Home / ಲೇಖನ / ಇತರೆ / ಸುಧಾರಣೆ ಎಲ್ಲಿಂದ?

ಸುಧಾರಣೆ ಎಲ್ಲಿಂದ?

ಪ್ರಿಯ ಸಖಿ,

ಸಮಾಜವಾದಿಗಳನ್ನು ಸದಾ ಕಾಡುತ್ತಾ ಬಂದಿರುವ ವಿಷಯವೆಂದರೆ ಸಮಾಜ ಸುಧಾರಣೆಯನ್ನು ವ್ಯಕ್ತಿಯಿಂದ ಪ್ರಾರಂಭಿಸಬೇಕೋ, ಸಮುದಾಯದಿಂದ ಪ್ರಾರಂಭಿಸಬೇಕೋ ಎಂಬುದು. ಸಹಜವಾಗೇ ಇದಕ್ಕೆ ಪೂರ್ವಪರವಾದಗಳೂ ಇವೆ. ಸಮುದಾಯದಿಂದ ಸುಧಾರಣೆ ಆಗಬೇಕೆನ್ನುವವರು, ಸಮಾಜದಲ್ಲಿ ಅನೇಕ ಅನಿಷ್ಟಗಳಿವೆ. ಅವುಗಳನ್ನೆಲ್ಲಾ ಸಂಘಟನೆಯ ಮೂಲಕ, ಸಮುದಾಯ ಜಾಗೃತಿಯ ಮೂಲಕ, ಸಿದ್ಧಾಂತಗಳನ್ನು ಅಳವಡಿಸುವ ಮೂಲಕ ಸರಿಪಡಿಸಬೇಕೆನ್ನುತ್ತಾರೆ. ಸಾಮಾಜಿಕ ಕ್ರಾಂತಿಯಿಂದ ಮಾತ್ರ ಸಮಾಜ ಸುಧಾರಣೆಯನ್ನುವುದು ಇವರ ವಾದ. ಆದರೆ ವ್ಯಕ್ತಿ ಸುಧಾರಣೆಯಿಂದ ಮಾತ್ರ ಸಮಾಜ ಸುಧಾರಣೆಯೆಂದು ನಂಬಿರುವವರು ಸಮಾಜದ ಅನಿಷ್ಟಕ್ಕೆ ಇತರರು ಹೇಗೆ ಜವಾಬ್ದಾರರೋ ನಾನೂ ಅಷ್ಟೇ ಜವಾಬ್ದಾರ ಹೀಗಾಗಿ ಮೊದಲು ನಾನು ಸರಿ ಹೋಗಬೇಕು. ನಂತರ ಸಮಾಜವನ್ನು ತಿದ್ದುವ ಪ್ರಯತ್ನ ಎನ್ನುತ್ತಾರೆ.

ಎರಡೂ ವಾದಗಳೂ ಅವರವರ ಮೂಗಿನ ನೇರಕ್ಕೆ ಸರಿಯೆನಿಸಿದರೂ ಎರಡೂ ವಾದಗಳಿಗೂ ತನ್ನದೇ ಆದ ಮಿತಿಗಳೂ ಇವೆ. ಸಾಮಾಜಿಕ ಕ್ರಾಂತಿಯ ಹುಟ್ಟು ಬೀದಿಗಳಲ್ಲಿ ಆಗುವುದಿಲ್ಲ. ಮನೆಗಳಲ್ಲಿ ಆಗಬೇಕು. ಮನಸ್ಸಿನಲ್ಲಿ ಆಗಬೇಕು ಎಂಬುದು ಒಂದು ವಾದವಾದರೆ, ಸಾಮಾಜಿಕ ಕ್ರಾಂತಿಯಿಂದ ಇಡೀ ಸಮುದಾಯವೇ ಒಳಿತಿನತ್ತ, ಸತ್ಯದ ಹಾದಿಯಲ್ಲಿ ನಡೆಯುವಂತಾದಾಗ ಅಲ್ಲಿ ಸಮಷ್ಠಿ ಪ್ರಜ್ಞೆಯೇ ಮುಖ್ಯವಾಗುತ್ತದೆಯೇ ಹೊರತು ವ್ಯಕ್ತಿಯಲ್ಲ ಎನ್ನುತ್ತದೆ ಇನ್ನೊಂದು ವಾದ. ಸಖಿ, ಆದರೆ ಹಲವು ವ್ಯಕ್ತಿಗಳ ಒಂದು ಸಮುದಾಯ ಎಂಬುದನ್ನು ನಾವು ಮರೆಯುವಂತಿಲ್ಲ. ಒಂದು ಸಂಘಟನೆ, ಸಮುದಾಯ ಇಡಿಯಾಗಿ ಹೇಗೆ ನಡೆದುಕೊಂಡರೂ ಅದರಲ್ಲಿನ ವ್ಯಕ್ತಿಗಳು ಭಿನ್ನರೇ. ಅನನ್ಯರೇ. ಎಲ್ಲರಿಗೂ ಅವರದೇ ಆದ ವ್ಯಕ್ತಿತ್ವಗಳಿರುತ್ತವೆ ನಂಬಿಕೆಗಳಿರುತ್ತವೆ. ದೃಷ್ಟಿಕೋನಗಳಿರುತ್ತವೆ. ಕೆಟ್ಟ, ಒಳ್ಳೆಯ ಸ್ವಭಾವಗಳೂ ಇರುತ್ತವೆ.

