Home / ಕವನ / ಅನುವಾದ / ಕೊನೆ, ಮೊದಲು

ಕೊನೆ, ಮೊದಲು

ಪ್ರತಿಯೊಂದು ಯುದ್ಧಮುಗಿದ ಮೇಲೂ
ಯಾರಾದರೂ ಮತ್ತೆ ಎಲ್ಲವನ್ನೂ ಅಣಿಗೊಳಿಸಬೇಕು.
ಹಾಳಾದದ್ದೆಲ್ಲ ಮತ್ತೆ ತನಷ್ಟಕ್ಕೇ
ಸರಿಯಾಗುವುದಿಲ್ಲ ತಾನೇ?

ಯಾರಾದರೂ ಬಂದು ರಸ್ತೆ ಮೇಲೆ ಬಿದ್ದ
ಕಲ್ಲು ಮಣ್ಣು ಪಕ್ಕಕ್ಕೆ ತಳ್ಳಿ
ಹೆಣ ಹೂತ್ತೆಗಾಡಿಗಳು
ಸಾಗುವುದಕ್ಕೆ ದಾರಿ ಮಾಡಬೇಕು.

ಯಾರಾದರೂ ಸರಿ
ಗಾಜಿನ ಚೂರು, ರಕ್ತದ ಬಟ್ಟೆ ರಾಶಿ,
ಸೋಫಾ ಸ್ಪ್ರಿಂಗು, ಕೆಸರು, ಬೂದಿ, ಇಟ್ಟಿಗೆ,
ಸಿಮೆಂಟು ಕಬ್ಬಿಣದ ಅವಶೇಷಗಳ ನಡುವೆ ಕಷ್ಪಪಡಲೇಬೇಕು

ಯಾರಾದರೂ ಬಂದು
ಗೋಡೆಗೆ ಆಸರೆಯಾಗಿ ಕಂಬವನ್ನು ಎತ್ತಿನಿಲ್ಲಿಸಬೇಕು,
ಕಿಟಕಿಗೆ ಗಾಜು ಹಾಕಬೇಕು, ಬಾಗಿಲುವಾಡ ಕೂಡಿಸಬೇಕು.

ಸಂಗೀತದ ಸದ್ದಿಲ್ಲ, ಫೋಟೋಗಳ ಸುಳಿವಿಲ್ಲ
ವರ್‍ಷಗಟ್ಟಲೆ ಸುಮೃನೆ ದುಡಿಯಬೇಕು.
ಕ್ಯಾಮೆರಾಗಳೆಲ್ಲ ಬೇರೆ ಹೊಸ ಯುದ್ಧಗಳ
ಫೋಟೋ ತೆಗೆಯಲು ಹೋಗಿವೆ.
ಸೇತುವೆಗಳು ಹೊಸವಾಗಬೇಕು,
ಅಂಗಿ ತೋಳು ಮೇಲಕ್ಕೆ ಮಡಿಸಿ ಮಡಿಸಿ
ಚಿಂದಿ ಚಿಂದಿಯಾಗಬೇಕು.

ಪೊರಕೆ ಹಿಡಿದ ಯಾರಾದರೂ
ಇದೆಲ್ಲ ಹೇಗಾಯಿತೆಂದು ನೆನಪು ಮಾಡಿಕೊಳ್ಳುತ್ತಾರೆ.
ಸುಮ್ಮನೆ ನಿಂತ ಇನ್ನು ಯಾರೋ
ಗಾಯವಿರದ ತಮ್ಮ ತಲೆ ತೂಗುತ್ತಾ ಕೇಳುತ್ತಾರೆ.
ಅಲ್ಲೆ ಸಮೀಪದಲ್ಲಿ ಬಹಳ ಜನ
ಈ ಹಳೆಯ ಯುದ್ಧದ ಕತೆಯೆಲ್ಲ
ಬರೀ ಬೋರು ಅಂದುಕೊಳ್ಳುತ್ತ ಇರಲೇಬೇಕು.
ಬೆಳೆದ ಮುಳ್ಳು ಪೊದೆಯ ಅಡಿಯಲ್ಲಿ
ಸಿಕ್ಕುಬಿದ್ದಿರುವ ತುಕ್ಕುಹಿಡಿದ
ವಾಗ್ವಾದವನ್ನು ಕಿತ್ತು ಆಗಾಗ ತಿಪ್ಪೆಗೆ ಎಸೆಯುವವರು
ಯಾರಾದರೂ ಇನ್ನೂ ಇರಲೇಬೇಕು.
ಇದೆಲ್ಲ ಆದದ್ದು ಏನು ಯಾಕೆ ಎಂದು
ತಿಳಿದಿರುವವರು
ಅಷ್ಟು ತಿಳಿಯದವರಿಗೆ ಅವಕಾಶ ಮಾಡಿಕೊಟ್ಟು
ಜಾಗಖಾಲಿ ಮಾಡಲೇಬೇಕು.
ಅಷ್ಟು ತಿಳಿಯದವರು
ಏನೂ ತಿಳಿಯದವರಿಗೆ
ಅವರು ಏನೇನೋ ತಿಳಿಯದು ಎಂದು ಕೂಡಾ ತಿಳಿಯದವರಿಗೆ
ಅವಕಾಶ ಮಾಡಿಕೊಡುತ್ತಾರೆ.
ಆಮೇಲೆ
ಕಾರ್‍ಯಕ್ರಮಗಳನ್ನೆಲ್ಲ ಮುಚ್ಚಿ ಬೆಳೆದ
ಹಸಿರು ಹುಲ್ಲಿನ ಮೇಲೆ,
ಹಲ್ಲಿನಲ್ಲಿ ಹುಲ್ಲಿನೆಳೆ ಕಚ್ಚುತ್ತಾ
ಮೇಲೆ ತೇಲುವ ಮೋಡವನ್ನು
ಬಿಟ್ಟ ಕಣ್ಣು ಬಿಟ್ಟಂತೆ ನೋಡುತ್ತಾ
ಅಂಗಾತ ಮಲಗಿದವನು ಇದ್ದೇ ಇರಬೇಕು.
*****
ಮೂಲ: ವಿಸ್ಲಾವಾ ಝ್ಯಿಂಬ್ರೊಸ್ಕ / Wisława Szymborska

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...