Home / ಲೇಖನ / ವಿಜ್ಞಾನ / ಗಿಡ್ಡಕಾಲುಗಳನ್ನು ಲಂಬಗೂಳಿಸುವ ಲಿಂಟ್ ಚಿಕಿತ್ಸೆ

ಗಿಡ್ಡಕಾಲುಗಳನ್ನು ಲಂಬಗೂಳಿಸುವ ಲಿಂಟ್ ಚಿಕಿತ್ಸೆ

“ನಾನು ಕುಳ್ಳಾಗಿದ್ದೇನೆ, ಇನ್ನಷ್ಟು ಎತ್ತರವಿದ್ದರೆ ಎಷ್ಟು ಚೆನ್ನ?” ಎಂದು ಕುಳ್ಳರು ಅನೇಕ ಬಾರಿ ಅಂದುಕೊಂಡಿರುತ್ತಾರೆ. ಅಲ್ಲವೇ ಆದರೆ ವ್ಯಕ್ತಿಯ ದೇಹದ ಉದ್ದ ಅಥವಾ ಗಿಡ್ಡಗೊಳ್ಳುವ ಕ್ರಿಯೆ ನಡೆದು ನಿಲ್ಲುವುದು ೧೮ ನೇ ವರ್ಷದೂಳಗೆ. ಅಂಜಬೇಕಿಲ್ಲ, ಆತಂಕ ಪಡಬೇಕಿಲ್ಲ ಖರ್ಚು ಮಾಡಿ ಚಿಕಿತ್ಸೆಗೆ ಸಿದ್ಧರಿದ್ದರೆ ಆಯಿತು. ಕನಿಷ್ಟ ೪ ಇಂಚು ತನಕ ನ್ಯಾಚುರಲ್ ಆಗಿಯೇ ಬೆಳೆಯಬಹುದು. ಕೇವಲ ಕುಳ್ಳರಿರುವರಿಗಷ್ಟೇ ಅಲ್ಲ ಕಾಲುಗಳು ಅಸಮವಾಗಿದ್ದು ಗಟ್ಟಿ ಇದ್ದರೂ ಕುಂಟುತ್ತ ನಡೆಯುವವರಿಗೂ ಈ ಚಿಕಿತ್ಸೆ ವರದಾನವಾಗಿದೆ. ಕುಳ್ಳರೆಂದು ನಾಚಿಕೆ ಪಡುವ ಭಯವಿಲ್ಲದೇ ನಾನು ಯಾರಿಗೇನು ಕಡಿಮೆ ಎಂದು ಬೀಗಬಹುದು. ಆದರೆ ಕಾಲನ್ನು ಉದ್ದಗೊಳಿಸುವ ಚಿಕಿತ್ಸೆಯನ್ನು ೧೬ ರಿಂದ ೩೫ ವರ್ಷದೊಳಗಿರುವವರು ಮಾತ್ರ ಮಾಡಿಸಿಕೊಳ್ಳಬೇಕಾಗುತ್ತದೆ.

ಇಂಥಹ ಆಶಾದಾಯಕವಾದ ಕುಳ್ಳರಿಗೆ ವರದಾನವಾದ ಚಿಕಿತ್ಸೆಯನ್ನು ರಷ್ಯದ ಲಿಜಾರೊವ್ ಅವರು ಮೊದಲಿಗೆ ಕಂಡು ಹಿಡಿದರು. ಇವರು ಅಪ್ರತಿಮ ಮೂಳೆ ತಜ್ಞರೆಂದು ವಿಶ್ವವಿಖ್ಯಾತಿ ಪಡೆದವರು. ಕೃತಕ ವ್ಯವಸ್ಥೆಯು ಮುರಿದ ಮೂಳೆಗಳನ್ನು ಜೋಡಿಸುವುದು, ಸರಿಪಡಿಸುವುದು ಇದ್ದದ್ದೇ ಆದರೂ ಸಹಜವಾಗಿ ನಿಂತುಹೋಗಿರುವ ಮೂಳೆಗಳ ಬೆಳವಣಿಗೆಯನ್ನು ಮತ್ತೆ ವೃದ್ಧಿಗೊಳಿಸುವುದೇ ಈ ಚಿಕಿತ್ಸೆಯ ಸಾಧನೆಯಾಗಿದೆ.

