Home / ಕವನ / ಅನುವಾದ / ಮುತ್ತು ಚೆಲ್ಲಾಪಿಲ್ಲಿ

ಮುತ್ತು ಚೆಲ್ಲಾಪಿಲ್ಲಿ

ಮುತ್ತು ಚೆಲ್ಲಾಪಿಲ್ಲಿ. ಹಾರಕಟ್ಟಿದ ದಾರವು ಹರಿಯಿತೆ?
ಮುತ್ತುಗಬನಾಯ್ದು ಕಟ್ಟಿದರೂ ಮತ್ತೆ, ಫಲವೇನು?
ನೀನಿಲ್ಲ. ಪೋಣಿಸಿದ ಮುತ್ತು ಹಾರವಾಗಲು
ನಿನ್ನ ಸದೃಢ ಕೊರಳು ಬೇಕೇ ಬೇಕು.
ಚಳಿ ಮುಂಜಾವು, ಇರುಳಿನೊಡನೆ ಕಾದಾಡಿ
ಬಳಲಿ, ಬಿಳುಪೇರಿ, ಸೂರ್ಯ ಹುಟ್ಟಲೆಂದು ಕಾದಂತೆ ಕಾದಿದ್ದೇನೆ.
ನಾಟಕದ ನಡುವೆ ನಿನ್ನ ಪ್ರವೇಶದ
ಯಾವೊಂದು ಭಾವಭಂಗಿಯೂ ಕಣ್ಣು ತಪ್ಪಬಾರದೆಂದು
ಕಾತರದಿಂದ ಕಾದಿರುವ ಪ್ರೇಕ್ಷಕ ಸಮೂಹ ನನ್ನ ಮುಖ.
ಲೈಟ್ ಹೌಸಿನ ಬೆಳಕಾಡುವ ವಿಶಾಲ ನಗರದ
ಬಯಲ ಬಯಸುವ ಒಳನಾಡ ಕಿರುತೊರೆಯಂತೆ;
ಬೆಟ್ಟದ ಮೇಲೆ ಸುರಿದ ಬಿರುಮಳೆ
ತನ್ನತ್ತ ಹರಿದು ಜೀವ ಉಕ್ಕಿಸಲೆಂದು
ಕಾದ ಮರುಭೂಮಿಯ ನದಿಯ ಪಾತ್ರದಂತೆ;
ಮುಗ್ಧ ಕಿಟಕಿಯಲ್ಲಿ ನಕ್ಷತ್ರವೊಂದು ಕಂಡು
ತನ್ನ ಪ್ರಶ್ನೆಗೆಲ್ಲಾ ಉತ್ತರ ಹೇಳಿತೆಂದು
ಹಂಬಲಿಸುವ ಸೆರೆಯಾಳಿನಂತೆ;
ಕಂಕುಳ ಕೆಳಗಿದ್ದ ಬೆಚ್ಚನೆ ಊರುಗೋಲನ್ನು ದೇವರ ಮುಂದೆಸೆದ,
ಪವಾಡ ಸಂಭವಿಸಿದೆ ಬಿದ್ದಲ್ಲಿಂದ ಮೇಲೇಳಲಾರದ ಹೆಳವನಂತೆ;
ನಾನು ಹಾಗೇ ಬಿದ್ದುಕೊಂಡಿದ್ದು ಕೊನೆಯ ಕಾಣುವವರೆಗೆ
ತೆವಳಬೇಕು ನೀನು ಬಾರದಿದ್ದರೆ.
ನನಗೆ ನೀನಷ್ಟೇ ಬೇಕು.
ಬಿರುಕಲ್ಲಿ ಮೂಡಿದ ಹುಲ್ಲುಗರಿಯ ಸ್ಪರ್ಶ ಪಡೆದು
ಕಾಲು ಹಾದಿಯ ಕಲ್ಲು ಇಡೀ ವಸಂತ ಬೇಕೆಂದು ಹಂಬಲಿಸದೇ?
ಹಳ್ಳಿಯ ಕೆರೆಯಲ್ಲಿ ತನ್ನ ಬಿಂಬ ನೋಡಬಯಸುವ ಚಂದ್ರ
ಮೈದುಂಬಿ ಪೂರ್ಣನಾಗಬೇಡವೆ? ಭವಿಷ್ಯದ ಪೂರ್ಣತೆ
ನಮ್ಮತ್ತ ನಾಲ್ಕು ಹೆಜ್ಜೆಯಾದರೂ ಹಾಕದಿದ್ದರೆ
ಏನಾದರೂ ಪೂರ್ತಿಯಾಗುವುದಾದರೂ ಹೇಗೆ?
ಕೊನೆಗೂ ನೀನು ನಾಟಕದ ಪಾತ್ರವರ್ಗದಲ್ಲಿಲ್ಲವೇ,
ಓ ಹೆಸರು ಹೇಳಬಾರದವಳೇ?
ಉಳಿದಿರುವ ಸಮಯ ಸ್ವಲ್ವ
ನಿನಗೆ ತಕ್ಕವನಾಗಿ ಉಳಿಯೆ;
ವಯಸ್ಸಾಗಿ, ಮುದುಕನಾಗಿ,
ಅಥವ ನನ್ನ ಮಕ್ಕಳು ನನ್ನನ್ನು ಮರವೆಗೆ ದಬ್ಬ…..
ಮುತ್ತು ಚೆಲ್ಲಾಪಿಲ್ಲಿ.
*****
ಮೂಲ: ರೇನರ್ ಮಾರಿಯಾ ರಿಲ್ಕ್ / Rainer Maria Rilke

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...