ಬುದ್ಧ ವೈಭವ

ಎಲ್ಲ ಕೇಂದ್ರಗಳ ಕೇಂದ್ರ, ಎಲ್ಲ ಮೊಳಕೆಯ ಬೀಜ,
ತನ್ನೊಳಗೆ ತಾನೆ ಮಾಗಿ ಸಿಹಿಯಾದ ಹಣ್ಣು
ಈ ನೆಲದಲ್ಲಿ ಬೇರು ಬಿಟ್ಟು ನಕ್ಷತ್ರದಾಚಿನವರೆಗೂ
ತುಂಬಿಕೊಂಡ ಸವಿ ತಿರುಳು. ನಿನಗಿದೋ ವಂದನೆ.
ನಿನ್ನ ಹೊಣೆ ಯಾರೂ ಹೊರದ, ಯಾರ ಹೊಣೆ ನೀನೂ ಹೊರದ
ಮುಕ್ತ-ಫಲದ ಸಿಪ್ಪೆಯೇ ಅನಂತತೆ,
ಅದರೊಳಗೆ ಕಾರುಣ್ಯದ ರಸ.
ಹಿತವಾಗಿ ಬೆಳಗುವ ಕರುಣೆಯ ಬೆಳಕು,
ಸುತ್ತುವ ಸಾವಿರ ಸೂರ್ಯರಿಗೆ ಇತ್ತು
ಅವರೆಲ್ಲ ಬೆಳಬೆಳಗಿ ಸತ್ತರೂ
ಇನ್ನೂ ಉಳಿದಿರುವುದು
ಬೆಳಗುವುದು ನಿನ್ನಮೂಲ ಕೇಂದ್ರದಲ್ಲಿ.
*****
ಮೂಲ: ರೇನರ್ ಮಾರಿಯಾ ರಿಲ್ಕ್ / Rainer Maria Rilke

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೂ ನಗೆ ಬೀರಿದಾಗ
Next post ಮಠಮಾರಿತನ

ಸಣ್ಣ ಕತೆ

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…