Home / ಕವನ / ಅನುವಾದ / ಸಾಯುತ್ತಿರುವ ಕವಿಯ ಸಂದೇಶ, ಯುವಕರಿಗೆ

ಸಾಯುತ್ತಿರುವ ಕವಿಯ ಸಂದೇಶ, ಯುವಕರಿಗೆ

ಬರಲಿರುವ ಕಾಲದ ಯುವಕರೇ,
ಇನ್ನೂ ಕಟ್ಟದಿರುವ ನಗರಗಳಲ್ಲಿ
ಹುಟ್ಟದಿರುವ ಎಳೆಯ ಜೀವಗಳೇ,
ಕ್ಷುದ್ರವಾಗಿ ಸತ್ತ ಈ ಮುದುಕನ ಮಾತನ್ನು ಕೇಳಿ.

ತನ್ನ ಹೊಲವನ್ನು ಉತ್ತು ಬಿತ್ತದ ರೈತನಂತೆ.
ಮನೆಯ ಚಾವಣಿಗೆ ತೊಲೆ ಕೂಡಿಸಿವುದನ್ನು ಅರ್‍ಧಕ್ಕೇ ಬಿಟ್ಟು ಓಡಿದ ಬಡಗಿಯಂತೆ

ನಾನೂ ಕಾಲ ದಂಡಮಾಡಿದೆ,
ದಿನಗಳನ್ನು ಸುಮ್ಮನೇ ಕಳೆದೆ.
ಹೇಳದೆ ಉಳಿದಿರುವುದನ್ನೆಲ್ಲ ನೀವು ಹೇಳಿ.
ಮಾಡದೆ ಉಳಿದಿರುವುದನ್ನೆಲ್ಲ ನೀವು ಮಾಡಿ.
ನನ್ನನ್ನು ಮರೆತುಬಿಡಿ. ನನ್ನ ನಿದರ್ಶನ
ನಿಮ್ಮ ದಾರಿ ತಪ್ಪಿಸದಿರಲಿ.

ಬಿತ್ತದ ಬೆಳೆಯದ ಜನರೊಂದಿಗೆ ಕೂತು
ಅವರು ಬೇಯಿಸದ ಔತಣವನ್ನು ಮೆಚ್ಚಿಮೆಚ್ಚಿ ಉಂಡೆ, ಏಕೆ?
ನನ್ನ ಸುಂದರ ಸೂಕ್ತಿಗಳನ್ನು ಅವರ ಹರಟೆಗೆ
ಉಪ್ಪಿನಕಾಯಿ ಹಾಗೆ ಒದಗಿಸಿದೆ, ಏಕೆ?
ಅಕ್ಷರಕ್ಕಾಗಿ ಹಸಿದವರು, ಕವಿತೆಗೆ ಬಾಯಾರಿದವರು
ಬೀದಿಯಲ್ಲಿ ಸುಮ್ಮನೇ ಸುತ್ತುತ್ತಿದ್ದರು.

ಊರುಗಳನ್ನು ಕಟ್ಟುವ ಎಡೆಯಲ್ಲಿ ನನ್ನ ಕವಿತೆಯೇಕೆ ಚಿಗುರುವುದಿಲ್ಲ?
ವೇಗವಾಗಿ ಓಡುವ ಸಿಟಿಯ ರೈಲುಗಳ ಹೊಗೆ
ಆಕಾಶದಲ್ಲಿ ಒಂದಷ್ಟು ಕಾಲ ಉಳಿಯುವಂತೆ
ನನ್ನೆ ಕವಿತೆಯೇಕೆ ಉಳಿಯುವುದಿಲ್ಲ?

ದುಡಿವವರ ಪಾಲಿಗೆ ನನ್ನ ಮಾತು
ಬಾಯಿಗೆ ಹೊಯ್ದ ಬೂದಿಯಂತೆ,
ಕುಡುಕನ ತೊದಲಿನಂತೆ.

ಯುವಕರೇ, ನಿಮಗೆ ಒಂದು ನುಡಿಯನ್ನೂ ಕಲಿಸಲಾರೆ.
ನಡುಗುವ ಬೆರಳೆತ್ತಿ ಇಗೋ ಈ ದಾರಿ ಸರಿ ಎವ್ನಲಾರೆ.
ಎಂದೂ ಎಲ್ಲೂ ಹೋಗದವನು ದಾರಿ ಹೇಗೆ ತೋರಬಲ್ಲ?

ಬದುಕು ದಂಡ ಮಾಡಿದವನು ನಾನು ಹೇಳುವುದಿಷ್ಟೆ-
ನಮ್ಮ ಕೊಳೆತ ಬಾಯಿ ಮುಕ್ಕಳಿಸುವ ಯಾವ ಮಾತನ್ನೂ ಕೇಳಬೇಡಿ.
ಸೋತ ಬೇಸತ್ತ ನಮ್ಮ ಯಾವ ಆದೇಶವನ್ನೂ ಪಾಲಿಸಬೇಡಿ.

ನಾವು ಹಾಳು ಮಾಡಿದ ಹೊಲ ಮತ್ತೆ ವಸುಂಧರೆಯಾಗಲು,
ನಾವು ವಿಷ ತುಂಬಿದ ನಗರ ಜನ ಬದುಕಲು ಯೋಗ್ಯವಾಗಲು
ಏನು ಮಾಡಿದರೆ ಒಳಿತೆಂದು ನಿಮಗೆ ತೋರುವುದೋ ಹಾಗೆ ಮಾಡಿ.
*****
ಮೂಲ: ಬೆರ್ಟಾಲ್ಟ್ ಬ್ರೆಖ್ಟ್ / Bertolt Brecht

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...