Home / ಕವನ / ಅನುವಾದ / ಮುತ್ತು ಚೆಲ್ಲಾಪಿಲ್ಲಿ

ಮುತ್ತು ಚೆಲ್ಲಾಪಿಲ್ಲಿ

ಮುತ್ತು ಚೆಲ್ಲಾಪಿಲ್ಲಿ. ಹಾರಕಟ್ಟಿದ ದಾರವು ಹರಿಯಿತೆ?
ಮುತ್ತುಗಬನಾಯ್ದು ಕಟ್ಟಿದರೂ ಮತ್ತೆ, ಫಲವೇನು?
ನೀನಿಲ್ಲ. ಪೋಣಿಸಿದ ಮುತ್ತು ಹಾರವಾಗಲು
ನಿನ್ನ ಸದೃಢ ಕೊರಳು ಬೇಕೇ ಬೇಕು.
ಚಳಿ ಮುಂಜಾವು, ಇರುಳಿನೊಡನೆ ಕಾದಾಡಿ
ಬಳಲಿ, ಬಿಳುಪೇರಿ, ಸೂರ್ಯ ಹುಟ್ಟಲೆಂದು ಕಾದಂತೆ ಕಾದಿದ್ದೇನೆ.
ನಾಟಕದ ನಡುವೆ ನಿನ್ನ ಪ್ರವೇಶದ
ಯಾವೊಂದು ಭಾವಭಂಗಿಯೂ ಕಣ್ಣು ತಪ್ಪಬಾರದೆಂದು
ಕಾತರದಿಂದ ಕಾದಿರುವ ಪ್ರೇಕ್ಷಕ ಸಮೂಹ ನನ್ನ ಮುಖ.
ಲೈಟ್ ಹೌಸಿನ ಬೆಳಕಾಡುವ ವಿಶಾಲ ನಗರದ
ಬಯಲ ಬಯಸುವ ಒಳನಾಡ ಕಿರುತೊರೆಯಂತೆ;
ಬೆಟ್ಟದ ಮೇಲೆ ಸುರಿದ ಬಿರುಮಳೆ
ತನ್ನತ್ತ ಹರಿದು ಜೀವ ಉಕ್ಕಿಸಲೆಂದು
ಕಾದ ಮರುಭೂಮಿಯ ನದಿಯ ಪಾತ್ರದಂತೆ;
ಮುಗ್ಧ ಕಿಟಕಿಯಲ್ಲಿ ನಕ್ಷತ್ರವೊಂದು ಕಂಡು
ತನ್ನ ಪ್ರಶ್ನೆಗೆಲ್ಲಾ ಉತ್ತರ ಹೇಳಿತೆಂದು
ಹಂಬಲಿಸುವ ಸೆರೆಯಾಳಿನಂತೆ;
ಕಂಕುಳ ಕೆಳಗಿದ್ದ ಬೆಚ್ಚನೆ ಊರುಗೋಲನ್ನು ದೇವರ ಮುಂದೆಸೆದ,
ಪವಾಡ ಸಂಭವಿಸಿದೆ ಬಿದ್ದಲ್ಲಿಂದ ಮೇಲೇಳಲಾರದ ಹೆಳವನಂತೆ;
ನಾನು ಹಾಗೇ ಬಿದ್ದುಕೊಂಡಿದ್ದು ಕೊನೆಯ ಕಾಣುವವರೆಗೆ
ತೆವಳಬೇಕು ನೀನು ಬಾರದಿದ್ದರೆ.
ನನಗೆ ನೀನಷ್ಟೇ ಬೇಕು.
ಬಿರುಕಲ್ಲಿ ಮೂಡಿದ ಹುಲ್ಲುಗರಿಯ ಸ್ಪರ್ಶ ಪಡೆದು
ಕಾಲು ಹಾದಿಯ ಕಲ್ಲು ಇಡೀ ವಸಂತ ಬೇಕೆಂದು ಹಂಬಲಿಸದೇ?
ಹಳ್ಳಿಯ ಕೆರೆಯಲ್ಲಿ ತನ್ನ ಬಿಂಬ ನೋಡಬಯಸುವ ಚಂದ್ರ
ಮೈದುಂಬಿ ಪೂರ್ಣನಾಗಬೇಡವೆ? ಭವಿಷ್ಯದ ಪೂರ್ಣತೆ
ನಮ್ಮತ್ತ ನಾಲ್ಕು ಹೆಜ್ಜೆಯಾದರೂ ಹಾಕದಿದ್ದರೆ
ಏನಾದರೂ ಪೂರ್ತಿಯಾಗುವುದಾದರೂ ಹೇಗೆ?
ಕೊನೆಗೂ ನೀನು ನಾಟಕದ ಪಾತ್ರವರ್ಗದಲ್ಲಿಲ್ಲವೇ,
ಓ ಹೆಸರು ಹೇಳಬಾರದವಳೇ?
ಉಳಿದಿರುವ ಸಮಯ ಸ್ವಲ್ವ
ನಿನಗೆ ತಕ್ಕವನಾಗಿ ಉಳಿಯೆ;
ವಯಸ್ಸಾಗಿ, ಮುದುಕನಾಗಿ,
ಅಥವ ನನ್ನ ಮಕ್ಕಳು ನನ್ನನ್ನು ಮರವೆಗೆ ದಬ್ಬ…..
ಮುತ್ತು ಚೆಲ್ಲಾಪಿಲ್ಲಿ.
*****
ಮೂಲ: ರೇನರ್ ಮಾರಿಯಾ ರಿಲ್ಕ್ / Rainer Maria Rilke

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...