ತಾನು ಸಂಫಟನೆಯ ಮೂಲಕ ಹೇಳುವ ಸಿದ್ಧಾಂತಗಳಿಗೆ, ತತ್ವಗಳಿಗೆ ಅವನು ವ್ಯಕ್ತಿಯಾಗಿ ತನ್ನ ವೈಯಕ್ತಿಕ ಬದುಕಿನಲ್ಲಿ ಬದ್ಧನಾಗಿದ್ದಾಗ ಮಾತ್ರ ಅವನಿಗೆ ಅದನ್ನು ಇತರರಿಗೆ ಬೋಧಿಸುವ, ಉಪದೇಶಿಸುವ ನೈತಿಕ ಹಕ್ಕಿರುತ್ತದೆ.

ಅದಿಲ್ಲದೆ ನಾನು ನನ್ನ ಇಷ್ಟಬಂದಂತೆ ಬದುಕುತ್ತೇನೆ. ನೀವು ಮಾತ್ರ ಹೀಗೇ ಬದುಕಿ ಎಂದು ಹೇಳಲು ಅವನಿಗೆ ಯಾವ ಅಧಿಕಾರವೂ ಇರುವುದಿಲ್ಲ. ತನ್ನ ಬದುಕಿನಲ್ಲಿ ತತ್ವಗಳಿಗೆ ಬದ್ಧನಾಗಿಲ್ಲದ ವ್ಯಕ್ತಿ ಉಪದೇಶಿಸಲು ನಿಂತಾಗ ಸಮಾಜ ಅವನನ್ನು ನೀನೆಷ್ಟು ಸರಿ? ಎಂದು ಪ್ರಶ್ನಿಸುವುದಿಲ್ಲವೇ?

ನುಡಿದಂತೆ ನಡೆದೂ ತೋರಿದ, ತನ್ನ ಬದುಕಿನಲ್ಲಿ ಅಳವಡಿಸಿಕೊಂಡ ಸತ್ಯ, ತತ್ವಗಳನ್ನಷ್ಟೇ ಇತರರಿಗೂ ಬೋಧಿಸಿದ, ಬೇಕಿದ್ದರೆ ಪ್ರಾಣ ಬಿಟ್ಟೇನು, ತಾನು ಬದುಕಿನಲ್ಲಿ ನಂಬಿರುವ, ಬದ್ಧನಾಗಿರುವ ತತ್ವಗಳನ್ನಲ್ಲ ಎಂದು ನಂಬಿದ್ದ ಮಹಾತ್ಮಾ ಗಾಂಧಿ ಯಂತಹವರು ಅದಕ್ಕೇ ನಮಗೆ ಇಂದಿಗೂ ಪ್ರಿಯರಾಗುತ್ತಾರೆ ಹಾಗೂ ಪ್ರಸ್ತುತರಾಗುತ್ತಾರೆ.

ಬೀದಿಯಲ್ಲಿ ನಿಂತು ಮೂಢನಂಬಿಕೆಗಳ ವಿರುದ್ಧ ಭಾಷಣ ಬಿಗಿದು, ಘೋಷಣೆ ಕೂಗಿದವನು, ತಾನೇ ಮೂಢನಂಬಿಕೆಗಳ ದಾಸನಾಗಿದ್ದರೆ, ತನ್ನ ಮನೆಯಲ್ಲಿ ತಾಂಡವವಾಡುತ್ತಿರುವ ಮೂಢನಂಬಿಕೆಯ ಒಂದು ಕಡ್ಡಿಯನ್ನೂ ಅಲುಗಿಸಲು ಸಾಧ್ಯವಾಗದಿದ್ದರೆ ಇಂತಹವನ ಮಾತುಗಳನ್ನು ಮಾತ್ರ ಕೇಳಿ ಯಾವ ಕ್ರಾಂತಿಯಾಗುತ್ತದೆ? ಸಖಿ ಸುಧಾರಣೆ ಎಲ್ಲಿಂದ? ಎಂಬುದನ್ನು ಈಗ ನೀನೇ ನಿರ್ಧರಿಸು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...