Home / ಕವನ / ಅನುವಾದ / ವಿಗ್ರಹ

ವಿಗ್ರಹ

ಹೌದು, ನನಗವನು ಗೊತ್ತಿದ್ದ. ವರ್ಷಗಟ್ಟಲೆ ಅವನೊಡನೆ ಇದ್ದೆ.
ಚಿನ್ನದಂಥ ಮನುಷ್ಯ, ಕಲ್ಲಿನಷ್ಟು ಗಟ್ಟಿ. ಸುಸ್ತಾಗಿದ್ದ.
ಪೆರುಗ್ವೇಯಲ್ಲಿ ಅಪ್ಪ ಅಮ್ಮನನ್ನು ಬಿಟ್ಟು
ಮಕ್ಕಳನ್ನು ಬಿಟ್ಟು, ಮಾವ ಚಿಕ್ಚಪ್ಪಂದಿರನ್ನು ಬಿಟ್ಟು
ಹೊಸದಾಗಿ ಭಾವನಂಟರಾದವರನ್ನು ಬಿಟ್ಟು,
ಮನೆ ಬಿಟ್ಟು, ಸಾಕಿದ್ದ ಕೋಳಿ ಬಿಟ್ಟು,
ಅರ್ಧ ಓದಿದ್ದ, ಇನ್ನೂ ಓದದೇ ಇದ್ದ ಪುಸ್ತಕ ಬಿಟ್ಟು
ಹೋಗಿದ್ದ. ಬಾಗಿಲು ತಟ್ಟಿದಾಗ ಅವನೆ ತೆರೆದ,
ಪೊಲೀಸರು ಹಿಡಿದುಕೊಂಡು ಹೋದರು.
ಹೊಡೆದರು, ಫ್ರಾನ್ಸು, ಡೆನ್ಮಾರ್‍ಕು
ಸ್ಪೇನು, ಇಟಲಿ ಹೋದಲೆಲ್ಲ ರಕ್ತಕಾರಿಕೊಂಡ.
ಅಲೆದಾಡುತ್ತಲೇ ಸತ್ತ. ನನಗೀಗ ಅವನ ಮುಖ ಕಾಣುತ್ತಿಲ್ಲ.
ಗಂಭೀರ ಮೌನ ಕೇಳಿಸುತ್ತಿಲ್ಲ. ಆಮೇಲೆ ಒಮ್ಮೆ,
ಬಿರುಗಾಳಿ ರಾತ್ರಿಯಲ್ಲಿ,
ಬೆಟ್ಟಕ್ಕೆ ಹಿಮದ ನಯ ಬಟ್ಟೆ ಕವಿಯುತ್ತಿದ್ದಾಗ,
ಕುದುರೆ ಮೇಲೆ ಹೋಗುತ್ತಾ
ಅಲ್ಲಿ, ದೂರದಲ್ಲಿ, ಗೆಳೆಯನನ್ನು ಕಂಡೆ.
ಕಲ್ಲಿನಲ್ಲಿ ಮೂಡಿದ್ದ ಮುಖ,
ಕಾಡು ಹವೆಯ ಧಿಕ್ಕರಿಸಿದ ಭಾವ,
ಪೀಡಿತರ ನರಳಾಟವನ್ನು ಮುಖಕ್ಕೆ ತಂದಪ್ಪಳಿಸುವ ಗಾಳಿ.
ಅಲ್ಲಿ ಗಡೀಪಾರಾದವನು ನೆಲೆ ಮುಟ್ಟಿದ.
ತನ್ನದೇ ದೇಶದಲ್ಲಿ ಕಲ್ಲಾಗಿ ಬದುಕಿದ.
*****
ಮೂಲ: ಪಾಬ್ಲೋ ನೆರುಡಾ / Pablo Neruda

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...