Home / ಕವನ / ಕವಿತೆ / ಸಂಗೀತ ಸಂಜೆ

ಸಂಗೀತ ಸಂಜೆ

 

ಸಂಜೆಗತ್ತಲಿನ ಸಂಗೀತವನ್ನು ಮೆಚ್ಚಿ ಬಂದು ಕುಳಿತಿದ್ದಾನೆ,
ಅವನು ಬೆಚ್ಚಗೆ ಅವಳನ್ನೊದ್ದುಕೊಂಡು.

ಗೂಡಿನ ಹೂವುಗಳು ಸ್ವೇಚ್ಛೆಯಾಗಿ ಮಿಡುಕಿದ ನಂತರ
ಹೊರಗಿನ ಗಾಳಿ ಅಲೆ‌ಅಲೆಯಾಗಿ ಅಪ್ಪಳಿಸಿದೆ.
ಕಾಡಿನ ಥಂಡಿಯ ವಾತಾವರಣದಲ್ಲಿ ಅವಳು ಕಲಿಸಿದ ಪ್ರೇಮಪಾಠ
ಅವನ ತೋಳ್ಬಂಧನದ ವಶವಾಗಿದೆ.
ಲಾಟೀನಿನ ಬೆಳಕು ಕೋಣೆಗೆ ಕವಿದ ಮಬ್ಬನ್ನು ಸೀಳಿಹಾಕುತ್ತಿದ್ದಂತೆ,
ತನ್ನ ಜಾನಪದ ವಾದ್ಯದ ಕೀಲಿಗಳನ್ನು ಸರಿಹೊಂದಿಸುವ ದುಶ್ಚಟದಲಿ
ಅವಳು ಬೀಳುತ್ತಾಳೆ.

ಹೊಲದಿನ್ನೆಗಳಿಗೆ ಗೇಯಲೋಗಿದ್ದವರೆಲ್ಲರೂ ತಮ್ಮತಮ್ಮ ಮನೆಗಳಿಗೆ
ಹಿಂದಿರುಗುತ್ತಿದ್ದಂತೆ-ಕೀಲಿ ತಿರುಗಿದ ಹೀನಸ್ವರ ಅವರೆಲ್ಲರನ್ನೂ
ತಡೆದು ನಿಲ್ಲಿಸುವುದು. ಅದು ಸತ್ತ ನಂತರ ಏರ್ಪಾಡಾಗುವ ಶ್ರದ್ಧಾಂಜಲಿಯ
ಸಂಗೀತ ಸ್ವರದಂತೆಯೂ, ಸಾಯುವ ಮೊದಲಿನ ನೆನಪುಗಳಂತೆಯೂ
ಕೇಳಿಸಿದೆ. ಘೋರಗಾಳಿ ಅವನು ಉರಿಸಿದ ಸಣ್ಣ ಪ್ರಮಣದ ಬೆಂಕಿಯನ್ನು,
ಈಗಾಗಲೇ ಉರಿಯಗೊಟ್ಟ ಅವಳ ಮನಸ್ಸಿನ ಜ್ವಾಲೆಗಳಲ್ಲಿ
ವಿಶ್ರಾಂತಿ ಬಯಸಹೋಗಿದೆ.

ಕೀಲಿ ಬಿಗಿಯಾಗಿ ಸುಶ್ರಾವ್ಯ ಸ್ವರ ಎಬ್ಬಿಸಿ,
ಅಲ್ಲಿನ ಎಲ್ಲವನ್ನೂ ದಾಟಿಕೊಂಡು ಹೂಗಳಿರುವ ಕಪ್ಪುಗೋಡೆಗಳಲಿ
ಅಪರಾಧವನ್ನು ಬಿಟ್ಟು, ನಿಷ್ಟಾವಂತ ಪ್ರೇಮವನ್ನು ಕದ್ದೊಯ್ದಿದೆ.
*****

Tagged:

Leave a Reply

Your email address will not be published. Required fields are marked *

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...