ಮೊಳಕಾಲಿನ ಕೆಳಗಿರುವ ಮೂಳೆಗೆ ೧.೮ ಮಿಲಿಮೀಟರ್ ನ್ಯಾಸದ ತಂತಿಗಳನ್ನು ಪೋಣಿಸಿ ಅದನ್ನು ಕಾಲಿಗೆ ಜೋಡಿಸಿರುವ ಪಿಕ್ಸರ್‌ಗಳ ತಿರುಗುಣೆಗೆ ಸುತ್ತಿ ಮೇಲ್ಮುಖ ಒತ್ತಡ ಸೃಷ್ಟಿ ಮಾಡುವುದೇ ಈ ಶಸ್ತ್ರ ಚಿಕಿತ್ಸೆಯ ಒಳಗುಟ್ಟು. ಪಿಕ್ಸರ್‌ಗಿರುವ ತಂತಿ ಸುತ್ತಿದ ತಿರುಗಣೆಗೆಗಳನ್ನು ಸ್ಪಾನರ್‌ನಿಂದ ಪ್ರತಿನಿತ್ಯ ಒಂದು ಸುತ್ತು ತಿರುಗಿಸುತ್ತ ಹೋದರೆ ಮೂಳೆಗಳ ಮೇಲೆ ಒತ್ತಡ ಉಂಟಾಗಿ ಸಹಜವಾಗಿಯೇ ಬೆಳೆಯತೊಡಗುತ್ತವೆ. ಕಾಲಿನ ಏಡಿಯ ಮೇಲಿರುವ ಮೂಳೆಗೂ ತಂತಿ ಜೋಡಿಸಿ, ತಂತಿಯನ್ನು ಹೊರಕ್ಕೆಳೆದು ಪಿಕ್ಸ್‌ರ್‌ಗೆ ಜೋಡಿಸಿ ‌ಇಡೀ ಮೂಳೆಯ ಮೇಲೆ ಒತ್ತಡ ಸ್ಪಷ್ಟಿಸಿದಾಗ ಸಹಜವಾಗಿಯೇ ಅದು ಬೆಳೆಯಲು ಆರಂಭ ವಾಗುತ್ತದೆ. ಹೀಗೆ ಮೊಳಕಾಲಿನ ಕೀಲು, ಪಾದದ ಕೀಲುಗಳಲ್ಲಿಯೂ ಇಂಚುಗಳಷ್ಟು ಕಾಲನ್ನು ಬೆಳೆಸಬಹುದು. ಮೂಳೆಯನ್ನು ಮತ್ತೆ ಬೆಳಸಬೇಕೆಂದರೆ ಇನ್ನು ೬ ತಿಂಗಳ ನಂತರ ಇಂಥಹ ಚಿಕಿತ್ಸೆ ಮಾಡಬೇಕಾಗುತ್ತದೆ. ಒಮ್ಮೆ ಚಿಕಿತ್ಸೆಗೆ ಒಳಗಾದ ವ್ಯಕ್ತಿ ಮತ್ತೊಮ್ಮೆ ಚಿಕಿತ್ಸೆ ಪಡೆಯಬೇಕಾದರೆ ೮ ತಿಂಗಳ ಅಂತರವಾದರೂ ಬೇಕು. ಯಾವುದೇ ರೀತಿಯ ಶಸ್ತ್ರ ಚಿಕಿತ್ಸೆ ಔಷಧಿ ಹಾಗೂ ಕೃತಕ ವಸ್ತುಗಳನ್ನು ಬೆಳೆಸದೇ ನಡೆಸಲಾಗುವ ಇಂಥಹ ಚಿಕಿತ್ಸೆಯಿಂದ ಯಾವುದೇ ಅಪಾಯವಿಲ್ಲ. ಪೂರ್ಣ ಚಕಿತ್ಸೆಗೆ ತಗಲುವ ವೆಚ್ಚ ೩೫ ರಿಂದ ೫೦ ಸಾವಿರ ರೂಪಾಯಿಗಳು.

ಭಾರತದಲ್ಲಿ ಇಂಥಹ ಯಶಸ್ವಿ ಚಿಕಿತ್ಸೆ ನಡೆಸುತ್ತಿರುವ ದಾ|| ರಾಜೀವ್ ಶರ್ಮ ಅವರು ನೇರವಾಗಿ ರಷ್ಯದ ತಜ್ಞ ಪ್ರೊ. ಜಿ.ಎ. ಲಿಜಾರೋವ್ ಅವರಿಂದ ತರಬೇತಿ ಪಡೆದು ಬಂದವರು. ಭಾರತದ ಮಟ್ಟಕ್ಕೆ ಮೂಳೆ ಬೆಳೆಸುವ ಚಿಕಿತ್ಸೆಯಲ್ಲಿ ಪಾರಂಗತರು. ಇವರ ಚಿಕಿತ್ಸೆಯಲ್ಲಿ ಈಗಾಗಲೇ ಗಿಡ್ಡಕಾಲಿನ ಹೆಣ್ಣು ಅಥವಾ ಗಂಡುಗಳ ಚಿಕಿತ್ಸೆಯ ಪರಿಮಿತಿಯಲ್ಲಿ ತೊಡಗಿ ಗುಣಮುಖರಾಗಿದ್ದಾರೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...