ಒರೆಸಿಬಿಡು ಬೇಕಾದರೆ

ಒರೆಸಿಬಿಡು ಬೇಕಾದರೆ ಗೋಳಿಡುವ ಈ ದುರ್ಬಲ ಬದುಕನ್ನು,
ಬೋರ್ಡಿನ ಮೇಲೆ ಬರೆದ ಅಲ್ಪಾಯುಷಿ ಅಕ್ಷರಗಳನ್ನು
ಡಸ್ಟರು ಸುಮ್ಮನೆ ಒರೆಸಿಬಿಡುವಂತೆ.
ನಿನ್ನವರ್‍ತುಲಕ್ಕೆ ಮತ್ತೆ ಹೆಜ್ಜೆ ಇಡಲು ಕಾದಿದ್ದೇನೆ
ನಾನು ಹೆಜ್ಜೆ ಇಟ್ಟು ನಡೆದು ಬಳಲಿದ
ಹಾದಿಗಳೆಲ್ಲ ನಿನ್ನಲ್ಲಿ ತಲುಪಿ ನೆಲೆಗೊಳ್ಳಲಿ ಬಿಡು.
ನಡೆ ನಡೆಯುತ್ತ ನನ್ನ ನಿಜ ದಂದುಗ
ಮರೆವೆಗೆ ಸಂದಿತ್ತು-ನಾನಿಲ್ಲಿಗೆ ಮತ್ತೆ ಬಂದಿರುವುದೇ ಸಾಕ್ಷಿ.
ನನ್ನ ಮಾತು ವಚನವಾಗದೆ ಬರಿಯ ರಚನೆಯಾಗಿತ್ತು.
ದಡಕ್ಕೊಮ್ಮೆ ಬಡಿದು ಉಲಿಯುವ ನಿನ್ನ ಅಲೆದನಿ
ಕೇಳಿದಾಗ ಒಮ್ಮೊಮ್ಮೆ, ಮರೆತ ತನ್ನೂರನ್ನು ನೆನೆವ
ಅಳಿಮನದವನಂತೆ ನನ್ನೆದೆ ತಳಮಳಗೊಳ್ಳುತ್ತಿತ್ತು.
ನೀಲವಿಸ್ತಾರಕ್ಕೆ ಎದೆತೆರೆದೊಡ್ಡಿ ಹರಡಿರುವ ನಿನ್ನ ಬಯಲ ಸೌಂದಯರ್‍ಯಕ್ಕಿಂತ
ನಟ್ಟ ನಡುಹಗಲ ಬಿಸಿಲುರಿಯಲ್ಲಿ, ನಿರ್ಜನ ದಡದಲ್ಲಿ,
ಕೇಳುವ ನಿನ್ನ ಅಲೆಗಳ ಸದ್ದಿರದ ಏದುಬ್ಬಸದ ದನಿ
ಪಾಠ ಕಲಿಸಿದೆ ನನಗೆ ಶರಣು ಶರಣು ನಿನಗೆ.
ಬೆಳಕಿನ ಕಿರಣದೊಂದು ಅಣುವು ಮಾತ್ರ ನಾನು.
ಉರಿವುದೊಂದು ಬಿಟ್ಟು ಇನ್ಯಾವ ಅರ್ಥವೂ ಇಲ್ಲ ನನಗೆ.
*****
ಮೂಲ: ಯೂಜೀನ್ ಮಾಂಟೇಲ್ / Eugenio Montale

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಣ್ಣ ಬಣ್ಣ ನೂರೆಂಟು
Next post ಪ್ರಾಣ ಪರಿಸರ

ಸಣ್ಣ ಕತೆ

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…