ಚಿಕ್ಕಂದಿನಲ್ಲಿ ಒಮ್ಮೆ

ಕೋಣೆಯಲ್ಲಿ ಸಮೃದ್ಧ ಕತ್ತಲೆ ನದಿಯಂತೆ ತುಂಬಿತ್ತು.
ಹುಡುಗ ತನ್ನೊಳಗೆ ತಾನು ಅಡಗಿದಂತೆ ಕುಳಿತಿದ್ದ.
ಅಮ್ಮ ಬಂದಳು, ಕನಸಿನೊಳಗೆ ಬಂದ ಇನ್ನೊಂದು ಕನಸಿನಂತೆ.
ನಿಶ್ಶಬ್ದವಾಗಿದ್ದ ಕಪಾಟಿನಲ್ಲಿ ಗಾಜಿನ ಲೋಟ ಇಷ್ಟೆ ಕಂಪಿಸಿತು.
ಗುಟ್ಟು ಬಿಟ್ಟುಕೊಟ್ಟಿತು ಕೋಣೆ ಅನ್ನಿಸಿತು ಅವಳಿಗೆ.
ಮುತ್ತಿಟ್ಬು ‘ನೀನೇನೋ ಪುಟ್ಟಾ’ ಅಂದಳು, ಮೆಲ್ಲಗೆ.
ಹುಡುಗ ನಾಚುತ್ತ, ಕಡೆಗಣ್ಣಲ್ಲಿ ಕತ್ತಲಲ್ಲಿದ್ದ ಪಿಯಾನೋ ನೋಡಿದ.
ಸಂಜೆ ಹೊತ್ತು ನುಡಿಸುತ್ತಿದ್ದಳು.
ರಾಗ ಬಲೆ ಬೀಸಿ ಹುಡುಗನ ತಬ್ಬಿ ಆಳಕ್ಕೆಳೆಯುತ್ತಿತ್ತು.
ಇಬ್ಬರೂ ಸುಮ್ಮನೆ ಕೂತರು. ಹುಡುಗನ ನೋಟ ತಗ್ಗಿ
ಅವಳ ಬೆರಳ ಮೇಲೆ ನಿಂತಿತು. ಉಂಗುರಗಳ ಭಾರಕ್ಕೆ
ಕುಗ್ಗಿದ ಬೆರಳು, ಹಿಮ ಬಿದ್ದ ನೆಲದಲ್ಲಿ ಕಷ್ಟಪಡುವ ನೇಗಿಲಂತೆ
ಪಿಯಾನೋದ ಬಿಳಿಯ ಮನೆಗಳ ಮೇಲೆ ಭಾರವಾಗಿ ಆಡಿದವು.
*****
ಮೂಲ: ರೇನರ್ ಮಾರಿಯಾ ರಿಲ್ಕ್ / Rainer Maria Rilke

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತ್ಯಾಗಮಯಿ ನೀ ಪೂರ್ಣಮಯಿ
Next post ಜ್ಞಾನಜಾಲ

ಸಣ್ಣ ಕತೆ

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…