Home / ಕವನ / ಅನುವಾದ / ಗೊತ್ತಿಲ್ಲ

ಗೊತ್ತಿಲ್ಲ

ಕತ್ತಲ ಕಾರ್ಮೋಡವೋ, ನಗುವ ಎಳೆಯ ಬಿಸಿಲೋ
ನಮ್ಮ ನಾಳೆ ಹೇಗಿರಬಹುದೋ, ಗೊತ್ತಿಲ್ಲ.
ಹೆಜ್ಜೆಗುರುತಿಲ್ಲದ ಕಾಡ ಬಯಲಿಗೆ ಕರೆದೊಯ್ದೀತು
ಕಾಲಹಾದಿ- ಯೌವನ ಮರ್ಮರದ ಕಿರುತೊರೆಗೆ,
ತಳವಿಲ್ಲದ ಕತ್ತಲ ಕೂಪಕ್ಕೆ, ಹಗಲ ಬಿಂಬವೂ
ಮರೆಯಾದ ಎಡೆಗೆ. ಅಪರಿಚಿತ ನಾಡು
ಕೈಬೀಸಿ ಕರೆದಾವು. ಸೂರ್ಯನ ನೆನಪೂ
ಮರೆಯಾಗಿ ಕವಿತೆಯ ಸೊಲ್ಲು ಶಬ್ದ
ಉದುರಿಬಿದ್ದಾವು. ಅಯ್ಯೋ ನಚ್ಚಗೆ ಕಟ್ಟಿಕೊಂಡ
ನಮ್ಮ ಬದುಕಿನ ಕಿನ್ನರಕಥೆ, ಹೇಳಲೇ
ಬಾರದ ವ್ಯಥೆಯಾಗಿ ತಟ್ಟನೆ ಬದಲಾದೀತು!

ಆದರೂ, ಅಯ್ಯಾ, ಇಷ್ಟು ನಿಜ ಗಟ್ಟಿಮಾಡಿದ್ದೀಯ-
ನಾವು ಗುನುಗು ಹಕ್ಕಿಗಳು, ನೀನಿತ್ತ ವರದಲ್ಲಿ
ಒಂದಿಷ್ಟನ್ನು ನಮ್ಮ ಶಬ್ದಗಳಲ್ಲಿ ಹೊತ್ತು ಹಾರುತ್ತೇವೆ.
ನಾವಿರುವ ಎಡೆಗಳಲ್ಲಿ ನಿನ್ನ ದನಿಯ ಮರುದನಿ
ಕಾಪಾಡಿಕೊಳ್ಳುತ್ತೇವೆ-ಹಳೆ ಮನೆಯ ಮುಂದೆ ಇರುವ
ಒಣ ಹುಲ್ಲು ಎಳೆ ಬಿಸಿಲನ್ನು ನೆನಪಿಟ್ಟುಕೊಂಡಂತೆ.
ನೀನು ಬೆಳೆಸಿದ ಶಬ್ದವಿಲ್ಲದ ಈ ಮಾತು
ಬೇಸರದಲ್ಲಿ ಮೌನದಲ್ಲಿ ಬೆಳೆದ ಈ ಮಾತು
ಕಡಲ ಮೇಲಿನ ಉಪ್ಪು ಗಾಳಿಯ ರುಚಿಯೊಂದಿಗೆ
ಎಳೆಯ ತಮ್ಮಂದಿರ ಎದೆಗೆ ತಾಗಿ ಮತ್ತೆ ಹಸುರೊಡೆದಾವು.
*****
ಮೂಲ: ಯೂಜೀನ್ ಮಾಂಟೇಲ್ / Eugenio Montale

Tagged:

Leave a Reply

Your email address will not be published. Required fields are marked *

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...

ಶೋಭಾ, ನಿನ್ನ ಎಲ್ಲಾ ಕಾಗದಗಳೂ ತಲುಪಿವೆ. ಓದುತ್ತಲೂ ಇದ್ದೇನೆ. ‘ತಂಪೆರೆಯುವ ನಿನ್ನ ಕಾಗದಗಳನ್ನು ದಿನಾ ಎದುರು ನೋಡುತ್ತಿರುತ್ತೇನೆ. ಅಬ್ಬಾ! ಎಷ್ಟು ಪ್ರಶ್ನೆಗಳನ್ನು ಕೇಳಿದ್ದೀಯಾ? ಬರೆಯುವ ಶಕ್ತಿ ಬರಲೀಂತ ಕಾಯ್ತಾ ಇದ್ದೆ. ಮಾನಸಿಕ ವಿಪ್ಲವದಲ್ಲಿ ಮನಸ್ಸು, ದೇಹ ಎಲ್ಲವೂ ಕೊರಡಿನಂತಾ...