Home / ಕವನ / ಅನುವಾದ / ಕೊನೆ, ಮೊದಲು

ಕೊನೆ, ಮೊದಲು

ಪ್ರತಿಯೊಂದು ಯುದ್ಧಮುಗಿದ ಮೇಲೂ
ಯಾರಾದರೂ ಮತ್ತೆ ಎಲ್ಲವನ್ನೂ ಅಣಿಗೊಳಿಸಬೇಕು.
ಹಾಳಾದದ್ದೆಲ್ಲ ಮತ್ತೆ ತನಷ್ಟಕ್ಕೇ
ಸರಿಯಾಗುವುದಿಲ್ಲ ತಾನೇ?

ಯಾರಾದರೂ ಬಂದು ರಸ್ತೆ ಮೇಲೆ ಬಿದ್ದ
ಕಲ್ಲು ಮಣ್ಣು ಪಕ್ಕಕ್ಕೆ ತಳ್ಳಿ
ಹೆಣ ಹೂತ್ತೆಗಾಡಿಗಳು
ಸಾಗುವುದಕ್ಕೆ ದಾರಿ ಮಾಡಬೇಕು.

ಯಾರಾದರೂ ಸರಿ
ಗಾಜಿನ ಚೂರು, ರಕ್ತದ ಬಟ್ಟೆ ರಾಶಿ,
ಸೋಫಾ ಸ್ಪ್ರಿಂಗು, ಕೆಸರು, ಬೂದಿ, ಇಟ್ಟಿಗೆ,
ಸಿಮೆಂಟು ಕಬ್ಬಿಣದ ಅವಶೇಷಗಳ ನಡುವೆ ಕಷ್ಪಪಡಲೇಬೇಕು

ಯಾರಾದರೂ ಬಂದು
ಗೋಡೆಗೆ ಆಸರೆಯಾಗಿ ಕಂಬವನ್ನು ಎತ್ತಿನಿಲ್ಲಿಸಬೇಕು,
ಕಿಟಕಿಗೆ ಗಾಜು ಹಾಕಬೇಕು, ಬಾಗಿಲುವಾಡ ಕೂಡಿಸಬೇಕು.

ಸಂಗೀತದ ಸದ್ದಿಲ್ಲ, ಫೋಟೋಗಳ ಸುಳಿವಿಲ್ಲ
ವರ್‍ಷಗಟ್ಟಲೆ ಸುಮೃನೆ ದುಡಿಯಬೇಕು.
ಕ್ಯಾಮೆರಾಗಳೆಲ್ಲ ಬೇರೆ ಹೊಸ ಯುದ್ಧಗಳ
ಫೋಟೋ ತೆಗೆಯಲು ಹೋಗಿವೆ.
ಸೇತುವೆಗಳು ಹೊಸವಾಗಬೇಕು,
ಅಂಗಿ ತೋಳು ಮೇಲಕ್ಕೆ ಮಡಿಸಿ ಮಡಿಸಿ
ಚಿಂದಿ ಚಿಂದಿಯಾಗಬೇಕು.

ಪೊರಕೆ ಹಿಡಿದ ಯಾರಾದರೂ
ಇದೆಲ್ಲ ಹೇಗಾಯಿತೆಂದು ನೆನಪು ಮಾಡಿಕೊಳ್ಳುತ್ತಾರೆ.
ಸುಮ್ಮನೆ ನಿಂತ ಇನ್ನು ಯಾರೋ
ಗಾಯವಿರದ ತಮ್ಮ ತಲೆ ತೂಗುತ್ತಾ ಕೇಳುತ್ತಾರೆ.
ಅಲ್ಲೆ ಸಮೀಪದಲ್ಲಿ ಬಹಳ ಜನ
ಈ ಹಳೆಯ ಯುದ್ಧದ ಕತೆಯೆಲ್ಲ
ಬರೀ ಬೋರು ಅಂದುಕೊಳ್ಳುತ್ತ ಇರಲೇಬೇಕು.
ಬೆಳೆದ ಮುಳ್ಳು ಪೊದೆಯ ಅಡಿಯಲ್ಲಿ
ಸಿಕ್ಕುಬಿದ್ದಿರುವ ತುಕ್ಕುಹಿಡಿದ
ವಾಗ್ವಾದವನ್ನು ಕಿತ್ತು ಆಗಾಗ ತಿಪ್ಪೆಗೆ ಎಸೆಯುವವರು
ಯಾರಾದರೂ ಇನ್ನೂ ಇರಲೇಬೇಕು.
ಇದೆಲ್ಲ ಆದದ್ದು ಏನು ಯಾಕೆ ಎಂದು
ತಿಳಿದಿರುವವರು
ಅಷ್ಟು ತಿಳಿಯದವರಿಗೆ ಅವಕಾಶ ಮಾಡಿಕೊಟ್ಟು
ಜಾಗಖಾಲಿ ಮಾಡಲೇಬೇಕು.
ಅಷ್ಟು ತಿಳಿಯದವರು
ಏನೂ ತಿಳಿಯದವರಿಗೆ
ಅವರು ಏನೇನೋ ತಿಳಿಯದು ಎಂದು ಕೂಡಾ ತಿಳಿಯದವರಿಗೆ
ಅವಕಾಶ ಮಾಡಿಕೊಡುತ್ತಾರೆ.
ಆಮೇಲೆ
ಕಾರ್‍ಯಕ್ರಮಗಳನ್ನೆಲ್ಲ ಮುಚ್ಚಿ ಬೆಳೆದ
ಹಸಿರು ಹುಲ್ಲಿನ ಮೇಲೆ,
ಹಲ್ಲಿನಲ್ಲಿ ಹುಲ್ಲಿನೆಳೆ ಕಚ್ಚುತ್ತಾ
ಮೇಲೆ ತೇಲುವ ಮೋಡವನ್ನು
ಬಿಟ್ಟ ಕಣ್ಣು ಬಿಟ್ಟಂತೆ ನೋಡುತ್ತಾ
ಅಂಗಾತ ಮಲಗಿದವನು ಇದ್ದೇ ಇರಬೇಕು.
*****
ಮೂಲ: ವಿಸ್ಲಾವಾ ಝ್ಯಿಂಬ್ರೊಸ್ಕ / Wisława Szymborska

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...