Home / ಕವನ / ಅನುವಾದ / ಹಾಗೆ ಆಗಬಹುದಿತ್ತು ಸಮುದ್ರವೇ

ಹಾಗೆ ಆಗಬಹುದಿತ್ತು ಸಮುದ್ರವೇ

ಕಡಲ ಉಪ್ಪು ನೀರಿನಲ್ಲುರುಳುರುಳಿ ಒರಟಾದ ಕಲ್ಲಿನಂತೆ,
ಅಪಳಿಸುವ ಅಲೆಗೆ ಎದೆಯೊಡ್ಡಿ, ಬಂದೇ ಬರುವ
ಚಳಿಗೆ ಮಳೆ ಗಾಳಿ ಬಿಸಿಲಿಗೆ ಸಾಕ್ಷಿಯಾಗಿ
ಕಾಲದ ಕಟ್ಟು ಮೀರಿದ ಬಂಡೆಗಲ್ಲಿನಂತೆ
ಸಹಜವಾಗಿ ಇದ್ದುಬಿಡಬಹುದಾಗಿತ್ತು. ಹಾಗೆ ಆಗಲಿಲ್ಲ.

ತನ್ನ ಕುರಿತು, ಪರರ ಕುರಿತು,
ಕ್ಷಣಕ್ಕೊಂದು ರೂಪತಾಳಿ ಜಾರಿ ಹೋಗುವ
ಬದುಕನ್ನು ಕುರಿತು ಚಿಂತೆಯನ್ನು ಹೊದ್ದುಕೊಂಡೆ.
ಬಡಿಯಲೋ ಕೊಲ್ಲಲೋ ಕೈಯೆತ್ತುವ ಮುನ್ನ
ತುಯ್ಯಲಾಡುವ ಮನದವನಾದೆ.

ಬೆಕ್ಕು ಸುಳಿದಂತೆ ಲೋಕದಲ್ಲಿ ಸುಳಿವ
ಕೆಡುಕನ್ನು ಕಣ್ಣಾರೆ ಕಾಣಲು ಬಯಸಿದೆ.
ಜಗದ ಯಂತ್ರದ ಚಲನೆ ತಟ್ಟನೆ
ನಿಲ್ಲಿಸುವ ಸನ್ನೆ ಗೋಲು ಎಲ್ಲೆಂದು ತಡುಕಿದೆ.

ಕ್ಷಣದರ್ಧದಲ್ಲಿ ಲೋಕದೆಲ್ಲ ಸಂಭವಗಳು ಛಿದ್ರವಾಗುವವು
ಎಂದರಿತು ನನ್ನದೇ ಹಾದಿ ಮಾಡಿಕೊಂಡು
ನಾನು ಸಾಗಿದ್ದೆ. ನನ್ನ ಮನಸ್ಸು
ತನ್ನ ಸೆಳೆವ ಮತ್ತೊಂದು ಹಾದಿಯಲ್ಲಿ ನಡೆದಿತ್ತು.

ನಿರ್ಧರಿಸುವ ಮನಸ್ಸು, ನಿರ್ವಚನಗೊಂಡ ಮನಸ್ಸು
ಎರಡನ್ನೂ ಕತ್ತರಿಸಿ ಬೇರೆ ಮಾಡುವ ಚೂರಿ
ಬೇಕಾಗಿತ್ತೋ ಏನೋ. ನಿನ್ನ ಸಿಡಿಲಕ್ಷರಗಳು
ಕಿಕ್ಕಿರಿದ ಗ್ರಂಥವಲ್ಲ, ಬೇರೆಯದೇ ಪುಸ್ತಕ
ಬೇಕಾಗಿತ್ತು ನನಗೆ. ಆದರೂ ಬೇಸರವಿಲ್ಲ.
ನಿನ್ನ ಹಾಡು ಅಂತರಾಳದ ಗಂಟುಗಳ ತೊಡಕು ಸಡಿಲಿಸುವುದು
ಈ ಕ್ಷಣದ ನಿನ್ನ ಆರ್‍ಭಟ ನಕ್ಷತ್ರಗಳ ಮುಟ್ಟುವುದು.
*****
ಮೂಲ: ಯೂಜೀನ್ ಮಾಂಟೇಲ್ / Eugenio Montale

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...