Home / ಲೇಖನ / ವಿಜ್ಞಾನ / ಗಿಡ್ಡಕಾಲುಗಳನ್ನು ಲಂಬಗೂಳಿಸುವ ಲಿಂಟ್ ಚಿಕಿತ್ಸೆ

ಗಿಡ್ಡಕಾಲುಗಳನ್ನು ಲಂಬಗೂಳಿಸುವ ಲಿಂಟ್ ಚಿಕಿತ್ಸೆ

“ನಾನು ಕುಳ್ಳಾಗಿದ್ದೇನೆ, ಇನ್ನಷ್ಟು ಎತ್ತರವಿದ್ದರೆ ಎಷ್ಟು ಚೆನ್ನ?” ಎಂದು ಕುಳ್ಳರು ಅನೇಕ ಬಾರಿ ಅಂದುಕೊಂಡಿರುತ್ತಾರೆ. ಅಲ್ಲವೇ ಆದರೆ ವ್ಯಕ್ತಿಯ ದೇಹದ ಉದ್ದ ಅಥವಾ ಗಿಡ್ಡಗೊಳ್ಳುವ ಕ್ರಿಯೆ ನಡೆದು ನಿಲ್ಲುವುದು ೧೮ ನೇ ವರ್ಷದೂಳಗೆ. ಅಂಜಬೇಕಿಲ್ಲ, ಆತಂಕ ಪಡಬೇಕಿಲ್ಲ ಖರ್ಚು ಮಾಡಿ ಚಿಕಿತ್ಸೆಗೆ ಸಿದ್ಧರಿದ್ದರೆ ಆಯಿತು. ಕನಿಷ್ಟ ೪ ಇಂಚು ತನಕ ನ್ಯಾಚುರಲ್ ಆಗಿಯೇ ಬೆಳೆಯಬಹುದು. ಕೇವಲ ಕುಳ್ಳರಿರುವರಿಗಷ್ಟೇ ಅಲ್ಲ ಕಾಲುಗಳು ಅಸಮವಾಗಿದ್ದು ಗಟ್ಟಿ ಇದ್ದರೂ ಕುಂಟುತ್ತ ನಡೆಯುವವರಿಗೂ ಈ ಚಿಕಿತ್ಸೆ ವರದಾನವಾಗಿದೆ. ಕುಳ್ಳರೆಂದು ನಾಚಿಕೆ ಪಡುವ ಭಯವಿಲ್ಲದೇ ನಾನು ಯಾರಿಗೇನು ಕಡಿಮೆ ಎಂದು ಬೀಗಬಹುದು. ಆದರೆ ಕಾಲನ್ನು ಉದ್ದಗೊಳಿಸುವ ಚಿಕಿತ್ಸೆಯನ್ನು ೧೬ ರಿಂದ ೩೫ ವರ್ಷದೊಳಗಿರುವವರು ಮಾತ್ರ ಮಾಡಿಸಿಕೊಳ್ಳಬೇಕಾಗುತ್ತದೆ.

ಇಂಥಹ ಆಶಾದಾಯಕವಾದ ಕುಳ್ಳರಿಗೆ ವರದಾನವಾದ ಚಿಕಿತ್ಸೆಯನ್ನು ರಷ್ಯದ ಲಿಜಾರೊವ್ ಅವರು ಮೊದಲಿಗೆ ಕಂಡು ಹಿಡಿದರು. ಇವರು ಅಪ್ರತಿಮ ಮೂಳೆ ತಜ್ಞರೆಂದು ವಿಶ್ವವಿಖ್ಯಾತಿ ಪಡೆದವರು. ಕೃತಕ ವ್ಯವಸ್ಥೆಯು ಮುರಿದ ಮೂಳೆಗಳನ್ನು ಜೋಡಿಸುವುದು, ಸರಿಪಡಿಸುವುದು ಇದ್ದದ್ದೇ ಆದರೂ ಸಹಜವಾಗಿ ನಿಂತುಹೋಗಿರುವ ಮೂಳೆಗಳ ಬೆಳವಣಿಗೆಯನ್ನು ಮತ್ತೆ ವೃದ್ಧಿಗೊಳಿಸುವುದೇ ಈ ಚಿಕಿತ್ಸೆಯ ಸಾಧನೆಯಾಗಿದೆ.

