Home / ಕವನ / ಅನುವಾದ / ಒರೆಸಿಬಿಡು ಬೇಕಾದರೆ

ಒರೆಸಿಬಿಡು ಬೇಕಾದರೆ

ಒರೆಸಿಬಿಡು ಬೇಕಾದರೆ ಗೋಳಿಡುವ ಈ ದುರ್ಬಲ ಬದುಕನ್ನು,
ಬೋರ್ಡಿನ ಮೇಲೆ ಬರೆದ ಅಲ್ಪಾಯುಷಿ ಅಕ್ಷರಗಳನ್ನು
ಡಸ್ಟರು ಸುಮ್ಮನೆ ಒರೆಸಿಬಿಡುವಂತೆ.
ನಿನ್ನವರ್‍ತುಲಕ್ಕೆ ಮತ್ತೆ ಹೆಜ್ಜೆ ಇಡಲು ಕಾದಿದ್ದೇನೆ
ನಾನು ಹೆಜ್ಜೆ ಇಟ್ಟು ನಡೆದು ಬಳಲಿದ
ಹಾದಿಗಳೆಲ್ಲ ನಿನ್ನಲ್ಲಿ ತಲುಪಿ ನೆಲೆಗೊಳ್ಳಲಿ ಬಿಡು.
ನಡೆ ನಡೆಯುತ್ತ ನನ್ನ ನಿಜ ದಂದುಗ
ಮರೆವೆಗೆ ಸಂದಿತ್ತು-ನಾನಿಲ್ಲಿಗೆ ಮತ್ತೆ ಬಂದಿರುವುದೇ ಸಾಕ್ಷಿ.
ನನ್ನ ಮಾತು ವಚನವಾಗದೆ ಬರಿಯ ರಚನೆಯಾಗಿತ್ತು.
ದಡಕ್ಕೊಮ್ಮೆ ಬಡಿದು ಉಲಿಯುವ ನಿನ್ನ ಅಲೆದನಿ
ಕೇಳಿದಾಗ ಒಮ್ಮೊಮ್ಮೆ, ಮರೆತ ತನ್ನೂರನ್ನು ನೆನೆವ
ಅಳಿಮನದವನಂತೆ ನನ್ನೆದೆ ತಳಮಳಗೊಳ್ಳುತ್ತಿತ್ತು.
ನೀಲವಿಸ್ತಾರಕ್ಕೆ ಎದೆತೆರೆದೊಡ್ಡಿ ಹರಡಿರುವ ನಿನ್ನ ಬಯಲ ಸೌಂದಯರ್‍ಯಕ್ಕಿಂತ
ನಟ್ಟ ನಡುಹಗಲ ಬಿಸಿಲುರಿಯಲ್ಲಿ, ನಿರ್ಜನ ದಡದಲ್ಲಿ,
ಕೇಳುವ ನಿನ್ನ ಅಲೆಗಳ ಸದ್ದಿರದ ಏದುಬ್ಬಸದ ದನಿ
ಪಾಠ ಕಲಿಸಿದೆ ನನಗೆ ಶರಣು ಶರಣು ನಿನಗೆ.
ಬೆಳಕಿನ ಕಿರಣದೊಂದು ಅಣುವು ಮಾತ್ರ ನಾನು.
ಉರಿವುದೊಂದು ಬಿಟ್ಟು ಇನ್ಯಾವ ಅರ್ಥವೂ ಇಲ್ಲ ನನಗೆ.
*****
ಮೂಲ: ಯೂಜೀನ್ ಮಾಂಟೇಲ್ / Eugenio Montale

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...