ಒಬ್ಬಂಟಿ

ಅಪರಿಚಿತ ಸಮುದ್ರದಲ್ಲಿ ಯಾನ ಮಾಡಿ ಬಂದವನಂತೆ
ಇಲ್ಲೇ ಬೇರು ಬಿಟ್ಟ ಈ ಜನರ ನಡುವೆ ನಾನು ಒಬ್ಬಂಟಿ.
ಅವರ ಮನೆ ತುಂಬಿ, ಅವರ ಮೇಜಿನ ಮೇಲೆಲ್ಲ ಹರಡಿರುವ ದಿನ ಅವರದ್ದೇ,
ನನಗೋ ಅವು ಬಹು ದೂರದ ಸತ್ಯಗಳು.
ಹೊಸ ಜಗತ್ತು ನನಗೆ ಕಾಣುತ್ತಿದೆ,
ಬಹುಶಃ ಚಂದ್ರನಂತೆ ನಿರ್ಜನವಾದ ಜಗತ್ತು,
ಅವರ ಒಂದೊಂದು ಭಾವವನ್ನೂ ಕೆದಕಿ ಕೆದಕಿ ನೋಡಿಕೊಳ್ಳಬೇಕು,
ಅವರ ಮಾತಿನ ದನಿಗೂ ಪರಿಚಿತ ಲಯವಿಲ್ಲ,
ನನ್ನೊಡನೆ ದೂರದಿಂದ ತಂದ ವಸ್ತುಗಳು,
ಇಲ್ಲಿರುವುದರೊಡನೆ ಹೋಲಿಸಿದರೆ, ವಿಚಿತ್ರ, ಬೇರೆ ಥರ :
ಅವರ ಜಗತ್ತಿನಲ್ಲಿ ಎಲ್ಲವೂ ಜೀವಂತ,
ಆದರೆ ನಾಚಿ, ಉಸಿರು ಬಿಡದೆ ಸುಮ್ಮನಿವೆ.
*****
ಮೂಲ: ರೇನರ್ ಮಾರಿಯಾ ರಿಲ್ಕ್ / Rainer Maria Rilke

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನನ್ನ ಎದೆಯ ಗೂಡಲ್ಲಿ
Next post ಕಪಿಲ್ : ವಿಷಾದದ ವಿದಾಯ

ಸಣ್ಣ ಕತೆ

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…