Home / ಕವನ / ಅನುವಾದ / ಸಾಯುತ್ತಿರುವ ಕವಿಯ ಸಂದೇಶ, ಯುವಕರಿಗೆ

ಸಾಯುತ್ತಿರುವ ಕವಿಯ ಸಂದೇಶ, ಯುವಕರಿಗೆ

ಬರಲಿರುವ ಕಾಲದ ಯುವಕರೇ,
ಇನ್ನೂ ಕಟ್ಟದಿರುವ ನಗರಗಳಲ್ಲಿ
ಹುಟ್ಟದಿರುವ ಎಳೆಯ ಜೀವಗಳೇ,
ಕ್ಷುದ್ರವಾಗಿ ಸತ್ತ ಈ ಮುದುಕನ ಮಾತನ್ನು ಕೇಳಿ.

ತನ್ನ ಹೊಲವನ್ನು ಉತ್ತು ಬಿತ್ತದ ರೈತನಂತೆ.
ಮನೆಯ ಚಾವಣಿಗೆ ತೊಲೆ ಕೂಡಿಸಿವುದನ್ನು ಅರ್‍ಧಕ್ಕೇ ಬಿಟ್ಟು ಓಡಿದ ಬಡಗಿಯಂತೆ

ನಾನೂ ಕಾಲ ದಂಡಮಾಡಿದೆ,
ದಿನಗಳನ್ನು ಸುಮ್ಮನೇ ಕಳೆದೆ.
ಹೇಳದೆ ಉಳಿದಿರುವುದನ್ನೆಲ್ಲ ನೀವು ಹೇಳಿ.
ಮಾಡದೆ ಉಳಿದಿರುವುದನ್ನೆಲ್ಲ ನೀವು ಮಾಡಿ.
ನನ್ನನ್ನು ಮರೆತುಬಿಡಿ. ನನ್ನ ನಿದರ್ಶನ
ನಿಮ್ಮ ದಾರಿ ತಪ್ಪಿಸದಿರಲಿ.

ಬಿತ್ತದ ಬೆಳೆಯದ ಜನರೊಂದಿಗೆ ಕೂತು
ಅವರು ಬೇಯಿಸದ ಔತಣವನ್ನು ಮೆಚ್ಚಿಮೆಚ್ಚಿ ಉಂಡೆ, ಏಕೆ?
ನನ್ನ ಸುಂದರ ಸೂಕ್ತಿಗಳನ್ನು ಅವರ ಹರಟೆಗೆ
ಉಪ್ಪಿನಕಾಯಿ ಹಾಗೆ ಒದಗಿಸಿದೆ, ಏಕೆ?
ಅಕ್ಷರಕ್ಕಾಗಿ ಹಸಿದವರು, ಕವಿತೆಗೆ ಬಾಯಾರಿದವರು
ಬೀದಿಯಲ್ಲಿ ಸುಮ್ಮನೇ ಸುತ್ತುತ್ತಿದ್ದರು.

ಊರುಗಳನ್ನು ಕಟ್ಟುವ ಎಡೆಯಲ್ಲಿ ನನ್ನ ಕವಿತೆಯೇಕೆ ಚಿಗುರುವುದಿಲ್ಲ?
ವೇಗವಾಗಿ ಓಡುವ ಸಿಟಿಯ ರೈಲುಗಳ ಹೊಗೆ
ಆಕಾಶದಲ್ಲಿ ಒಂದಷ್ಟು ಕಾಲ ಉಳಿಯುವಂತೆ
ನನ್ನೆ ಕವಿತೆಯೇಕೆ ಉಳಿಯುವುದಿಲ್ಲ?

ದುಡಿವವರ ಪಾಲಿಗೆ ನನ್ನ ಮಾತು
ಬಾಯಿಗೆ ಹೊಯ್ದ ಬೂದಿಯಂತೆ,
ಕುಡುಕನ ತೊದಲಿನಂತೆ.

ಯುವಕರೇ, ನಿಮಗೆ ಒಂದು ನುಡಿಯನ್ನೂ ಕಲಿಸಲಾರೆ.
ನಡುಗುವ ಬೆರಳೆತ್ತಿ ಇಗೋ ಈ ದಾರಿ ಸರಿ ಎವ್ನಲಾರೆ.
ಎಂದೂ ಎಲ್ಲೂ ಹೋಗದವನು ದಾರಿ ಹೇಗೆ ತೋರಬಲ್ಲ?

ಬದುಕು ದಂಡ ಮಾಡಿದವನು ನಾನು ಹೇಳುವುದಿಷ್ಟೆ-
ನಮ್ಮ ಕೊಳೆತ ಬಾಯಿ ಮುಕ್ಕಳಿಸುವ ಯಾವ ಮಾತನ್ನೂ ಕೇಳಬೇಡಿ.
ಸೋತ ಬೇಸತ್ತ ನಮ್ಮ ಯಾವ ಆದೇಶವನ್ನೂ ಪಾಲಿಸಬೇಡಿ.

ನಾವು ಹಾಳು ಮಾಡಿದ ಹೊಲ ಮತ್ತೆ ವಸುಂಧರೆಯಾಗಲು,
ನಾವು ವಿಷ ತುಂಬಿದ ನಗರ ಜನ ಬದುಕಲು ಯೋಗ್ಯವಾಗಲು
ಏನು ಮಾಡಿದರೆ ಒಳಿತೆಂದು ನಿಮಗೆ ತೋರುವುದೋ ಹಾಗೆ ಮಾಡಿ.
*****
ಮೂಲ: ಬೆರ್ಟಾಲ್ಟ್ ಬ್ರೆಖ್ಟ್ / Bertolt Brecht

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...