ಮುತ್ತು ಚೆಲ್ಲಾಪಿಲ್ಲಿ

ಮುತ್ತು ಚೆಲ್ಲಾಪಿಲ್ಲಿ. ಹಾರಕಟ್ಟಿದ ದಾರವು ಹರಿಯಿತೆ?
ಮುತ್ತುಗಬನಾಯ್ದು ಕಟ್ಟಿದರೂ ಮತ್ತೆ, ಫಲವೇನು?
ನೀನಿಲ್ಲ. ಪೋಣಿಸಿದ ಮುತ್ತು ಹಾರವಾಗಲು
ನಿನ್ನ ಸದೃಢ ಕೊರಳು ಬೇಕೇ ಬೇಕು.
ಚಳಿ ಮುಂಜಾವು, ಇರುಳಿನೊಡನೆ ಕಾದಾಡಿ
ಬಳಲಿ, ಬಿಳುಪೇರಿ, ಸೂರ್ಯ ಹುಟ್ಟಲೆಂದು ಕಾದಂತೆ ಕಾದಿದ್ದೇನೆ.
ನಾಟಕದ ನಡುವೆ ನಿನ್ನ ಪ್ರವೇಶದ
ಯಾವೊಂದು ಭಾವಭಂಗಿಯೂ ಕಣ್ಣು ತಪ್ಪಬಾರದೆಂದು
ಕಾತರದಿಂದ ಕಾದಿರುವ ಪ್ರೇಕ್ಷಕ ಸಮೂಹ ನನ್ನ ಮುಖ.
ಲೈಟ್ ಹೌಸಿನ ಬೆಳಕಾಡುವ ವಿಶಾಲ ನಗರದ
ಬಯಲ ಬಯಸುವ ಒಳನಾಡ ಕಿರುತೊರೆಯಂತೆ;
ಬೆಟ್ಟದ ಮೇಲೆ ಸುರಿದ ಬಿರುಮಳೆ
ತನ್ನತ್ತ ಹರಿದು ಜೀವ ಉಕ್ಕಿಸಲೆಂದು
ಕಾದ ಮರುಭೂಮಿಯ ನದಿಯ ಪಾತ್ರದಂತೆ;
ಮುಗ್ಧ ಕಿಟಕಿಯಲ್ಲಿ ನಕ್ಷತ್ರವೊಂದು ಕಂಡು
ತನ್ನ ಪ್ರಶ್ನೆಗೆಲ್ಲಾ ಉತ್ತರ ಹೇಳಿತೆಂದು
ಹಂಬಲಿಸುವ ಸೆರೆಯಾಳಿನಂತೆ;
ಕಂಕುಳ ಕೆಳಗಿದ್ದ ಬೆಚ್ಚನೆ ಊರುಗೋಲನ್ನು ದೇವರ ಮುಂದೆಸೆದ,
ಪವಾಡ ಸಂಭವಿಸಿದೆ ಬಿದ್ದಲ್ಲಿಂದ ಮೇಲೇಳಲಾರದ ಹೆಳವನಂತೆ;
ನಾನು ಹಾಗೇ ಬಿದ್ದುಕೊಂಡಿದ್ದು ಕೊನೆಯ ಕಾಣುವವರೆಗೆ
ತೆವಳಬೇಕು ನೀನು ಬಾರದಿದ್ದರೆ.
ನನಗೆ ನೀನಷ್ಟೇ ಬೇಕು.
ಬಿರುಕಲ್ಲಿ ಮೂಡಿದ ಹುಲ್ಲುಗರಿಯ ಸ್ಪರ್ಶ ಪಡೆದು
ಕಾಲು ಹಾದಿಯ ಕಲ್ಲು ಇಡೀ ವಸಂತ ಬೇಕೆಂದು ಹಂಬಲಿಸದೇ?
ಹಳ್ಳಿಯ ಕೆರೆಯಲ್ಲಿ ತನ್ನ ಬಿಂಬ ನೋಡಬಯಸುವ ಚಂದ್ರ
ಮೈದುಂಬಿ ಪೂರ್ಣನಾಗಬೇಡವೆ? ಭವಿಷ್ಯದ ಪೂರ್ಣತೆ
ನಮ್ಮತ್ತ ನಾಲ್ಕು ಹೆಜ್ಜೆಯಾದರೂ ಹಾಕದಿದ್ದರೆ
ಏನಾದರೂ ಪೂರ್ತಿಯಾಗುವುದಾದರೂ ಹೇಗೆ?
ಕೊನೆಗೂ ನೀನು ನಾಟಕದ ಪಾತ್ರವರ್ಗದಲ್ಲಿಲ್ಲವೇ,
ಓ ಹೆಸರು ಹೇಳಬಾರದವಳೇ?
ಉಳಿದಿರುವ ಸಮಯ ಸ್ವಲ್ವ
ನಿನಗೆ ತಕ್ಕವನಾಗಿ ಉಳಿಯೆ;
ವಯಸ್ಸಾಗಿ, ಮುದುಕನಾಗಿ,
ಅಥವ ನನ್ನ ಮಕ್ಕಳು ನನ್ನನ್ನು ಮರವೆಗೆ ದಬ್ಬ…..
ಮುತ್ತು ಚೆಲ್ಲಾಪಿಲ್ಲಿ.
*****
ಮೂಲ: ರೇನರ್ ಮಾರಿಯಾ ರಿಲ್ಕ್ / Rainer Maria Rilke

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿನ್ನಲ್ಲಿ ನಾನು-ನನ್ನಲ್ಲಿ ನೀನು
Next post ಸಾಂಪ್ರದಾಯಿಕತೆ ಮತ್ತು ರಾಜಕಾರಣ

ಸಣ್ಣ ಕತೆ

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

cheap jordans|wholesale air max|wholesale jordans|wholesale jewelry|wholesale jerseys