ಏಕಾಂತವು ಮಳೆಯಂತೆ.
ಸಂಜೆ ಹೊತ್ತಿನಲ್ಲಿ ಸಮುದ್ರದ ಕಡೆಯಿಂದ ನಮ್ಮ ಭೇಟಿಗೆ ಬರುವುದು.
ದೂರ ತುಂಬ ದೂರದ ಬಯಲಲ್ಲಿ ಹಬೆಯಾಗಿ ಆಕಾಶಕ್ಕೇರುವುದು,
ಏರುವುದು ತನ್ನ ಹಕ್ಕು ಅನ್ನುವಂತೆ.
ಅಲ್ಲಿಂದ ಬಂದು ಊರಿನ ಮೇಲೆ ಸುರಿಯುವುದು.
ಮಬ್ಬು ಕತ್ತಲ ವೇಳೆಯಲ್ಲಿ
ಊರ ಬೀದಿಗಳೆಲ್ಲ ಮುಂಜಾವಿನತ್ತ ತಿರುಗಿರುವಾಗ,
ಬಯಸಿದಾಸೆಗಳೆಲ್ಲ ತೀರಿಹೋಗಿ ಮೈಗಳೆಲ್ಲ
ದುಃಖದಲ್ಲಿ ಒಂಟಿಯಾಗಿರುವಾಗ,
ಒಬ್ಬರನ್ನೊಬ್ಬರು ದ್ವೇಷಿಸುವ ಮನುಷ್ಯರೆಲ್ಲ
ಅದೇ ಹಾಸುಗೆಯಲ್ಲಿ ನಿದ್ದೆಯಲ್ಲಿ ಅವಿತಿರುವಾಗ.
ಏಕಾಂತ ನದಿಯತ್ತ ಹರಿದುಹೋಗುವುದು.
*****
ಮೂಲ: ರೇನರ್ ಮಾರಿಯಾ ರಿಲ್ಕ್ / Rainer Maria Rilke
Related Post
ಸಣ್ಣ ಕತೆ
-
ದೇವರು ಮತ್ತು ಅಪಘಾತ
ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…
-
ಮೌನರಾಗ
ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…
-
ಮುಗ್ಧ
ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…
-
ಹೃದಯ ವೀಣೆ ಮಿಡಿಯೆ….
ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…
-
ಎರಡು…. ದೃಷ್ಟಿ!
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…