Home / ಕವನ / ಅನುವಾದ / ಕೊನೆ, ಮೊದಲು

ಕೊನೆ, ಮೊದಲು

ಪ್ರತಿಯೊಂದು ಯುದ್ಧಮುಗಿದ ಮೇಲೂ
ಯಾರಾದರೂ ಮತ್ತೆ ಎಲ್ಲವನ್ನೂ ಅಣಿಗೊಳಿಸಬೇಕು.
ಹಾಳಾದದ್ದೆಲ್ಲ ಮತ್ತೆ ತನಷ್ಟಕ್ಕೇ
ಸರಿಯಾಗುವುದಿಲ್ಲ ತಾನೇ?

ಯಾರಾದರೂ ಬಂದು ರಸ್ತೆ ಮೇಲೆ ಬಿದ್ದ
ಕಲ್ಲು ಮಣ್ಣು ಪಕ್ಕಕ್ಕೆ ತಳ್ಳಿ
ಹೆಣ ಹೂತ್ತೆಗಾಡಿಗಳು
ಸಾಗುವುದಕ್ಕೆ ದಾರಿ ಮಾಡಬೇಕು.

ಯಾರಾದರೂ ಸರಿ
ಗಾಜಿನ ಚೂರು, ರಕ್ತದ ಬಟ್ಟೆ ರಾಶಿ,
ಸೋಫಾ ಸ್ಪ್ರಿಂಗು, ಕೆಸರು, ಬೂದಿ, ಇಟ್ಟಿಗೆ,
ಸಿಮೆಂಟು ಕಬ್ಬಿಣದ ಅವಶೇಷಗಳ ನಡುವೆ ಕಷ್ಪಪಡಲೇಬೇಕು

ಯಾರಾದರೂ ಬಂದು
ಗೋಡೆಗೆ ಆಸರೆಯಾಗಿ ಕಂಬವನ್ನು ಎತ್ತಿನಿಲ್ಲಿಸಬೇಕು,
ಕಿಟಕಿಗೆ ಗಾಜು ಹಾಕಬೇಕು, ಬಾಗಿಲುವಾಡ ಕೂಡಿಸಬೇಕು.

ಸಂಗೀತದ ಸದ್ದಿಲ್ಲ, ಫೋಟೋಗಳ ಸುಳಿವಿಲ್ಲ
ವರ್‍ಷಗಟ್ಟಲೆ ಸುಮೃನೆ ದುಡಿಯಬೇಕು.
ಕ್ಯಾಮೆರಾಗಳೆಲ್ಲ ಬೇರೆ ಹೊಸ ಯುದ್ಧಗಳ
ಫೋಟೋ ತೆಗೆಯಲು ಹೋಗಿವೆ.
ಸೇತುವೆಗಳು ಹೊಸವಾಗಬೇಕು,
ಅಂಗಿ ತೋಳು ಮೇಲಕ್ಕೆ ಮಡಿಸಿ ಮಡಿಸಿ
ಚಿಂದಿ ಚಿಂದಿಯಾಗಬೇಕು.

ಪೊರಕೆ ಹಿಡಿದ ಯಾರಾದರೂ
ಇದೆಲ್ಲ ಹೇಗಾಯಿತೆಂದು ನೆನಪು ಮಾಡಿಕೊಳ್ಳುತ್ತಾರೆ.
ಸುಮ್ಮನೆ ನಿಂತ ಇನ್ನು ಯಾರೋ
ಗಾಯವಿರದ ತಮ್ಮ ತಲೆ ತೂಗುತ್ತಾ ಕೇಳುತ್ತಾರೆ.
ಅಲ್ಲೆ ಸಮೀಪದಲ್ಲಿ ಬಹಳ ಜನ
ಈ ಹಳೆಯ ಯುದ್ಧದ ಕತೆಯೆಲ್ಲ
ಬರೀ ಬೋರು ಅಂದುಕೊಳ್ಳುತ್ತ ಇರಲೇಬೇಕು.
ಬೆಳೆದ ಮುಳ್ಳು ಪೊದೆಯ ಅಡಿಯಲ್ಲಿ
ಸಿಕ್ಕುಬಿದ್ದಿರುವ ತುಕ್ಕುಹಿಡಿದ
ವಾಗ್ವಾದವನ್ನು ಕಿತ್ತು ಆಗಾಗ ತಿಪ್ಪೆಗೆ ಎಸೆಯುವವರು
ಯಾರಾದರೂ ಇನ್ನೂ ಇರಲೇಬೇಕು.
ಇದೆಲ್ಲ ಆದದ್ದು ಏನು ಯಾಕೆ ಎಂದು
ತಿಳಿದಿರುವವರು
ಅಷ್ಟು ತಿಳಿಯದವರಿಗೆ ಅವಕಾಶ ಮಾಡಿಕೊಟ್ಟು
ಜಾಗಖಾಲಿ ಮಾಡಲೇಬೇಕು.
ಅಷ್ಟು ತಿಳಿಯದವರು
ಏನೂ ತಿಳಿಯದವರಿಗೆ
ಅವರು ಏನೇನೋ ತಿಳಿಯದು ಎಂದು ಕೂಡಾ ತಿಳಿಯದವರಿಗೆ
ಅವಕಾಶ ಮಾಡಿಕೊಡುತ್ತಾರೆ.
ಆಮೇಲೆ
ಕಾರ್‍ಯಕ್ರಮಗಳನ್ನೆಲ್ಲ ಮುಚ್ಚಿ ಬೆಳೆದ
ಹಸಿರು ಹುಲ್ಲಿನ ಮೇಲೆ,
ಹಲ್ಲಿನಲ್ಲಿ ಹುಲ್ಲಿನೆಳೆ ಕಚ್ಚುತ್ತಾ
ಮೇಲೆ ತೇಲುವ ಮೋಡವನ್ನು
ಬಿಟ್ಟ ಕಣ್ಣು ಬಿಟ್ಟಂತೆ ನೋಡುತ್ತಾ
ಅಂಗಾತ ಮಲಗಿದವನು ಇದ್ದೇ ಇರಬೇಕು.
*****
ಮೂಲ: ವಿಸ್ಲಾವಾ ಝ್ಯಿಂಬ್ರೊಸ್ಕ / Wisława Szymborska

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...