ಏಕಾಂತ

ಏಕಾಂತವು ಮಳೆಯಂತೆ.
ಸಂಜೆ ಹೊತ್ತಿನಲ್ಲಿ ಸಮುದ್ರದ ಕಡೆಯಿಂದ ನಮ್ಮ ಭೇಟಿಗೆ ಬರುವುದು.
ದೂರ ತುಂಬ ದೂರದ ಬಯಲಲ್ಲಿ ಹಬೆಯಾಗಿ ಆಕಾಶಕ್ಕೇರುವುದು,
ಏರುವುದು ತನ್ನ ಹಕ್ಕು ಅನ್ನುವಂತೆ.
ಅಲ್ಲಿಂದ ಬಂದು ಊರಿನ ಮೇಲೆ ಸುರಿಯುವುದು.
ಮಬ್ಬು ಕತ್ತಲ ವೇಳೆಯಲ್ಲಿ
ಊರ ಬೀದಿಗಳೆಲ್ಲ ಮುಂಜಾವಿನತ್ತ ತಿರುಗಿರುವಾಗ,
ಬಯಸಿದಾಸೆಗಳೆಲ್ಲ ತೀರಿಹೋಗಿ ಮೈಗಳೆಲ್ಲ
ದುಃಖದಲ್ಲಿ ಒಂಟಿಯಾಗಿರುವಾಗ,
ಒಬ್ಬರನ್ನೊಬ್ಬರು ದ್ವೇಷಿಸುವ ಮನುಷ್ಯರೆಲ್ಲ
ಅದೇ ಹಾಸುಗೆಯಲ್ಲಿ ನಿದ್ದೆಯಲ್ಲಿ ಅವಿತಿರುವಾಗ.
ಏಕಾಂತ ನದಿಯತ್ತ ಹರಿದುಹೋಗುವುದು.
*****
ಮೂಲ: ರೇನರ್ ಮಾರಿಯಾ ರಿಲ್ಕ್ / Rainer Maria Rilke

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹರಿಚರಣ ರತನ
Next post ಮಾಗಿಯ ಚಳಿಗೆ ಕವಿತೆ ಕಂಬಳಿ

ಸಣ್ಣ ಕತೆ

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

cheap jordans|wholesale air max|wholesale jordans|wholesale jewelry|wholesale jerseys