Home / ಕವನ / ಅನುವಾದ / ಕೊನೆ, ಮೊದಲು

ಕೊನೆ, ಮೊದಲು

ಪ್ರತಿಯೊಂದು ಯುದ್ಧಮುಗಿದ ಮೇಲೂ
ಯಾರಾದರೂ ಮತ್ತೆ ಎಲ್ಲವನ್ನೂ ಅಣಿಗೊಳಿಸಬೇಕು.
ಹಾಳಾದದ್ದೆಲ್ಲ ಮತ್ತೆ ತನಷ್ಟಕ್ಕೇ
ಸರಿಯಾಗುವುದಿಲ್ಲ ತಾನೇ?

ಯಾರಾದರೂ ಬಂದು ರಸ್ತೆ ಮೇಲೆ ಬಿದ್ದ
ಕಲ್ಲು ಮಣ್ಣು ಪಕ್ಕಕ್ಕೆ ತಳ್ಳಿ
ಹೆಣ ಹೂತ್ತೆಗಾಡಿಗಳು
ಸಾಗುವುದಕ್ಕೆ ದಾರಿ ಮಾಡಬೇಕು.

ಯಾರಾದರೂ ಸರಿ
ಗಾಜಿನ ಚೂರು, ರಕ್ತದ ಬಟ್ಟೆ ರಾಶಿ,
ಸೋಫಾ ಸ್ಪ್ರಿಂಗು, ಕೆಸರು, ಬೂದಿ, ಇಟ್ಟಿಗೆ,
ಸಿಮೆಂಟು ಕಬ್ಬಿಣದ ಅವಶೇಷಗಳ ನಡುವೆ ಕಷ್ಪಪಡಲೇಬೇಕು

ಯಾರಾದರೂ ಬಂದು
ಗೋಡೆಗೆ ಆಸರೆಯಾಗಿ ಕಂಬವನ್ನು ಎತ್ತಿನಿಲ್ಲಿಸಬೇಕು,
ಕಿಟಕಿಗೆ ಗಾಜು ಹಾಕಬೇಕು, ಬಾಗಿಲುವಾಡ ಕೂಡಿಸಬೇಕು.

ಸಂಗೀತದ ಸದ್ದಿಲ್ಲ, ಫೋಟೋಗಳ ಸುಳಿವಿಲ್ಲ
ವರ್‍ಷಗಟ್ಟಲೆ ಸುಮೃನೆ ದುಡಿಯಬೇಕು.
ಕ್ಯಾಮೆರಾಗಳೆಲ್ಲ ಬೇರೆ ಹೊಸ ಯುದ್ಧಗಳ
ಫೋಟೋ ತೆಗೆಯಲು ಹೋಗಿವೆ.
ಸೇತುವೆಗಳು ಹೊಸವಾಗಬೇಕು,
ಅಂಗಿ ತೋಳು ಮೇಲಕ್ಕೆ ಮಡಿಸಿ ಮಡಿಸಿ
ಚಿಂದಿ ಚಿಂದಿಯಾಗಬೇಕು.

ಪೊರಕೆ ಹಿಡಿದ ಯಾರಾದರೂ
ಇದೆಲ್ಲ ಹೇಗಾಯಿತೆಂದು ನೆನಪು ಮಾಡಿಕೊಳ್ಳುತ್ತಾರೆ.
ಸುಮ್ಮನೆ ನಿಂತ ಇನ್ನು ಯಾರೋ
ಗಾಯವಿರದ ತಮ್ಮ ತಲೆ ತೂಗುತ್ತಾ ಕೇಳುತ್ತಾರೆ.
ಅಲ್ಲೆ ಸಮೀಪದಲ್ಲಿ ಬಹಳ ಜನ
ಈ ಹಳೆಯ ಯುದ್ಧದ ಕತೆಯೆಲ್ಲ
ಬರೀ ಬೋರು ಅಂದುಕೊಳ್ಳುತ್ತ ಇರಲೇಬೇಕು.
ಬೆಳೆದ ಮುಳ್ಳು ಪೊದೆಯ ಅಡಿಯಲ್ಲಿ
ಸಿಕ್ಕುಬಿದ್ದಿರುವ ತುಕ್ಕುಹಿಡಿದ
ವಾಗ್ವಾದವನ್ನು ಕಿತ್ತು ಆಗಾಗ ತಿಪ್ಪೆಗೆ ಎಸೆಯುವವರು
ಯಾರಾದರೂ ಇನ್ನೂ ಇರಲೇಬೇಕು.
ಇದೆಲ್ಲ ಆದದ್ದು ಏನು ಯಾಕೆ ಎಂದು
ತಿಳಿದಿರುವವರು
ಅಷ್ಟು ತಿಳಿಯದವರಿಗೆ ಅವಕಾಶ ಮಾಡಿಕೊಟ್ಟು
ಜಾಗಖಾಲಿ ಮಾಡಲೇಬೇಕು.
ಅಷ್ಟು ತಿಳಿಯದವರು
ಏನೂ ತಿಳಿಯದವರಿಗೆ
ಅವರು ಏನೇನೋ ತಿಳಿಯದು ಎಂದು ಕೂಡಾ ತಿಳಿಯದವರಿಗೆ
ಅವಕಾಶ ಮಾಡಿಕೊಡುತ್ತಾರೆ.
ಆಮೇಲೆ
ಕಾರ್‍ಯಕ್ರಮಗಳನ್ನೆಲ್ಲ ಮುಚ್ಚಿ ಬೆಳೆದ
ಹಸಿರು ಹುಲ್ಲಿನ ಮೇಲೆ,
ಹಲ್ಲಿನಲ್ಲಿ ಹುಲ್ಲಿನೆಳೆ ಕಚ್ಚುತ್ತಾ
ಮೇಲೆ ತೇಲುವ ಮೋಡವನ್ನು
ಬಿಟ್ಟ ಕಣ್ಣು ಬಿಟ್ಟಂತೆ ನೋಡುತ್ತಾ
ಅಂಗಾತ ಮಲಗಿದವನು ಇದ್ದೇ ಇರಬೇಕು.
*****
ಮೂಲ: ವಿಸ್ಲಾವಾ ಝ್ಯಿಂಬ್ರೊಸ್ಕ / Wisława Szymborska

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...