Home / ಕವನ / ಅನುವಾದ / ಮಿಸ್ಟರ್ ಕಾಗಿಟೋ ನರಕದ ಬಗ್ಗೆ ಹೀಗೆಂದುಕೊಳ್ಳುತ್ತಾನೆ

ಮಿಸ್ಟರ್ ಕಾಗಿಟೋ ನರಕದ ಬಗ್ಗೆ ಹೀಗೆಂದುಕೊಳ್ಳುತ್ತಾನೆ

ನರಕದ ತಳಾತಳದಲ್ಲಿರುವ ಸೀಮೆ. ಎಲ್ಲರೂ ಅಂದುಕೊಂಡಂತೆ ಅಲ್ಲಿ
ನಿರಂಕುಶಾಧಿಕಾರಿಗಳಿಲ್ಲ. ಮಾತೃಹಂತಕರು, ಮಾತೃಗಾಮಿಗಳು, ಹೆಣಗಳನ್ನು ದರದರ
ಎಳೆದಾಡಿದವರು, ದೇಶದ್ರೋಹಿಗಳು ಯಾರೂ ಇಲ್ಲ. ನರಕದ ತಳಾತಳ ಕಾಲವಿದರ
ಆಶ್ರಯತಾಣ, ಎಲ್ಲೆಲ್ಲೂ ಕನ್ನಡಿಗಳು, ಸಂಗೀತ ವಾದ್ಯಗಳು, ವರ್ಣಚಿತ್ರಗಳು. ಸುಮ್ಮನೆ
ನೋಡಿದರೆ ಇದು ನರಕದ ಡಿಲಕ್ಸ್ ಡಿಪಾರ್ಟ್ಮೆಂಟು ಅನ್ನಿಸುತ್ತದೆ; ಕುದಿಯುವ ಎಣ್ಣೆ
ಕೊಪ್ಪರಿಗೆ ಇಲ್ಲ. ಮೈ ಕೊಯ್ಯುವ ಗರಗಸವಿಲ್ಲ. ಧಗಧಗ ಉರಿಯುವ ಬೆಂಕಿ
ನಾಲಗೆಗಳಿಲ್ಲ.
ವರ್‍ಷ ಪೂರ್ತಿ ಕಾವ್ಯ ಸ್ಪರ್ಧೆ, ಸಂಗೀತೋತ್ಸವ, ಕಲಾ ಮೇಳಗಳೇ. ಇವಕ್ಕೆ ಕ್ಲೈಮಾಕ್ಸ್
ಎಂಬುದಿಲ್ಲ. ಶಾಶ್ವತವಾಗಿ, ಬಹುಮಟ್ಟಿಗೆ ಅನಂತವಾಗಿ ಅಖಂಡವಾದ ಕ್ಲೈಮಾಕ್ಸೇ
ಯಾವಾಗಲೂ. ತಿಂಗಳಿಗೊಂದು ಹೊಸ ಪಂಥ, ಹೊಸ ಶೈಲಿಯ ಅವಿಷ್ಕಾರ.
ಅಗ್ರಗಾಮಿ ಕವಿ ಕಲಾವಿದರ ಮುನ್ನೆಡೆಯನ್ನು ತಡೆಯುವವರೇ ಇಲ್ಲ.
ನರಕದೊಡೆಯ ಬೇಲ್ಸೆಬಬ್‍ನಿಗೆ ಕಲೆಯನ್ನು ಕಂಡರೆ ತುಂಬ ಪ್ರೀತಿ. ನರಕದ ಮೇಳ,
ನರಕದ ಕವಿಗಳು, ನರಕದ ಸಂಗೀತಗಾರರು ಇವರೆಲ್ಲ ಸ್ವರ್ಗದಲ್ಲಿರುವ ಇಂಥವರಿಗಿಂತ
ತುಂಬ
ಅತ್ಯುತ್ತಮ ಎಂದು ಜಂಬಕೊಚ್ಚಿಕೊಳ್ಳಲು ಶುರುಮಾಡಿದ್ದಾನೆ. ಅತ್ಯುತ್ತಮ ಕಲೆ ಇದ್ದರೆ
ಅತ್ಕುತ್ತಮ ಸರ್ಕಾರವಿರುತ್ತದೆ. ಸತ್ಯ, ಪರಮ ಸತ್ಯ. ಸದ್ಯದಲ್ಲೆ ನರಕದ ಕಲಾವಿದರಿಗೂ
ಸ್ವರ್ಗದವರಿಗೂ ನಡುವೆ ಒಂದು ಸ್ಪರ್ಧೆ ಇದೆ, ಎರಡು ವಿಶ್ವಗಳ ಮಹಾ ಸರ್ಧೆ.
ಡಾಂಟೆ, ಫ್ರಾ ಏಂಜಲಿಕೋ, ಬಾಖ್ ಎಷ್ಟು ಮಟ್ಟಿಗೆ ಉಳಿದುಕೊಳ್ಳುತಾರೋ ನೋಡಬೇಕು.
ನರಕದೊಡೆಯ ಕಲೆಗೆ ಸಾಹಿತ್ಯಕ್ಕೆ ತುಂಬ ಪ್ರೋತ್ಸಾಹ ಕೊಡುತ್ತಾನೆ. ಕಲಾವಿದರಿಗೆ
ಶಾಂತಿ, ಅತ್ಯುತ್ತಮ ಆಹಾರ, ನರಕದ ಬದುಕಿನ ತಳಮಳ ತಾಗದಂಥ ಪ್ರತ್ಯೇಕ ಪರಿಪೂರ್ಣ
ಏಕಾಂತ ಒದಗಿಸಿದ್ದಾನೆ.
*****
ಮೂಲ: ಝ್ಬಿಗ್ನ್ಯೂ ಹರ್‍ಬರ್‍ಟ್ / Zbigniew Herbert

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...