ಹಾಗೆ ಆಗಬಹುದಿತ್ತು ಸಮುದ್ರವೇ

ಕಡಲ ಉಪ್ಪು ನೀರಿನಲ್ಲುರುಳುರುಳಿ ಒರಟಾದ ಕಲ್ಲಿನಂತೆ,
ಅಪಳಿಸುವ ಅಲೆಗೆ ಎದೆಯೊಡ್ಡಿ, ಬಂದೇ ಬರುವ
ಚಳಿಗೆ ಮಳೆ ಗಾಳಿ ಬಿಸಿಲಿಗೆ ಸಾಕ್ಷಿಯಾಗಿ
ಕಾಲದ ಕಟ್ಟು ಮೀರಿದ ಬಂಡೆಗಲ್ಲಿನಂತೆ
ಸಹಜವಾಗಿ ಇದ್ದುಬಿಡಬಹುದಾಗಿತ್ತು. ಹಾಗೆ ಆಗಲಿಲ್ಲ.

ತನ್ನ ಕುರಿತು, ಪರರ ಕುರಿತು,
ಕ್ಷಣಕ್ಕೊಂದು ರೂಪತಾಳಿ ಜಾರಿ ಹೋಗುವ
ಬದುಕನ್ನು ಕುರಿತು ಚಿಂತೆಯನ್ನು ಹೊದ್ದುಕೊಂಡೆ.
ಬಡಿಯಲೋ ಕೊಲ್ಲಲೋ ಕೈಯೆತ್ತುವ ಮುನ್ನ
ತುಯ್ಯಲಾಡುವ ಮನದವನಾದೆ.

ಬೆಕ್ಕು ಸುಳಿದಂತೆ ಲೋಕದಲ್ಲಿ ಸುಳಿವ
ಕೆಡುಕನ್ನು ಕಣ್ಣಾರೆ ಕಾಣಲು ಬಯಸಿದೆ.
ಜಗದ ಯಂತ್ರದ ಚಲನೆ ತಟ್ಟನೆ
ನಿಲ್ಲಿಸುವ ಸನ್ನೆ ಗೋಲು ಎಲ್ಲೆಂದು ತಡುಕಿದೆ.

ಕ್ಷಣದರ್ಧದಲ್ಲಿ ಲೋಕದೆಲ್ಲ ಸಂಭವಗಳು ಛಿದ್ರವಾಗುವವು
ಎಂದರಿತು ನನ್ನದೇ ಹಾದಿ ಮಾಡಿಕೊಂಡು
ನಾನು ಸಾಗಿದ್ದೆ. ನನ್ನ ಮನಸ್ಸು
ತನ್ನ ಸೆಳೆವ ಮತ್ತೊಂದು ಹಾದಿಯಲ್ಲಿ ನಡೆದಿತ್ತು.

ನಿರ್ಧರಿಸುವ ಮನಸ್ಸು, ನಿರ್ವಚನಗೊಂಡ ಮನಸ್ಸು
ಎರಡನ್ನೂ ಕತ್ತರಿಸಿ ಬೇರೆ ಮಾಡುವ ಚೂರಿ
ಬೇಕಾಗಿತ್ತೋ ಏನೋ. ನಿನ್ನ ಸಿಡಿಲಕ್ಷರಗಳು
ಕಿಕ್ಕಿರಿದ ಗ್ರಂಥವಲ್ಲ, ಬೇರೆಯದೇ ಪುಸ್ತಕ
ಬೇಕಾಗಿತ್ತು ನನಗೆ. ಆದರೂ ಬೇಸರವಿಲ್ಲ.
ನಿನ್ನ ಹಾಡು ಅಂತರಾಳದ ಗಂಟುಗಳ ತೊಡಕು ಸಡಿಲಿಸುವುದು
ಈ ಕ್ಷಣದ ನಿನ್ನ ಆರ್‍ಭಟ ನಕ್ಷತ್ರಗಳ ಮುಟ್ಟುವುದು.
*****
ಮೂಲ: ಯೂಜೀನ್ ಮಾಂಟೇಲ್ / Eugenio Montale

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜೀವ ಜೀವದ ಗೆಳೆಯ
Next post ಲೇಖಕ ಸತ್ತ?

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…