Home / ಕವನ / ಅನುವಾದ / ಮಿಸ್ಟರ್ ಕಾಗಿಟೋ ನರಕದ ಬಗ್ಗೆ ಹೀಗೆಂದುಕೊಳ್ಳುತ್ತಾನೆ

ಮಿಸ್ಟರ್ ಕಾಗಿಟೋ ನರಕದ ಬಗ್ಗೆ ಹೀಗೆಂದುಕೊಳ್ಳುತ್ತಾನೆ

ನರಕದ ತಳಾತಳದಲ್ಲಿರುವ ಸೀಮೆ. ಎಲ್ಲರೂ ಅಂದುಕೊಂಡಂತೆ ಅಲ್ಲಿ
ನಿರಂಕುಶಾಧಿಕಾರಿಗಳಿಲ್ಲ. ಮಾತೃಹಂತಕರು, ಮಾತೃಗಾಮಿಗಳು, ಹೆಣಗಳನ್ನು ದರದರ
ಎಳೆದಾಡಿದವರು, ದೇಶದ್ರೋಹಿಗಳು ಯಾರೂ ಇಲ್ಲ. ನರಕದ ತಳಾತಳ ಕಾಲವಿದರ
ಆಶ್ರಯತಾಣ, ಎಲ್ಲೆಲ್ಲೂ ಕನ್ನಡಿಗಳು, ಸಂಗೀತ ವಾದ್ಯಗಳು, ವರ್ಣಚಿತ್ರಗಳು. ಸುಮ್ಮನೆ
ನೋಡಿದರೆ ಇದು ನರಕದ ಡಿಲಕ್ಸ್ ಡಿಪಾರ್ಟ್ಮೆಂಟು ಅನ್ನಿಸುತ್ತದೆ; ಕುದಿಯುವ ಎಣ್ಣೆ
ಕೊಪ್ಪರಿಗೆ ಇಲ್ಲ. ಮೈ ಕೊಯ್ಯುವ ಗರಗಸವಿಲ್ಲ. ಧಗಧಗ ಉರಿಯುವ ಬೆಂಕಿ
ನಾಲಗೆಗಳಿಲ್ಲ.
ವರ್‍ಷ ಪೂರ್ತಿ ಕಾವ್ಯ ಸ್ಪರ್ಧೆ, ಸಂಗೀತೋತ್ಸವ, ಕಲಾ ಮೇಳಗಳೇ. ಇವಕ್ಕೆ ಕ್ಲೈಮಾಕ್ಸ್
ಎಂಬುದಿಲ್ಲ. ಶಾಶ್ವತವಾಗಿ, ಬಹುಮಟ್ಟಿಗೆ ಅನಂತವಾಗಿ ಅಖಂಡವಾದ ಕ್ಲೈಮಾಕ್ಸೇ
ಯಾವಾಗಲೂ. ತಿಂಗಳಿಗೊಂದು ಹೊಸ ಪಂಥ, ಹೊಸ ಶೈಲಿಯ ಅವಿಷ್ಕಾರ.
ಅಗ್ರಗಾಮಿ ಕವಿ ಕಲಾವಿದರ ಮುನ್ನೆಡೆಯನ್ನು ತಡೆಯುವವರೇ ಇಲ್ಲ.
ನರಕದೊಡೆಯ ಬೇಲ್ಸೆಬಬ್‍ನಿಗೆ ಕಲೆಯನ್ನು ಕಂಡರೆ ತುಂಬ ಪ್ರೀತಿ. ನರಕದ ಮೇಳ,
ನರಕದ ಕವಿಗಳು, ನರಕದ ಸಂಗೀತಗಾರರು ಇವರೆಲ್ಲ ಸ್ವರ್ಗದಲ್ಲಿರುವ ಇಂಥವರಿಗಿಂತ
ತುಂಬ
ಅತ್ಯುತ್ತಮ ಎಂದು ಜಂಬಕೊಚ್ಚಿಕೊಳ್ಳಲು ಶುರುಮಾಡಿದ್ದಾನೆ. ಅತ್ಯುತ್ತಮ ಕಲೆ ಇದ್ದರೆ
ಅತ್ಕುತ್ತಮ ಸರ್ಕಾರವಿರುತ್ತದೆ. ಸತ್ಯ, ಪರಮ ಸತ್ಯ. ಸದ್ಯದಲ್ಲೆ ನರಕದ ಕಲಾವಿದರಿಗೂ
ಸ್ವರ್ಗದವರಿಗೂ ನಡುವೆ ಒಂದು ಸ್ಪರ್ಧೆ ಇದೆ, ಎರಡು ವಿಶ್ವಗಳ ಮಹಾ ಸರ್ಧೆ.
ಡಾಂಟೆ, ಫ್ರಾ ಏಂಜಲಿಕೋ, ಬಾಖ್ ಎಷ್ಟು ಮಟ್ಟಿಗೆ ಉಳಿದುಕೊಳ್ಳುತಾರೋ ನೋಡಬೇಕು.
ನರಕದೊಡೆಯ ಕಲೆಗೆ ಸಾಹಿತ್ಯಕ್ಕೆ ತುಂಬ ಪ್ರೋತ್ಸಾಹ ಕೊಡುತ್ತಾನೆ. ಕಲಾವಿದರಿಗೆ
ಶಾಂತಿ, ಅತ್ಯುತ್ತಮ ಆಹಾರ, ನರಕದ ಬದುಕಿನ ತಳಮಳ ತಾಗದಂಥ ಪ್ರತ್ಯೇಕ ಪರಿಪೂರ್ಣ
ಏಕಾಂತ ಒದಗಿಸಿದ್ದಾನೆ.
*****
ಮೂಲ: ಝ್ಬಿಗ್ನ್ಯೂ ಹರ್‍ಬರ್‍ಟ್ / Zbigniew Herbert

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...