ಚಿಕ್ಕಂದಿನಲ್ಲಿ ಒಮ್ಮೆ

ಕೋಣೆಯಲ್ಲಿ ಸಮೃದ್ಧ ಕತ್ತಲೆ ನದಿಯಂತೆ ತುಂಬಿತ್ತು.
ಹುಡುಗ ತನ್ನೊಳಗೆ ತಾನು ಅಡಗಿದಂತೆ ಕುಳಿತಿದ್ದ.
ಅಮ್ಮ ಬಂದಳು, ಕನಸಿನೊಳಗೆ ಬಂದ ಇನ್ನೊಂದು ಕನಸಿನಂತೆ.
ನಿಶ್ಶಬ್ದವಾಗಿದ್ದ ಕಪಾಟಿನಲ್ಲಿ ಗಾಜಿನ ಲೋಟ ಇಷ್ಟೆ ಕಂಪಿಸಿತು.
ಗುಟ್ಟು ಬಿಟ್ಟುಕೊಟ್ಟಿತು ಕೋಣೆ ಅನ್ನಿಸಿತು ಅವಳಿಗೆ.
ಮುತ್ತಿಟ್ಬು ‘ನೀನೇನೋ ಪುಟ್ಟಾ’ ಅಂದಳು, ಮೆಲ್ಲಗೆ.
ಹುಡುಗ ನಾಚುತ್ತ, ಕಡೆಗಣ್ಣಲ್ಲಿ ಕತ್ತಲಲ್ಲಿದ್ದ ಪಿಯಾನೋ ನೋಡಿದ.
ಸಂಜೆ ಹೊತ್ತು ನುಡಿಸುತ್ತಿದ್ದಳು.
ರಾಗ ಬಲೆ ಬೀಸಿ ಹುಡುಗನ ತಬ್ಬಿ ಆಳಕ್ಕೆಳೆಯುತ್ತಿತ್ತು.
ಇಬ್ಬರೂ ಸುಮ್ಮನೆ ಕೂತರು. ಹುಡುಗನ ನೋಟ ತಗ್ಗಿ
ಅವಳ ಬೆರಳ ಮೇಲೆ ನಿಂತಿತು. ಉಂಗುರಗಳ ಭಾರಕ್ಕೆ
ಕುಗ್ಗಿದ ಬೆರಳು, ಹಿಮ ಬಿದ್ದ ನೆಲದಲ್ಲಿ ಕಷ್ಟಪಡುವ ನೇಗಿಲಂತೆ
ಪಿಯಾನೋದ ಬಿಳಿಯ ಮನೆಗಳ ಮೇಲೆ ಭಾರವಾಗಿ ಆಡಿದವು.
*****
ಮೂಲ: ರೇನರ್ ಮಾರಿಯಾ ರಿಲ್ಕ್ / Rainer Maria Rilke

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತ್ಯಾಗಮಯಿ ನೀ ಪೂರ್ಣಮಯಿ
Next post ಜ್ಞಾನಜಾಲ

ಸಣ್ಣ ಕತೆ

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…