Home / ಲೇಖನ / ವಿಜ್ಞಾನ / ಅಂಗವಿಕಲರಿಗೆ ದಾರಿದೀಪ : ಅಂಗ ಸಾಧನ

ಅಂಗವಿಕಲರಿಗೆ ದಾರಿದೀಪ : ಅಂಗ ಸಾಧನ

ಅಂಗವಿಕಲರೆ ಆಗಿರಲಿ, ಮುದುಕರೆ ಆಗಿರಲಿ, ಹೆಳವರೇ ಆಗಿರಲಿ, ಅವರಿಗೆಲ್ಲ ಮಾರ್ಗದರ್ಶಕನಂತೆ ಗುರಿ ತೋರಿಸುವ ವಿನೂತವಾದ ಸಂಪರ್ಕ ಸಾಧನವನ್ನು ಇತ್ತೀಚಿಗೆ ಕಂಡು ಹಿಡಿಯಲಾಗಿದೆ. ಇದನ್ನು ಹಿಡಿದುಕೊಂಡು ಕಣ್ಣಿದ್ದವರಿಗಿಂತಲೂ ಸಲೀಸಾಗಿ ಎಂಥಹ ಜನಸಂದಣಿ ಮತ್ತು ವಾಹನಗಳ ಭರಾಟೆಗಳನ್ನು ಭೇಧಿಸಿ ಹೋಗಬಹುದು ಎನ್ನುತ್ತಾರೆ ವಿಜ್ಞಾನಿಗಳು. ಬ್ರಿಟನ್ನಿನಲ್ಲಿ ಸಂಶೋಧಿಸಲ್ಪಟ್ಟ ಈ ಸಾಧನವನ್ನು ಜರ್ಮನಿಯಲ್ಲಿ ತಯಾರಿಸಲಾಗುತ್ತದೆ.

ಈ ಮೊದಲು ಅಮೇರಿಕ ಮತ್ತು ರಷಿಯಾ ರಾಷ್ಟ್ರಗಳು ಕಂಪ್ಯೂಟರ್ ಸಹಕಾರದ ಕೃತಕ ಉಪಗ್ರಹದ ಉಪಯೋಗಿಸುವ ಕ್ಷಿಪಣಿಗಳನ್ನು ಮಿಲಿಟರಿ ಕಾರ್ಯಾಚರಣೆಗೆ ತಯಾರಿಸುತ್ತಿದ್ದರು. ನಗರದ ಭೂಪಟದಲ್ಲಿ ನಾವು ತಲುಪಬೇಕಾದ ಪ್ರದೇಶವನ್ನು ಗುರುತಿಸಿದಾಗ ಕಂಪ್ಯೂಟರ್ ಅದನ್ನು ಗುರುತಿಸಿ ಆ ಪ್ರದೇಶಕ್ಕೆ ಹೋಗುವಾಗ ಇರುವ ಅಡೆತಡೆಗಳನ್ನು ಕೂಡ ತಿಳಿಸುವ ಸಾಮರ್ಥ್ಯ ಹೊಂದಿರುತ್ತದೆ. ಬಾಹ್ಯಾಕಾಶದಲ್ಲಿ ಭೂಪ್ರದಕ್ಷಿಣೆ ಹಾಕುತ್ತಿರುವ ವಿಶ್ವಸೂಚಿ ವ್ಯವಸ್ಥೆಯನ್ನು (Global positioning System) ಹೊಂದಿದ ಕೃತಕ ಉಪಗ್ರಹಗಳ ನೆರವಿನಿಂದ ಅಂಧರು ತಮ್ಮ ದೇಹಕ್ಕೆ ಅಳವಡಿಸಿಕೊಳ್ಳುವ ಸಾಧನ ‘ಮೊಬಿಕ್’ (Mobic) ನಲ್ಲಿರುವ ಭೂಪಟದಲ್ಲಿ ಇರುವ ಮಾರ್ಗವನ್ನು ಕಂಪ್ಯೂಟರ್ ಮೂಲಕ ಅರಿತುಕೊಳ್ಳುತ್ತಾರೆ. ಈ ಕಂಪ್ಯೂಟರ್ ಅಂಧರ ದೇಹದ ಸಂವೇಧನೆಗಳಿಗೆ ಸಂಪರ್ಕ ಹೊಂದಿದವರಿಗೆ ದಾರಿ ತೋರಿಸುತ್ತದೆ.

ಇಂಥಹ ಮೊಬಿಕ್, ಸಾಧನಗಳು ಜಗತ್ತಿನಲ್ಲಿರುವ ಕೋಟ್ಯಾಂತರ ಅಂಧರ, ಅಂಗವಿಕಲರ, ವೃದ್ಧರ ಆಶಾಕಿರಣವಾದರೆ ಕೆಲವಷ್ಟು ಸಮಸ್ಯೆಗಳು ಪರಿಹಾರವಾಗಬಹುದು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...