ಮೊಳಕಾಲಿನ ಕೆಳಗಿರುವ ಮೂಳೆಗೆ ೧.೮ ಮಿಲಿಮೀಟರ್ ನ್ಯಾಸದ ತಂತಿಗಳನ್ನು ಪೋಣಿಸಿ ಅದನ್ನು ಕಾಲಿಗೆ ಜೋಡಿಸಿರುವ ಪಿಕ್ಸರ್‌ಗಳ ತಿರುಗುಣೆಗೆ ಸುತ್ತಿ ಮೇಲ್ಮುಖ ಒತ್ತಡ ಸೃಷ್ಟಿ ಮಾಡುವುದೇ ಈ ಶಸ್ತ್ರ ಚಿಕಿತ್ಸೆಯ ಒಳಗುಟ್ಟು. ಪಿಕ್ಸರ್‌ಗಿರುವ ತಂತಿ ಸುತ್ತಿದ ತಿರುಗಣೆಗೆಗಳನ್ನು ಸ್ಪಾನರ್‌ನಿಂದ ಪ್ರತಿನಿತ್ಯ ಒಂದು ಸುತ್ತು ತಿರುಗಿಸುತ್ತ ಹೋದರೆ ಮೂಳೆಗಳ ಮೇಲೆ ಒತ್ತಡ ಉಂಟಾಗಿ ಸಹಜವಾಗಿಯೇ ಬೆಳೆಯತೊಡಗುತ್ತವೆ. ಕಾಲಿನ ಏಡಿಯ ಮೇಲಿರುವ ಮೂಳೆಗೂ ತಂತಿ ಜೋಡಿಸಿ, ತಂತಿಯನ್ನು ಹೊರಕ್ಕೆಳೆದು ಪಿಕ್ಸ್‌ರ್‌ಗೆ ಜೋಡಿಸಿ ‌ಇಡೀ ಮೂಳೆಯ ಮೇಲೆ ಒತ್ತಡ ಸ್ಪಷ್ಟಿಸಿದಾಗ ಸಹಜವಾಗಿಯೇ ಅದು ಬೆಳೆಯಲು ಆರಂಭ ವಾಗುತ್ತದೆ. ಹೀಗೆ ಮೊಳಕಾಲಿನ ಕೀಲು, ಪಾದದ ಕೀಲುಗಳಲ್ಲಿಯೂ ಇಂಚುಗಳಷ್ಟು ಕಾಲನ್ನು ಬೆಳೆಸಬಹುದು. ಮೂಳೆಯನ್ನು ಮತ್ತೆ ಬೆಳಸಬೇಕೆಂದರೆ ಇನ್ನು ೬ ತಿಂಗಳ ನಂತರ ಇಂಥಹ ಚಿಕಿತ್ಸೆ ಮಾಡಬೇಕಾಗುತ್ತದೆ. ಒಮ್ಮೆ ಚಿಕಿತ್ಸೆಗೆ ಒಳಗಾದ ವ್ಯಕ್ತಿ ಮತ್ತೊಮ್ಮೆ ಚಿಕಿತ್ಸೆ ಪಡೆಯಬೇಕಾದರೆ ೮ ತಿಂಗಳ ಅಂತರವಾದರೂ ಬೇಕು. ಯಾವುದೇ ರೀತಿಯ ಶಸ್ತ್ರ ಚಿಕಿತ್ಸೆ ಔಷಧಿ ಹಾಗೂ ಕೃತಕ ವಸ್ತುಗಳನ್ನು ಬೆಳೆಸದೇ ನಡೆಸಲಾಗುವ ಇಂಥಹ ಚಿಕಿತ್ಸೆಯಿಂದ ಯಾವುದೇ ಅಪಾಯವಿಲ್ಲ. ಪೂರ್ಣ ಚಕಿತ್ಸೆಗೆ ತಗಲುವ ವೆಚ್ಚ ೩೫ ರಿಂದ ೫೦ ಸಾವಿರ ರೂಪಾಯಿಗಳು.

ಭಾರತದಲ್ಲಿ ಇಂಥಹ ಯಶಸ್ವಿ ಚಿಕಿತ್ಸೆ ನಡೆಸುತ್ತಿರುವ ದಾ|| ರಾಜೀವ್ ಶರ್ಮ ಅವರು ನೇರವಾಗಿ ರಷ್ಯದ ತಜ್ಞ ಪ್ರೊ. ಜಿ.ಎ. ಲಿಜಾರೋವ್ ಅವರಿಂದ ತರಬೇತಿ ಪಡೆದು ಬಂದವರು. ಭಾರತದ ಮಟ್ಟಕ್ಕೆ ಮೂಳೆ ಬೆಳೆಸುವ ಚಿಕಿತ್ಸೆಯಲ್ಲಿ ಪಾರಂಗತರು. ಇವರ ಚಿಕಿತ್ಸೆಯಲ್ಲಿ ಈಗಾಗಲೇ ಗಿಡ್ಡಕಾಲಿನ ಹೆಣ್ಣು ಅಥವಾ ಗಂಡುಗಳ ಚಿಕಿತ್ಸೆಯ ಪರಿಮಿತಿಯಲ್ಲಿ ತೊಡಗಿ ಗುಣಮುಖರಾಗಿದ್ದಾರೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...