿಶ್ವಗಳ ಮಹಾ ಸರ್ಧೆ.
ಡಾಂಟೆ, ಫ್ರಾ ಏಂಜಲಿಕೋ, ಬಾಖ್ ಎಷ್ಟು ಮಟ್ಟಿಗೆ ಉಳಿದುಕೊಳ್ಳುತಾರೋ ನೋಡಬೇಕು.
ನರಕದೊಡೆಯ ಕಲೆಗೆ ಸಾಹಿತ್ಯಕ್ಕೆ ತುಂಬ ಪ್ರೋತ್ಸಾಹ ಕೊಡುತ್ತಾನೆ. ಕಲಾವಿದರಿಗೆ
ಶಾಂತಿ, ಅತ್ಯುತ್ತಮ ಆಹಾರ, ನರಕದ ಬದುಕಿನ ತಳಮಳ ತಾಗದಂಥ ಪ್ರತ್ಯೇಕ ಪರಿಪೂರ್ಣ
ಏಕಾಂತ ಒದಗಿಸಿದ್ದಾನೆ.
*****
ಮೂಲ: ಝ್ಬಿಗ್ನ್ಯೂ ಹರ್‍ಬರ್‍ಟ್ / Zbigniew Herbert

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...