Home / ಕವನ / ಅನುವಾದ / ಕೊನೆ, ಮೊದಲು

ಕೊನೆ, ಮೊದಲು

ಪ್ರತಿಯೊಂದು ಯುದ್ಧಮುಗಿದ ಮೇಲೂ
ಯಾರಾದರೂ ಮತ್ತೆ ಎಲ್ಲವನ್ನೂ ಅಣಿಗೊಳಿಸಬೇಕು.
ಹಾಳಾದದ್ದೆಲ್ಲ ಮತ್ತೆ ತನಷ್ಟಕ್ಕೇ
ಸರಿಯಾಗುವುದಿಲ್ಲ ತಾನೇ?

ಯಾರಾದರೂ ಬಂದು ರಸ್ತೆ ಮೇಲೆ ಬಿದ್ದ
ಕಲ್ಲು ಮಣ್ಣು ಪಕ್ಕಕ್ಕೆ ತಳ್ಳಿ
ಹೆಣ ಹೂತ್ತೆಗಾಡಿಗಳು
ಸಾಗುವುದಕ್ಕೆ ದಾರಿ ಮಾಡಬೇಕು.

ಯಾರಾದರೂ ಸರಿ
ಗಾಜಿನ ಚೂರು, ರಕ್ತದ ಬಟ್ಟೆ ರಾಶಿ,
ಸೋಫಾ ಸ್ಪ್ರಿಂಗು, ಕೆಸರು, ಬೂದಿ, ಇಟ್ಟಿಗೆ,
ಸಿಮೆಂಟು ಕಬ್ಬಿಣದ ಅವಶೇಷಗಳ ನಡುವೆ ಕಷ್ಪಪಡಲೇಬೇಕು

ಯಾರಾದರೂ ಬಂದು
ಗೋಡೆಗೆ ಆಸರೆಯಾಗಿ ಕಂಬವನ್ನು ಎತ್ತಿನಿಲ್ಲಿಸಬೇಕು,
ಕಿಟಕಿಗೆ ಗಾಜು ಹಾಕಬೇಕು, ಬಾಗಿಲುವಾಡ ಕೂಡಿಸಬೇಕು.

ಸಂಗೀತದ ಸದ್ದಿಲ್ಲ, ಫೋಟೋಗಳ ಸುಳಿವಿಲ್ಲ
ವರ್‍ಷಗಟ್ಟಲೆ ಸುಮೃನೆ ದುಡಿಯಬೇಕು.
ಕ್ಯಾಮೆರಾಗಳೆಲ್ಲ ಬೇರೆ ಹೊಸ ಯುದ್ಧಗಳ
ಫೋಟೋ ತೆಗೆಯಲು ಹೋಗಿವೆ.
ಸೇತುವೆಗಳು ಹೊಸವಾಗಬೇಕು,
ಅಂಗಿ ತೋಳು ಮೇಲಕ್ಕೆ ಮಡಿಸಿ ಮಡಿಸಿ
ಚಿಂದಿ ಚಿಂದಿಯಾಗಬೇಕು.

ಪೊರಕೆ ಹಿಡಿದ ಯಾರಾದರೂ
ಇದೆಲ್ಲ ಹೇಗಾಯಿತೆಂದು ನೆನಪು ಮಾಡಿಕೊಳ್ಳುತ್ತಾರೆ.
ಸುಮ್ಮನೆ ನಿಂತ ಇನ್ನು ಯಾರೋ
ಗಾಯವಿರದ ತಮ್ಮ ತಲೆ ತೂಗುತ್ತಾ ಕೇಳುತ್ತಾರೆ.
ಅಲ್ಲೆ ಸಮೀಪದಲ್ಲಿ ಬಹಳ ಜನ
ಈ ಹಳೆಯ ಯುದ್ಧದ ಕತೆಯೆಲ್ಲ
ಬರೀ ಬೋರು ಅಂದುಕೊಳ್ಳುತ್ತ ಇರಲೇಬೇಕು.
ಬೆಳೆದ ಮುಳ್ಳು ಪೊದೆಯ ಅಡಿಯಲ್ಲಿ
ಸಿಕ್ಕುಬಿದ್ದಿರುವ ತುಕ್ಕುಹಿಡಿದ
ವಾಗ್ವಾದವನ್ನು ಕಿತ್ತು ಆಗಾಗ ತಿಪ್ಪೆಗೆ ಎಸೆಯುವವರು
ಯಾರಾದರೂ ಇನ್ನೂ ಇರಲೇಬೇಕು.
ಇದೆಲ್ಲ ಆದದ್ದು ಏನು ಯಾಕೆ ಎಂದು
ತಿಳಿದಿರುವವರು
ಅಷ್ಟು ತಿಳಿಯದವರಿಗೆ ಅವಕಾಶ ಮಾಡಿಕೊಟ್ಟು
ಜಾಗಖಾಲಿ ಮಾಡಲೇಬೇಕು.
ಅಷ್ಟು ತಿಳಿಯದವರು
ಏನೂ ತಿಳಿಯದವರಿಗೆ
ಅವರು ಏನೇನೋ ತಿಳಿಯದು ಎಂದು ಕೂಡಾ ತಿಳಿಯದವರಿಗೆ
ಅವಕಾಶ ಮಾಡಿಕೊಡುತ್ತಾರೆ.
ಆಮೇಲೆ
ಕಾರ್‍ಯಕ್ರಮಗಳನ್ನೆಲ್ಲ ಮುಚ್ಚಿ ಬೆಳೆದ
ಹಸಿರು ಹುಲ್ಲಿನ ಮೇಲೆ,
ಹಲ್ಲಿನಲ್ಲಿ ಹುಲ್ಲಿನೆಳೆ ಕಚ್ಚುತ್ತಾ
ಮೇಲೆ ತೇಲುವ ಮೋಡವನ್ನು
ಬಿಟ್ಟ ಕಣ್ಣು ಬಿಟ್ಟಂತೆ ನೋಡುತ್ತಾ
ಅಂಗಾತ ಮಲಗಿದವನು ಇದ್ದೇ ಇರಬೇಕು.
*****
ಮೂಲ: ವಿಸ್ಲಾವಾ ಝ್ಯಿಂಬ್ರೊಸ್ಕ / Wisława Szymborska

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್