Home / ಕವನ / ಅನುವಾದ / ಹಾಗೆ ಆಗಬಹುದಿತ್ತು ಸಮುದ್ರವೇ

ಹಾಗೆ ಆಗಬಹುದಿತ್ತು ಸಮುದ್ರವೇ

ಕಡಲ ಉಪ್ಪು ನೀರಿನಲ್ಲುರುಳುರುಳಿ ಒರಟಾದ ಕಲ್ಲಿನಂತೆ,
ಅಪಳಿಸುವ ಅಲೆಗೆ ಎದೆಯೊಡ್ಡಿ, ಬಂದೇ ಬರುವ
ಚಳಿಗೆ ಮಳೆ ಗಾಳಿ ಬಿಸಿಲಿಗೆ ಸಾಕ್ಷಿಯಾಗಿ
ಕಾಲದ ಕಟ್ಟು ಮೀರಿದ ಬಂಡೆಗಲ್ಲಿನಂತೆ
ಸಹಜವಾಗಿ ಇದ್ದುಬಿಡಬಹುದಾಗಿತ್ತು. ಹಾಗೆ ಆಗಲಿಲ್ಲ.

ತನ್ನ ಕುರಿತು, ಪರರ ಕುರಿತು,
ಕ್ಷಣಕ್ಕೊಂದು ರೂಪತಾಳಿ ಜಾರಿ ಹೋಗುವ
ಬದುಕನ್ನು ಕುರಿತು ಚಿಂತೆಯನ್ನು ಹೊದ್ದುಕೊಂಡೆ.
ಬಡಿಯಲೋ ಕೊಲ್ಲಲೋ ಕೈಯೆತ್ತುವ ಮುನ್ನ
ತುಯ್ಯಲಾಡುವ ಮನದವನಾದೆ.

ಬೆಕ್ಕು ಸುಳಿದಂತೆ ಲೋಕದಲ್ಲಿ ಸುಳಿವ
ಕೆಡುಕನ್ನು ಕಣ್ಣಾರೆ ಕಾಣಲು ಬಯಸಿದೆ.
ಜಗದ ಯಂತ್ರದ ಚಲನೆ ತಟ್ಟನೆ
ನಿಲ್ಲಿಸುವ ಸನ್ನೆ ಗೋಲು ಎಲ್ಲೆಂದು ತಡುಕಿದೆ.

ಕ್ಷಣದರ್ಧದಲ್ಲಿ ಲೋಕದೆಲ್ಲ ಸಂಭವಗಳು ಛಿದ್ರವಾಗುವವು
ಎಂದರಿತು ನನ್ನದೇ ಹಾದಿ ಮಾಡಿಕೊಂಡು
ನಾನು ಸಾಗಿದ್ದೆ. ನನ್ನ ಮನಸ್ಸು
ತನ್ನ ಸೆಳೆವ ಮತ್ತೊಂದು ಹಾದಿಯಲ್ಲಿ ನಡೆದಿತ್ತು.

ನಿರ್ಧರಿಸುವ ಮನಸ್ಸು, ನಿರ್ವಚನಗೊಂಡ ಮನಸ್ಸು
ಎರಡನ್ನೂ ಕತ್ತರಿಸಿ ಬೇರೆ ಮಾಡುವ ಚೂರಿ
ಬೇಕಾಗಿತ್ತೋ ಏನೋ. ನಿನ್ನ ಸಿಡಿಲಕ್ಷರಗಳು
ಕಿಕ್ಕಿರಿದ ಗ್ರಂಥವಲ್ಲ, ಬೇರೆಯದೇ ಪುಸ್ತಕ
ಬೇಕಾಗಿತ್ತು ನನಗೆ. ಆದರೂ ಬೇಸರವಿಲ್ಲ.
ನಿನ್ನ ಹಾಡು ಅಂತರಾಳದ ಗಂಟುಗಳ ತೊಡಕು ಸಡಿಲಿಸುವುದು
ಈ ಕ್ಷಣದ ನಿನ್ನ ಆರ್‍ಭಟ ನಕ್ಷತ್ರಗಳ ಮುಟ್ಟುವುದು.
*****
ಮೂಲ: ಯೂಜೀನ್ ಮಾಂಟೇಲ್ / Eugenio Montale

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...