Home / ಕವನ / ಅನುವಾದ / ಸಾಯುತ್ತಿರುವ ಕವಿಯ ಸಂದೇಶ, ಯುವಕರಿಗೆ

ಸಾಯುತ್ತಿರುವ ಕವಿಯ ಸಂದೇಶ, ಯುವಕರಿಗೆ

ಬರಲಿರುವ ಕಾಲದ ಯುವಕರೇ,
ಇನ್ನೂ ಕಟ್ಟದಿರುವ ನಗರಗಳಲ್ಲಿ
ಹುಟ್ಟದಿರುವ ಎಳೆಯ ಜೀವಗಳೇ,
ಕ್ಷುದ್ರವಾಗಿ ಸತ್ತ ಈ ಮುದುಕನ ಮಾತನ್ನು ಕೇಳಿ.

ತನ್ನ ಹೊಲವನ್ನು ಉತ್ತು ಬಿತ್ತದ ರೈತನಂತೆ.
ಮನೆಯ ಚಾವಣಿಗೆ ತೊಲೆ ಕೂಡಿಸಿವುದನ್ನು ಅರ್‍ಧಕ್ಕೇ ಬಿಟ್ಟು ಓಡಿದ ಬಡಗಿಯಂತೆ

ನಾನೂ ಕಾಲ ದಂಡಮಾಡಿದೆ,
ದಿನಗಳನ್ನು ಸುಮ್ಮನೇ ಕಳೆದೆ.
ಹೇಳದೆ ಉಳಿದಿರುವುದನ್ನೆಲ್ಲ ನೀವು ಹೇಳಿ.
ಮಾಡದೆ ಉಳಿದಿರುವುದನ್ನೆಲ್ಲ ನೀವು ಮಾಡಿ.
ನನ್ನನ್ನು ಮರೆತುಬಿಡಿ. ನನ್ನ ನಿದರ್ಶನ
ನಿಮ್ಮ ದಾರಿ ತಪ್ಪಿಸದಿರಲಿ.

ಬಿತ್ತದ ಬೆಳೆಯದ ಜನರೊಂದಿಗೆ ಕೂತು
ಅವರು ಬೇಯಿಸದ ಔತಣವನ್ನು ಮೆಚ್ಚಿಮೆಚ್ಚಿ ಉಂಡೆ, ಏಕೆ?
ನನ್ನ ಸುಂದರ ಸೂಕ್ತಿಗಳನ್ನು ಅವರ ಹರಟೆಗೆ
ಉಪ್ಪಿನಕಾಯಿ ಹಾಗೆ ಒದಗಿಸಿದೆ, ಏಕೆ?
ಅಕ್ಷರಕ್ಕಾಗಿ ಹಸಿದವರು, ಕವಿತೆಗೆ ಬಾಯಾರಿದವರು
ಬೀದಿಯಲ್ಲಿ ಸುಮ್ಮನೇ ಸುತ್ತುತ್ತಿದ್ದರು.

ಊರುಗಳನ್ನು ಕಟ್ಟುವ ಎಡೆಯಲ್ಲಿ ನನ್ನ ಕವಿತೆಯೇಕೆ ಚಿಗುರುವುದಿಲ್ಲ?
ವೇಗವಾಗಿ ಓಡುವ ಸಿಟಿಯ ರೈಲುಗಳ ಹೊಗೆ
ಆಕಾಶದಲ್ಲಿ ಒಂದಷ್ಟು ಕಾಲ ಉಳಿಯುವಂತೆ
ನನ್ನೆ ಕವಿತೆಯೇಕೆ ಉಳಿಯುವುದಿಲ್ಲ?

ದುಡಿವವರ ಪಾಲಿಗೆ ನನ್ನ ಮಾತು
ಬಾಯಿಗೆ ಹೊಯ್ದ ಬೂದಿಯಂತೆ,
ಕುಡುಕನ ತೊದಲಿನಂತೆ.

ಯುವಕರೇ, ನಿಮಗೆ ಒಂದು ನುಡಿಯನ್ನೂ ಕಲಿಸಲಾರೆ.
ನಡುಗುವ ಬೆರಳೆತ್ತಿ ಇಗೋ ಈ ದಾರಿ ಸರಿ ಎವ್ನಲಾರೆ.
ಎಂದೂ ಎಲ್ಲೂ ಹೋಗದವನು ದಾರಿ ಹೇಗೆ ತೋರಬಲ್ಲ?

ಬದುಕು ದಂಡ ಮಾಡಿದವನು ನಾನು ಹೇಳುವುದಿಷ್ಟೆ-
ನಮ್ಮ ಕೊಳೆತ ಬಾಯಿ ಮುಕ್ಕಳಿಸುವ ಯಾವ ಮಾತನ್ನೂ ಕೇಳಬೇಡಿ.
ಸೋತ ಬೇಸತ್ತ ನಮ್ಮ ಯಾವ ಆದೇಶವನ್ನೂ ಪಾಲಿಸಬೇಡಿ.

ನಾವು ಹಾಳು ಮಾಡಿದ ಹೊಲ ಮತ್ತೆ ವಸುಂಧರೆಯಾಗಲು,
ನಾವು ವಿಷ ತುಂಬಿದ ನಗರ ಜನ ಬದುಕಲು ಯೋಗ್ಯವಾಗಲು
ಏನು ಮಾಡಿದರೆ ಒಳಿತೆಂದು ನಿಮಗೆ ತೋರುವುದೋ ಹಾಗೆ ಮಾಡಿ.
*****
ಮೂಲ: ಬೆರ್ಟಾಲ್ಟ್ ಬ್ರೆಖ್ಟ್ / Bertolt Brecht

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...