ಮಿಸ್ಟರ್ ಕಾಗಿಟೋ ನರಕದ ಬಗ್ಗೆ ಹೀಗೆಂದುಕೊಳ್ಳುತ್ತಾನೆ

ನರಕದ ತಳಾತಳದಲ್ಲಿರುವ ಸೀಮೆ. ಎಲ್ಲರೂ ಅಂದುಕೊಂಡಂತೆ ಅಲ್ಲಿ
ನಿರಂಕುಶಾಧಿಕಾರಿಗಳಿಲ್ಲ. ಮಾತೃಹಂತಕರು, ಮಾತೃಗಾಮಿಗಳು, ಹೆಣಗಳನ್ನು ದರದರ
ಎಳೆದಾಡಿದವರು, ದೇಶದ್ರೋಹಿಗಳು ಯಾರೂ ಇಲ್ಲ. ನರಕದ ತಳಾತಳ ಕಾಲವಿದರ
ಆಶ್ರಯತಾಣ, ಎಲ್ಲೆಲ್ಲೂ ಕನ್ನಡಿಗಳು, ಸಂಗೀತ ವಾದ್ಯಗಳು, ವರ್ಣಚಿತ್ರಗಳು. ಸುಮ್ಮನೆ
ನೋಡಿದರೆ ಇದು ನರಕದ ಡಿಲಕ್ಸ್ ಡಿಪಾರ್ಟ್ಮೆಂಟು ಅನ್ನಿಸುತ್ತದೆ; ಕುದಿಯುವ ಎಣ್ಣೆ
ಕೊಪ್ಪರಿಗೆ ಇಲ್ಲ. ಮೈ ಕೊಯ್ಯುವ ಗರಗಸವಿಲ್ಲ. ಧಗಧಗ ಉರಿಯುವ ಬೆಂಕಿ
ನಾಲಗೆಗಳಿಲ್ಲ.
ವರ್‍ಷ ಪೂರ್ತಿ ಕಾವ್ಯ ಸ್ಪರ್ಧೆ, ಸಂಗೀತೋತ್ಸವ, ಕಲಾ ಮೇಳಗಳೇ. ಇವಕ್ಕೆ ಕ್ಲೈಮಾಕ್ಸ್
ಎಂಬುದಿಲ್ಲ. ಶಾಶ್ವತವಾಗಿ, ಬಹುಮಟ್ಟಿಗೆ ಅನಂತವಾಗಿ ಅಖಂಡವಾದ ಕ್ಲೈಮಾಕ್ಸೇ
ಯಾವಾಗಲೂ. ತಿಂಗಳಿಗೊಂದು ಹೊಸ ಪಂಥ, ಹೊಸ ಶೈಲಿಯ ಅವಿಷ್ಕಾರ.
ಅಗ್ರಗಾಮಿ ಕವಿ ಕಲಾವಿದರ ಮುನ್ನೆಡೆಯನ್ನು ತಡೆಯುವವರೇ ಇಲ್ಲ.
ನರಕದೊಡೆಯ ಬೇಲ್ಸೆಬಬ್‍ನಿಗೆ ಕಲೆಯನ್ನು ಕಂಡರೆ ತುಂಬ ಪ್ರೀತಿ. ನರಕದ ಮೇಳ,
ನರಕದ ಕವಿಗಳು, ನರಕದ ಸಂಗೀತಗಾರರು ಇವರೆಲ್ಲ ಸ್ವರ್ಗದಲ್ಲಿರುವ ಇಂಥವರಿಗಿಂತ
ತುಂಬ
ಅತ್ಯುತ್ತಮ ಎಂದು ಜಂಬಕೊಚ್ಚಿಕೊಳ್ಳಲು ಶುರುಮಾಡಿದ್ದಾನೆ. ಅತ್ಯುತ್ತಮ ಕಲೆ ಇದ್ದರೆ
ಅತ್ಕುತ್ತಮ ಸರ್ಕಾರವಿರುತ್ತದೆ. ಸತ್ಯ, ಪರಮ ಸತ್ಯ. ಸದ್ಯದಲ್ಲೆ ನರಕದ ಕಲಾವಿದರಿಗೂ
ಸ್ವರ್ಗದವರಿಗೂ ನಡುವೆ ಒಂದು ಸ್ಪರ್ಧೆ ಇದೆ, ಎರಡು ವಿಶ್ವಗಳ ಮಹಾ ಸರ್ಧೆ.
ಡಾಂಟೆ, ಫ್ರಾ ಏಂಜಲಿಕೋ, ಬಾಖ್ ಎಷ್ಟು ಮಟ್ಟಿಗೆ ಉಳಿದುಕೊಳ್ಳುತಾರೋ ನೋಡಬೇಕು.
ನರಕದೊಡೆಯ ಕಲೆಗೆ ಸಾಹಿತ್ಯಕ್ಕೆ ತುಂಬ ಪ್ರೋತ್ಸಾಹ ಕೊಡುತ್ತಾನೆ. ಕಲಾವಿದರಿಗೆ
ಶಾಂತಿ, ಅತ್ಯುತ್ತಮ ಆಹಾರ, ನರಕದ ಬದುಕಿನ ತಳಮಳ ತಾಗದಂಥ ಪ್ರತ್ಯೇಕ ಪರಿಪೂರ್ಣ
ಏಕಾಂತ ಒದಗಿಸಿದ್ದಾನೆ.
*****
ಮೂಲ: ಝ್ಬಿಗ್ನ್ಯೂ ಹರ್‍ಬರ್‍ಟ್ / Zbigniew Herbert

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎನ್ನ ಕಾಯೋ
Next post ವಾತಾಪಿ ಜೀರ್ಣೋಭವ

ಸಣ್ಣ ಕತೆ

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…