Home / ಕವನ / ಅನುವಾದ / ಮುತ್ತು ಚೆಲ್ಲಾಪಿಲ್ಲಿ

ಮುತ್ತು ಚೆಲ್ಲಾಪಿಲ್ಲಿ

ಮುತ್ತು ಚೆಲ್ಲಾಪಿಲ್ಲಿ. ಹಾರಕಟ್ಟಿದ ದಾರವು ಹರಿಯಿತೆ?
ಮುತ್ತುಗಬನಾಯ್ದು ಕಟ್ಟಿದರೂ ಮತ್ತೆ, ಫಲವೇನು?
ನೀನಿಲ್ಲ. ಪೋಣಿಸಿದ ಮುತ್ತು ಹಾರವಾಗಲು
ನಿನ್ನ ಸದೃಢ ಕೊರಳು ಬೇಕೇ ಬೇಕು.
ಚಳಿ ಮುಂಜಾವು, ಇರುಳಿನೊಡನೆ ಕಾದಾಡಿ
ಬಳಲಿ, ಬಿಳುಪೇರಿ, ಸೂರ್ಯ ಹುಟ್ಟಲೆಂದು ಕಾದಂತೆ ಕಾದಿದ್ದೇನೆ.
ನಾಟಕದ ನಡುವೆ ನಿನ್ನ ಪ್ರವೇಶದ
ಯಾವೊಂದು ಭಾವಭಂಗಿಯೂ ಕಣ್ಣು ತಪ್ಪಬಾರದೆಂದು
ಕಾತರದಿಂದ ಕಾದಿರುವ ಪ್ರೇಕ್ಷಕ ಸಮೂಹ ನನ್ನ ಮುಖ.
ಲೈಟ್ ಹೌಸಿನ ಬೆಳಕಾಡುವ ವಿಶಾಲ ನಗರದ
ಬಯಲ ಬಯಸುವ ಒಳನಾಡ ಕಿರುತೊರೆಯಂತೆ;
ಬೆಟ್ಟದ ಮೇಲೆ ಸುರಿದ ಬಿರುಮಳೆ
ತನ್ನತ್ತ ಹರಿದು ಜೀವ ಉಕ್ಕಿಸಲೆಂದು
ಕಾದ ಮರುಭೂಮಿಯ ನದಿಯ ಪಾತ್ರದಂತೆ;
ಮುಗ್ಧ ಕಿಟಕಿಯಲ್ಲಿ ನಕ್ಷತ್ರವೊಂದು ಕಂಡು
ತನ್ನ ಪ್ರಶ್ನೆಗೆಲ್ಲಾ ಉತ್ತರ ಹೇಳಿತೆಂದು
ಹಂಬಲಿಸುವ ಸೆರೆಯಾಳಿನಂತೆ;
ಕಂಕುಳ ಕೆಳಗಿದ್ದ ಬೆಚ್ಚನೆ ಊರುಗೋಲನ್ನು ದೇವರ ಮುಂದೆಸೆದ,
ಪವಾಡ ಸಂಭವಿಸಿದೆ ಬಿದ್ದಲ್ಲಿಂದ ಮೇಲೇಳಲಾರದ ಹೆಳವನಂತೆ;
ನಾನು ಹಾಗೇ ಬಿದ್ದುಕೊಂಡಿದ್ದು ಕೊನೆಯ ಕಾಣುವವರೆಗೆ
ತೆವಳಬೇಕು ನೀನು ಬಾರದಿದ್ದರೆ.
ನನಗೆ ನೀನಷ್ಟೇ ಬೇಕು.
ಬಿರುಕಲ್ಲಿ ಮೂಡಿದ ಹುಲ್ಲುಗರಿಯ ಸ್ಪರ್ಶ ಪಡೆದು
ಕಾಲು ಹಾದಿಯ ಕಲ್ಲು ಇಡೀ ವಸಂತ ಬೇಕೆಂದು ಹಂಬಲಿಸದೇ?
ಹಳ್ಳಿಯ ಕೆರೆಯಲ್ಲಿ ತನ್ನ ಬಿಂಬ ನೋಡಬಯಸುವ ಚಂದ್ರ
ಮೈದುಂಬಿ ಪೂರ್ಣನಾಗಬೇಡವೆ? ಭವಿಷ್ಯದ ಪೂರ್ಣತೆ
ನಮ್ಮತ್ತ ನಾಲ್ಕು ಹೆಜ್ಜೆಯಾದರೂ ಹಾಕದಿದ್ದರೆ
ಏನಾದರೂ ಪೂರ್ತಿಯಾಗುವುದಾದರೂ ಹೇಗೆ?
ಕೊನೆಗೂ ನೀನು ನಾಟಕದ ಪಾತ್ರವರ್ಗದಲ್ಲಿಲ್ಲವೇ,
ಓ ಹೆಸರು ಹೇಳಬಾರದವಳೇ?
ಉಳಿದಿರುವ ಸಮಯ ಸ್ವಲ್ವ
ನಿನಗೆ ತಕ್ಕವನಾಗಿ ಉಳಿಯೆ;
ವಯಸ್ಸಾಗಿ, ಮುದುಕನಾಗಿ,
ಅಥವ ನನ್ನ ಮಕ್ಕಳು ನನ್ನನ್ನು ಮರವೆಗೆ ದಬ್ಬ…..
ಮುತ್ತು ಚೆಲ್ಲಾಪಿಲ್ಲಿ.
*****
ಮೂಲ: ರೇನರ್ ಮಾರಿಯಾ ರಿಲ್ಕ್ / Rainer Maria Rilke

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...