Home / ಕವನ / ಅನುವಾದ / ಮಿಸ್ಟರ್ ಕಾಗಿಟೋ ನರಕದ ಬಗ್ಗೆ ಹೀಗೆಂದುಕೊಳ್ಳುತ್ತಾನೆ

ಮಿಸ್ಟರ್ ಕಾಗಿಟೋ ನರಕದ ಬಗ್ಗೆ ಹೀಗೆಂದುಕೊಳ್ಳುತ್ತಾನೆ

ನರಕದ ತಳಾತಳದಲ್ಲಿರುವ ಸೀಮೆ. ಎಲ್ಲರೂ ಅಂದುಕೊಂಡಂತೆ ಅಲ್ಲಿ
ನಿರಂಕುಶಾಧಿಕಾರಿಗಳಿಲ್ಲ. ಮಾತೃಹಂತಕರು, ಮಾತೃಗಾಮಿಗಳು, ಹೆಣಗಳನ್ನು ದರದರ
ಎಳೆದಾಡಿದವರು, ದೇಶದ್ರೋಹಿಗಳು ಯಾರೂ ಇಲ್ಲ. ನರಕದ ತಳಾತಳ ಕಾಲವಿದರ
ಆಶ್ರಯತಾಣ, ಎಲ್ಲೆಲ್ಲೂ ಕನ್ನಡಿಗಳು, ಸಂಗೀತ ವಾದ್ಯಗಳು, ವರ್ಣಚಿತ್ರಗಳು. ಸುಮ್ಮನೆ
ನೋಡಿದರೆ ಇದು ನರಕದ ಡಿಲಕ್ಸ್ ಡಿಪಾರ್ಟ್ಮೆಂಟು ಅನ್ನಿಸುತ್ತದೆ; ಕುದಿಯುವ ಎಣ್ಣೆ
ಕೊಪ್ಪರಿಗೆ ಇಲ್ಲ. ಮೈ ಕೊಯ್ಯುವ ಗರಗಸವಿಲ್ಲ. ಧಗಧಗ ಉರಿಯುವ ಬೆಂಕಿ
ನಾಲಗೆಗಳಿಲ್ಲ.
ವರ್‍ಷ ಪೂರ್ತಿ ಕಾವ್ಯ ಸ್ಪರ್ಧೆ, ಸಂಗೀತೋತ್ಸವ, ಕಲಾ ಮೇಳಗಳೇ. ಇವಕ್ಕೆ ಕ್ಲೈಮಾಕ್ಸ್
ಎಂಬುದಿಲ್ಲ. ಶಾಶ್ವತವಾಗಿ, ಬಹುಮಟ್ಟಿಗೆ ಅನಂತವಾಗಿ ಅಖಂಡವಾದ ಕ್ಲೈಮಾಕ್ಸೇ
ಯಾವಾಗಲೂ. ತಿಂಗಳಿಗೊಂದು ಹೊಸ ಪಂಥ, ಹೊಸ ಶೈಲಿಯ ಅವಿಷ್ಕಾರ.
ಅಗ್ರಗಾಮಿ ಕವಿ ಕಲಾವಿದರ ಮುನ್ನೆಡೆಯನ್ನು ತಡೆಯುವವರೇ ಇಲ್ಲ.
ನರಕದೊಡೆಯ ಬೇಲ್ಸೆಬಬ್‍ನಿಗೆ ಕಲೆಯನ್ನು ಕಂಡರೆ ತುಂಬ ಪ್ರೀತಿ. ನರಕದ ಮೇಳ,
ನರಕದ ಕವಿಗಳು, ನರಕದ ಸಂಗೀತಗಾರರು ಇವರೆಲ್ಲ ಸ್ವರ್ಗದಲ್ಲಿರುವ ಇಂಥವರಿಗಿಂತ
ತುಂಬ
ಅತ್ಯುತ್ತಮ ಎಂದು ಜಂಬಕೊಚ್ಚಿಕೊಳ್ಳಲು ಶುರುಮಾಡಿದ್ದಾನೆ. ಅತ್ಯುತ್ತಮ ಕಲೆ ಇದ್ದರೆ
ಅತ್ಕುತ್ತಮ ಸರ್ಕಾರವಿರುತ್ತದೆ. ಸತ್ಯ, ಪರಮ ಸತ್ಯ. ಸದ್ಯದಲ್ಲೆ ನರಕದ ಕಲಾವಿದರಿಗೂ
ಸ್ವರ್ಗದವರಿಗೂ ನಡುವೆ ಒಂದು ಸ್ಪರ್ಧೆ ಇದೆ, ಎರಡು ವಿಶ್ವಗಳ ಮಹಾ ಸರ್ಧೆ.
ಡಾಂಟೆ, ಫ್ರಾ ಏಂಜಲಿಕೋ, ಬಾಖ್ ಎಷ್ಟು ಮಟ್ಟಿಗೆ ಉಳಿದುಕೊಳ್ಳುತಾರೋ ನೋಡಬೇಕು.
ನರಕದೊಡೆಯ ಕಲೆಗೆ ಸಾಹಿತ್ಯಕ್ಕೆ ತುಂಬ ಪ್ರೋತ್ಸಾಹ ಕೊಡುತ್ತಾನೆ. ಕಲಾವಿದರಿಗೆ
ಶಾಂತಿ, ಅತ್ಯುತ್ತಮ ಆಹಾರ, ನರಕದ ಬದುಕಿನ ತಳಮಳ ತಾಗದಂಥ ಪ್ರತ್ಯೇಕ ಪರಿಪೂರ್ಣ
ಏಕಾಂತ ಒದಗಿಸಿದ್ದಾನೆ.
*****
ಮೂಲ: ಝ್ಬಿಗ್ನ್ಯೂ ಹರ್‍ಬರ್‍ಟ್ / Zbigniew Herbert

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...