Home / ಕವನ / ಅನುವಾದ / ವಿಗ್ರಹ

ವಿಗ್ರಹ

ಹೌದು, ನನಗವನು ಗೊತ್ತಿದ್ದ. ವರ್ಷಗಟ್ಟಲೆ ಅವನೊಡನೆ ಇದ್ದೆ.
ಚಿನ್ನದಂಥ ಮನುಷ್ಯ, ಕಲ್ಲಿನಷ್ಟು ಗಟ್ಟಿ. ಸುಸ್ತಾಗಿದ್ದ.
ಪೆರುಗ್ವೇಯಲ್ಲಿ ಅಪ್ಪ ಅಮ್ಮನನ್ನು ಬಿಟ್ಟು
ಮಕ್ಕಳನ್ನು ಬಿಟ್ಟು, ಮಾವ ಚಿಕ್ಚಪ್ಪಂದಿರನ್ನು ಬಿಟ್ಟು
ಹೊಸದಾಗಿ ಭಾವನಂಟರಾದವರನ್ನು ಬಿಟ್ಟು,
ಮನೆ ಬಿಟ್ಟು, ಸಾಕಿದ್ದ ಕೋಳಿ ಬಿಟ್ಟು,
ಅರ್ಧ ಓದಿದ್ದ, ಇನ್ನೂ ಓದದೇ ಇದ್ದ ಪುಸ್ತಕ ಬಿಟ್ಟು
ಹೋಗಿದ್ದ. ಬಾಗಿಲು ತಟ್ಟಿದಾಗ ಅವನೆ ತೆರೆದ,
ಪೊಲೀಸರು ಹಿಡಿದುಕೊಂಡು ಹೋದರು.
ಹೊಡೆದರು, ಫ್ರಾನ್ಸು, ಡೆನ್ಮಾರ್‍ಕು
ಸ್ಪೇನು, ಇಟಲಿ ಹೋದಲೆಲ್ಲ ರಕ್ತಕಾರಿಕೊಂಡ.
ಅಲೆದಾಡುತ್ತಲೇ ಸತ್ತ. ನನಗೀಗ ಅವನ ಮುಖ ಕಾಣುತ್ತಿಲ್ಲ.
ಗಂಭೀರ ಮೌನ ಕೇಳಿಸುತ್ತಿಲ್ಲ. ಆಮೇಲೆ ಒಮ್ಮೆ,
ಬಿರುಗಾಳಿ ರಾತ್ರಿಯಲ್ಲಿ,
ಬೆಟ್ಟಕ್ಕೆ ಹಿಮದ ನಯ ಬಟ್ಟೆ ಕವಿಯುತ್ತಿದ್ದಾಗ,
ಕುದುರೆ ಮೇಲೆ ಹೋಗುತ್ತಾ
ಅಲ್ಲಿ, ದೂರದಲ್ಲಿ, ಗೆಳೆಯನನ್ನು ಕಂಡೆ.
ಕಲ್ಲಿನಲ್ಲಿ ಮೂಡಿದ್ದ ಮುಖ,
ಕಾಡು ಹವೆಯ ಧಿಕ್ಕರಿಸಿದ ಭಾವ,
ಪೀಡಿತರ ನರಳಾಟವನ್ನು ಮುಖಕ್ಕೆ ತಂದಪ್ಪಳಿಸುವ ಗಾಳಿ.
ಅಲ್ಲಿ ಗಡೀಪಾರಾದವನು ನೆಲೆ ಮುಟ್ಟಿದ.
ತನ್ನದೇ ದೇಶದಲ್ಲಿ ಕಲ್ಲಾಗಿ ಬದುಕಿದ.
*****
ಮೂಲ: ಪಾಬ್ಲೋ ನೆರುಡಾ / Pablo Neruda

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...