ಅಪರಿಚಿತ ಸಮುದ್ರದಲ್ಲಿ ಯಾನ ಮಾಡಿ ಬಂದವನಂತೆ
ಇಲ್ಲೇ ಬೇರು ಬಿಟ್ಟ ಈ ಜನರ ನಡುವೆ ನಾನು ಒಬ್ಬಂಟಿ.
ಅವರ ಮನೆ ತುಂಬಿ, ಅವರ ಮೇಜಿನ ಮೇಲೆಲ್ಲ ಹರಡಿರುವ ದಿನ ಅವರದ್ದೇ,
ನನಗೋ ಅವು ಬಹು ದೂರದ ಸತ್ಯಗಳು.
ಹೊಸ ಜಗತ್ತು ನನಗೆ ಕಾಣುತ್ತಿದೆ,
ಬಹುಶಃ ಚಂದ್ರನಂತೆ ನಿರ್ಜನವಾದ ಜಗತ್ತು,
ಅವರ ಒಂದೊಂದು ಭಾವವನ್ನೂ ಕೆದಕಿ ಕೆದಕಿ ನೋಡಿಕೊಳ್ಳಬೇಕು,
ಅವರ ಮಾತಿನ ದನಿಗೂ ಪರಿಚಿತ ಲಯವಿಲ್ಲ,
ನನ್ನೊಡನೆ ದೂರದಿಂದ ತಂದ ವಸ್ತುಗಳು,
ಇಲ್ಲಿರುವುದರೊಡನೆ ಹೋಲಿಸಿದರೆ, ವಿಚಿತ್ರ, ಬೇರೆ ಥರ :
ಅವರ ಜಗತ್ತಿನಲ್ಲಿ ಎಲ್ಲವೂ ಜೀವಂತ,
ಆದರೆ ನಾಚಿ, ಉಸಿರು ಬಿಡದೆ ಸುಮ್ಮನಿವೆ.
*****
ಮೂಲ: ರೇನರ್ ಮಾರಿಯಾ ರಿಲ್ಕ್ / Rainer Maria Rilke
Related Post
ಸಣ್ಣ ಕತೆ
-
ಗದ್ದೆ
ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…
-
ವಾಮನ ಮಾಸ್ತರರ ಏಳು ಬೀಳು
"ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…
-
ಬಲಿ
ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…
-
ಉರಿವ ಮಹಡಿಯ ಒಳಗೆ
ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…
-
ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು
ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…