ಬುದ್ಧ ವೈಭವ

ಎಲ್ಲ ಕೇಂದ್ರಗಳ ಕೇಂದ್ರ, ಎಲ್ಲ ಮೊಳಕೆಯ ಬೀಜ,
ತನ್ನೊಳಗೆ ತಾನೆ ಮಾಗಿ ಸಿಹಿಯಾದ ಹಣ್ಣು
ಈ ನೆಲದಲ್ಲಿ ಬೇರು ಬಿಟ್ಟು ನಕ್ಷತ್ರದಾಚಿನವರೆಗೂ
ತುಂಬಿಕೊಂಡ ಸವಿ ತಿರುಳು. ನಿನಗಿದೋ ವಂದನೆ.
ನಿನ್ನ ಹೊಣೆ ಯಾರೂ ಹೊರದ, ಯಾರ ಹೊಣೆ ನೀನೂ ಹೊರದ
ಮುಕ್ತ-ಫಲದ ಸಿಪ್ಪೆಯೇ ಅನಂತತೆ,
ಅದರೊಳಗೆ ಕಾರುಣ್ಯದ ರಸ.
ಹಿತವಾಗಿ ಬೆಳಗುವ ಕರುಣೆಯ ಬೆಳಕು,
ಸುತ್ತುವ ಸಾವಿರ ಸೂರ್ಯರಿಗೆ ಇತ್ತು
ಅವರೆಲ್ಲ ಬೆಳಬೆಳಗಿ ಸತ್ತರೂ
ಇನ್ನೂ ಉಳಿದಿರುವುದು
ಬೆಳಗುವುದು ನಿನ್ನಮೂಲ ಕೇಂದ್ರದಲ್ಲಿ.
*****
ಮೂಲ: ರೇನರ್ ಮಾರಿಯಾ ರಿಲ್ಕ್ / Rainer Maria Rilke

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೂ ನಗೆ ಬೀರಿದಾಗ
Next post ಮಠಮಾರಿತನ

ಸಣ್ಣ ಕತೆ

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

cheap jordans|wholesale air max|wholesale jordans|wholesale jewelry|wholesale jerseys